Homeಮುಖಪುಟಗೋಡ್ಸೆ ಬಗ್ಗೆ ಹೇಳಿಕೆ: ಸಂಸತ್ತಿನ ರಕ್ಷಣಾ ಸಮಿತಿಯಿಂದ ಪ್ರಗ್ಯಾ ಠಾಕೂರ್‌ ಹೊರಕ್ಕೆ...

ಗೋಡ್ಸೆ ಬಗ್ಗೆ ಹೇಳಿಕೆ: ಸಂಸತ್ತಿನ ರಕ್ಷಣಾ ಸಮಿತಿಯಿಂದ ಪ್ರಗ್ಯಾ ಠಾಕೂರ್‌ ಹೊರಕ್ಕೆ…

- Advertisement -
- Advertisement -

ಸಂಸತ್ತಿನಲ್ಲಿ ಗಾಂಧಿ ಹಂತಕ ನಾಥೂರಾಂ ಗೊಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಬಿಜೆಪಿಯ ವಿವಾದಾತ್ಮಕ ಸಂಸದೆ ಪ್ರಗ್ಯಾ ಠಾಕೂರ್‌ರವರನ್ನು ಉಳಿದ ಚಳಿಗಾಲದ ಅಧಿವೇಶನಕ್ಕಾಗಿ ಪಕ್ಷದ ಸಂಸದರ ನಿಯಮಿತ ಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಅಷ್ಟು ಮಾತ್ರವಲ್ಲದೇ ಪ್ರಜ್ಞಾ ಠಾಕೂರ್ ಅವರನ್ನು ಇತ್ತೀಚೆಗೆ ಸೇರಿಸಿಕೊಂಡಿದ್ದ ರಕ್ಷಣಾ ಸಂಸದೀಯ ಸಮಿತಿಯಿಂದಲೂ ಸಹ ಹೊರಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಕ್ಷಣಾ ಸಚಿವಾಲಯ ಸಂಸದೀಯ ಸಮಿತಿಗೆ ಸಾಧ್ವಿ ಪ್ರಗ್ಯಾ ಸಿಂಗ್‌ ನೇಮಕ: ಕೇಂದ್ರದ ನಿರ್ಧಾರಕ್ಕೆ ವಿರೋಧ

“ನಿನ್ನೆ ಸಂಸತ್ತಿನಲ್ಲಿ ಅವರು ನೀಡಿದ ಹೇಳಿಕೆ ಖಂಡನೀಯ. ಅಂತಹ ಹೇಳಿಕೆ ಅಥವಾ ಸಿದ್ಧಾಂತವನ್ನು ಬಿಜೆಪಿ ಎಂದಿಗೂ ಬೆಂಬಲಿಸುವುದಿಲ್ಲ ”ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಎಎನ್‌ಐಗೆ ತಿಳಿಸಿದ್ದಾರೆ.

ನಿನ್ನೆ ಸಂಸತ್ತಿನಲ್ಲಿ ಎಸ್‌ಜೆಪಿ ಕಾಯ್ದೆ ತಿದ್ದುಪಡಿ ಕುರಿತ ಚರ್ಚೆಯಲ್ಲಿ ಡಿಎಂಕೆ ಸಂಸದ ಎ.ರಾಜಾ ರವರು ಗಾಂಧೀಜಿಯವರನ್ನು ಗೋಡ್ಸೆ ಕೊಂದಿದ್ದು ಹೇಗೆ ಎಂದು ವಿವರಿಸುತ್ತಿದ್ದರು. ಆಗ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ದೇಶಭಕ್ತ ಗೋಡ್ಸೆಯನ್ನು ನೀವು ಉದಾಹರಣೆಯಾಗಿ ಕೊಡಬಾರದು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: “ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ” : ಪ್ರಗ್ಯಾ ಠಾಕೂರ್

ಇದರಿಂದ ಕುಪಿತರಾದ ಮಧ್ಯಪ್ರದೇಶದ ಸಿಎಂ ಕಮಲ್‌ನಾಥ್‌ರವರು ಪ್ರಗ್ಯಾ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಗಾಂಧಿ ಕೊಂದ ಗೋಡ್ಸೆ ಬಗ್ಗೆ ಬಿಜೆಪಿ ತನ್ನ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿದ್ದರು.

ಗಾಂಧಿ ಕೊಂದ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಪ್ರಗ್ಯಾ ಠಾಕೂರ್‌ರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗ ಆಕೆ ಮತ್ತೆ ಮತ್ತೆ ಅದನ್ನೇ ಪುನರುಚ್ಚರಿಸುತ್ತಿದ್ದರೂ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಮಲ್‌ ನಾಥ್‌ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು.

ಇದನ್ನೂ ಓದಿ: ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...