Homeಮುಖಪುಟಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

ಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

- Advertisement -
- Advertisement -

ನನ್ನ ಹೆಸರು ರಾಹುಲ್‌ ಸಾವರ್ಕರ್‌ ಅಲ್ಲ, ಬದಲಾಗಿ ರಾಹುಲ್‌ ಗಾಂಧಿ. ಸತ್ಯವನ್ನು ಹೇಳಿದ್ದಕ್ಕಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶನಿವಾರ ರಾಹುಲ್‌ ಗಾಂಧಿ ಘೋಷಿಸಿ ಪಕ್ಷದ ಕಾರ್ಯಕರ್ತರಿಂದ ಭಾರೀ ಮೆಚ್ಚುಗೆ ಪಡೆದಿದ್ದರು. ಇದೀಗ ಆ ವಿಷಯವು ಮಹರಾಷ್ಟ್ರದಲ್ಲಿ ಪರ ವಿರೋಧದ ಚರ್ಚೆಗೆ ನಾಂದಿ ಹಾಡಿದೆ.

ಮಹಾರಾಷ್ಟ್ರದ ಕಾಂಗ್ರೆಸ್‌ನ ನೂತನ ಮಿತ್ರಪಕ್ಷ ಶಿವಸೇನೆಯು, ತಮ್ಮ ಪಕ್ಷವು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರೂ ಅವರನ್ನು ಗೌರವಿಸಿಸುತ್ತದೆ. ಅದೇ ರೀತಿ ಕಾಂಗ್ರೆಸ್ ಸಹ ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು ಎಂದು ಹೇಳಿದೆ.

ನಾವು ಪಂಡಿತ್ ನೆಹರು ಮತ್ತು ಮಹಾತ್ಮ ಗಾಂಧಿಯನ್ನು ಗೌರವಿಸುತ್ತೇವೆ. “ನೀವು ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು. ಸಂವೇದನಾಶೀಲರಾದ ಯಾರಿಗೂ ಹೆಚ್ಚಿನ ವಿವರಣೆಯ ಅಗತ್ಯವಿಲ್ಲ” ಎಂದು ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್‌ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ವೀರ್ ಸಾವರ್ಕರ್ ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ದೇವರಲ್ಲ, ರಾಷ್ಟ್ರಕ್ಕೂ ಕೂಡ. ಅವರ ಹೆಸರು ರಾಷ್ಟ್ರೀಯ ಹೆಮ್ಮೆ ಮತ್ತು ಸ್ವಾಭಿಮಾನದಿಂದ ಕೂಡಿದೆ. ನೆಹರೂ ಮತ್ತು ಗಾಂಧಿಯವರಂತೆ ಅವರು ಸ್ವಾತಂತ್ರ್ಯ ಸಾಧಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅಂತಹ ಎಲ್ಲ ದೇವರುಗಳನ್ನು ಗೌರವಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಸಾವರ್ಕರ್ ವಿಷಯವು ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ (ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ) ಮೈತ್ರಿಕೂಟದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಎನ್‌ಸಿಪಿ ಅಜಿತ್ ಪವಾರ್ “ಉದ್ಧವ್ ಜಿ, ಸೋನಿಯಾ ಜಿ, ಮತ್ತು ಪವಾರ್ ಸಾಹೆಬ್ ಪ್ರಬುದ್ಧ ಜನರು. ಅವರು ಅದನ್ನು ನಿಭಾಯಿಸುತ್ತಾರೆ ಎಂದು ಉತ್ತರಿಸಿದ್ದಾರೆ.

ಇದಕ್ಕೂ ಮೊದಲು ಸಿಎಬಿಯನ್ನು ಶಿವಸೇನೆ ವಿರೋಧಿಸಿತ್ತು. ಆದರೆ ಲೋಕಸಭೆಯಲ್ಲಿ ಆಶ್ಚರ್‍ಯಕರವಾಗಿ ಅದರ ಪರ ಮತ ಹಾಕಿತ್ತು. ಶಿವಸೇನೆಯ ಈ ನಿಲುವಿನಿಂದ ಸಿಟ್ಟಿಗೆದ್ದ ರಾಹುಲ್‌ ಗಾಂಧಿ “ಸಿಎಬಿ ಭಾರತೀಯ ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅದನ್ನು ಬೆಂಬಲಿಸುವ ಎಲ್ಲರೂ ನಮ್ಮ ರಾಷ್ಟ್ರದ ಅಡಿಪಾಯದ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್‌ ಮಾಡಿದ್ದರು. ತದನಂತರ ಶಿವಸೇನೆ ರಾಜ್ಯಸಭೆಯಲ್ಲಿ ಸಿಎಬಿಯನ್ನು ವಿರೋಧಿಸಿ ಪದತ್ಯಾಗ ಮಾಡಿತ್ತು.

ಇನ್ನು ರಾಹುಲ್‌ ಗಾಂಧಿ “ಮೋದಿಯವರು ಮೇಕ್‌ ಇನ್‌ ಇಂಡಿಯಾ ಎಂದು ಘೋಷಣೆ ನೀಡಿದ್ದರು. ಆದರೀಗ ರೇಪ್‌ ಇನ್‌ ಇಂಡಿಯಾ” ಆಗಿದೆ ಎಂದು ಟೀಕಿಸಿದ್ದರು. ಈ ಹೇಳಿಕೆಗೆ ರಾಹುಲ್‌ ಕ್ಷಮೆಯಾಚಿಸಬೇಕೆಂದು ಬಿಜೆಪಿಯು ಪಟ್ಟು ಹಿಡಿದಿತ್ತು. ಉಭಯ ಸದನಗಳಲ್ಲಿ ಈ ಬಗ್ಗೆ ಪ್ರತಿಭಟನೆಗಳು ದಾಖಲಾಗಿದ್ದವು.

ಇದಕ್ಕೆ ಪ್ರತಿಕ್ರಿಯೆಯಾಗಿ “ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ. ಸತ್ಯವನ್ನು ಮಾತನಾಡಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರೂ ಹಾಗೆ ಮಾಡುವುದಿಲ್ಲ. ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶಕ್ಕೆ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು ಶನಿವಾರ ಮಧ್ಯಾಹ್ನ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ಪಕ್ಷದ ಮೆಗಾ ರ್‍ಯಾಲಿಯಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...