Homeಮುಖಪುಟಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿರಕ್ಕೂ ಹೆಚ್ಚು ಐ.ಟಿ, ಇ.ಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ. ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ” ಎಂದಿದ್ದಾರೆ.

ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿ ಪಕ್ಷದ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಹೈಕಮಾಂಡ್‌ಗೂ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ” ಎಂದು ಹೇಳಿದ್ದಾರೆ.

“ಬಿಜೆಪಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ. ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್‌ ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ. ಜನ ಹಿಂದಿನ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ಇದರಿಂದ ಬಿಜೆಪಿಗರು ಬೆದರಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

“ಕಾಂಗ್ರೆಸ್‌ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಧುಗಿರಿ: ಕೆ.ಎನ್. ರಾಜಣ್ಣ, ವೀರಭದ್ರಯ್ಯ ನಡುವಿನ ಹಣಾಹಣಿಗೆ ಬಿಜೆಪಿ ಎಂಟ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...