Homeಮುಖಪುಟಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

ಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

- Advertisement -
- Advertisement -

ನನ್ನ ಹೆಸರು ರಾಹುಲ್‌ ಸಾವರ್ಕರ್‌ ಅಲ್ಲ, ಬದಲಾಗಿ ರಾಹುಲ್‌ ಗಾಂಧಿ. ಸತ್ಯವನ್ನು ಹೇಳಿದ್ದಕ್ಕಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶನಿವಾರ ರಾಹುಲ್‌ ಗಾಂಧಿ ಘೋಷಿಸಿ ಪಕ್ಷದ ಕಾರ್ಯಕರ್ತರಿಂದ ಭಾರೀ ಮೆಚ್ಚುಗೆ ಪಡೆದಿದ್ದರು. ಇದೀಗ ಆ ವಿಷಯವು ಮಹರಾಷ್ಟ್ರದಲ್ಲಿ ಪರ ವಿರೋಧದ ಚರ್ಚೆಗೆ ನಾಂದಿ ಹಾಡಿದೆ.

ಮಹಾರಾಷ್ಟ್ರದ ಕಾಂಗ್ರೆಸ್‌ನ ನೂತನ ಮಿತ್ರಪಕ್ಷ ಶಿವಸೇನೆಯು, ತಮ್ಮ ಪಕ್ಷವು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರೂ ಅವರನ್ನು ಗೌರವಿಸಿಸುತ್ತದೆ. ಅದೇ ರೀತಿ ಕಾಂಗ್ರೆಸ್ ಸಹ ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು ಎಂದು ಹೇಳಿದೆ.

ನಾವು ಪಂಡಿತ್ ನೆಹರು ಮತ್ತು ಮಹಾತ್ಮ ಗಾಂಧಿಯನ್ನು ಗೌರವಿಸುತ್ತೇವೆ. “ನೀವು ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು. ಸಂವೇದನಾಶೀಲರಾದ ಯಾರಿಗೂ ಹೆಚ್ಚಿನ ವಿವರಣೆಯ ಅಗತ್ಯವಿಲ್ಲ” ಎಂದು ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್‌ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ವೀರ್ ಸಾವರ್ಕರ್ ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ದೇವರಲ್ಲ, ರಾಷ್ಟ್ರಕ್ಕೂ ಕೂಡ. ಅವರ ಹೆಸರು ರಾಷ್ಟ್ರೀಯ ಹೆಮ್ಮೆ ಮತ್ತು ಸ್ವಾಭಿಮಾನದಿಂದ ಕೂಡಿದೆ. ನೆಹರೂ ಮತ್ತು ಗಾಂಧಿಯವರಂತೆ ಅವರು ಸ್ವಾತಂತ್ರ್ಯ ಸಾಧಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅಂತಹ ಎಲ್ಲ ದೇವರುಗಳನ್ನು ಗೌರವಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಸಾವರ್ಕರ್ ವಿಷಯವು ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ (ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ) ಮೈತ್ರಿಕೂಟದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಎನ್‌ಸಿಪಿ ಅಜಿತ್ ಪವಾರ್ “ಉದ್ಧವ್ ಜಿ, ಸೋನಿಯಾ ಜಿ, ಮತ್ತು ಪವಾರ್ ಸಾಹೆಬ್ ಪ್ರಬುದ್ಧ ಜನರು. ಅವರು ಅದನ್ನು ನಿಭಾಯಿಸುತ್ತಾರೆ ಎಂದು ಉತ್ತರಿಸಿದ್ದಾರೆ.

ಇದಕ್ಕೂ ಮೊದಲು ಸಿಎಬಿಯನ್ನು ಶಿವಸೇನೆ ವಿರೋಧಿಸಿತ್ತು. ಆದರೆ ಲೋಕಸಭೆಯಲ್ಲಿ ಆಶ್ಚರ್‍ಯಕರವಾಗಿ ಅದರ ಪರ ಮತ ಹಾಕಿತ್ತು. ಶಿವಸೇನೆಯ ಈ ನಿಲುವಿನಿಂದ ಸಿಟ್ಟಿಗೆದ್ದ ರಾಹುಲ್‌ ಗಾಂಧಿ “ಸಿಎಬಿ ಭಾರತೀಯ ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅದನ್ನು ಬೆಂಬಲಿಸುವ ಎಲ್ಲರೂ ನಮ್ಮ ರಾಷ್ಟ್ರದ ಅಡಿಪಾಯದ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್‌ ಮಾಡಿದ್ದರು. ತದನಂತರ ಶಿವಸೇನೆ ರಾಜ್ಯಸಭೆಯಲ್ಲಿ ಸಿಎಬಿಯನ್ನು ವಿರೋಧಿಸಿ ಪದತ್ಯಾಗ ಮಾಡಿತ್ತು.

ಇನ್ನು ರಾಹುಲ್‌ ಗಾಂಧಿ “ಮೋದಿಯವರು ಮೇಕ್‌ ಇನ್‌ ಇಂಡಿಯಾ ಎಂದು ಘೋಷಣೆ ನೀಡಿದ್ದರು. ಆದರೀಗ ರೇಪ್‌ ಇನ್‌ ಇಂಡಿಯಾ” ಆಗಿದೆ ಎಂದು ಟೀಕಿಸಿದ್ದರು. ಈ ಹೇಳಿಕೆಗೆ ರಾಹುಲ್‌ ಕ್ಷಮೆಯಾಚಿಸಬೇಕೆಂದು ಬಿಜೆಪಿಯು ಪಟ್ಟು ಹಿಡಿದಿತ್ತು. ಉಭಯ ಸದನಗಳಲ್ಲಿ ಈ ಬಗ್ಗೆ ಪ್ರತಿಭಟನೆಗಳು ದಾಖಲಾಗಿದ್ದವು.

ಇದಕ್ಕೆ ಪ್ರತಿಕ್ರಿಯೆಯಾಗಿ “ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ. ಸತ್ಯವನ್ನು ಮಾತನಾಡಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರೂ ಹಾಗೆ ಮಾಡುವುದಿಲ್ಲ. ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶಕ್ಕೆ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು ಶನಿವಾರ ಮಧ್ಯಾಹ್ನ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ಪಕ್ಷದ ಮೆಗಾ ರ್‍ಯಾಲಿಯಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...