Homeಮುಖಪುಟಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

ಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

- Advertisement -
- Advertisement -

ನನ್ನ ಹೆಸರು ರಾಹುಲ್‌ ಸಾವರ್ಕರ್‌ ಅಲ್ಲ, ಬದಲಾಗಿ ರಾಹುಲ್‌ ಗಾಂಧಿ. ಸತ್ಯವನ್ನು ಹೇಳಿದ್ದಕ್ಕಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶನಿವಾರ ರಾಹುಲ್‌ ಗಾಂಧಿ ಘೋಷಿಸಿ ಪಕ್ಷದ ಕಾರ್ಯಕರ್ತರಿಂದ ಭಾರೀ ಮೆಚ್ಚುಗೆ ಪಡೆದಿದ್ದರು. ಇದೀಗ ಆ ವಿಷಯವು ಮಹರಾಷ್ಟ್ರದಲ್ಲಿ ಪರ ವಿರೋಧದ ಚರ್ಚೆಗೆ ನಾಂದಿ ಹಾಡಿದೆ.

ಮಹಾರಾಷ್ಟ್ರದ ಕಾಂಗ್ರೆಸ್‌ನ ನೂತನ ಮಿತ್ರಪಕ್ಷ ಶಿವಸೇನೆಯು, ತಮ್ಮ ಪಕ್ಷವು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರೂ ಅವರನ್ನು ಗೌರವಿಸಿಸುತ್ತದೆ. ಅದೇ ರೀತಿ ಕಾಂಗ್ರೆಸ್ ಸಹ ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು ಎಂದು ಹೇಳಿದೆ.

ನಾವು ಪಂಡಿತ್ ನೆಹರು ಮತ್ತು ಮಹಾತ್ಮ ಗಾಂಧಿಯನ್ನು ಗೌರವಿಸುತ್ತೇವೆ. “ನೀವು ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು. ಸಂವೇದನಾಶೀಲರಾದ ಯಾರಿಗೂ ಹೆಚ್ಚಿನ ವಿವರಣೆಯ ಅಗತ್ಯವಿಲ್ಲ” ಎಂದು ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್‌ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ವೀರ್ ಸಾವರ್ಕರ್ ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ದೇವರಲ್ಲ, ರಾಷ್ಟ್ರಕ್ಕೂ ಕೂಡ. ಅವರ ಹೆಸರು ರಾಷ್ಟ್ರೀಯ ಹೆಮ್ಮೆ ಮತ್ತು ಸ್ವಾಭಿಮಾನದಿಂದ ಕೂಡಿದೆ. ನೆಹರೂ ಮತ್ತು ಗಾಂಧಿಯವರಂತೆ ಅವರು ಸ್ವಾತಂತ್ರ್ಯ ಸಾಧಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅಂತಹ ಎಲ್ಲ ದೇವರುಗಳನ್ನು ಗೌರವಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಸಾವರ್ಕರ್ ವಿಷಯವು ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ (ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ) ಮೈತ್ರಿಕೂಟದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಎನ್‌ಸಿಪಿ ಅಜಿತ್ ಪವಾರ್ “ಉದ್ಧವ್ ಜಿ, ಸೋನಿಯಾ ಜಿ, ಮತ್ತು ಪವಾರ್ ಸಾಹೆಬ್ ಪ್ರಬುದ್ಧ ಜನರು. ಅವರು ಅದನ್ನು ನಿಭಾಯಿಸುತ್ತಾರೆ ಎಂದು ಉತ್ತರಿಸಿದ್ದಾರೆ.

ಇದಕ್ಕೂ ಮೊದಲು ಸಿಎಬಿಯನ್ನು ಶಿವಸೇನೆ ವಿರೋಧಿಸಿತ್ತು. ಆದರೆ ಲೋಕಸಭೆಯಲ್ಲಿ ಆಶ್ಚರ್‍ಯಕರವಾಗಿ ಅದರ ಪರ ಮತ ಹಾಕಿತ್ತು. ಶಿವಸೇನೆಯ ಈ ನಿಲುವಿನಿಂದ ಸಿಟ್ಟಿಗೆದ್ದ ರಾಹುಲ್‌ ಗಾಂಧಿ “ಸಿಎಬಿ ಭಾರತೀಯ ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅದನ್ನು ಬೆಂಬಲಿಸುವ ಎಲ್ಲರೂ ನಮ್ಮ ರಾಷ್ಟ್ರದ ಅಡಿಪಾಯದ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್‌ ಮಾಡಿದ್ದರು. ತದನಂತರ ಶಿವಸೇನೆ ರಾಜ್ಯಸಭೆಯಲ್ಲಿ ಸಿಎಬಿಯನ್ನು ವಿರೋಧಿಸಿ ಪದತ್ಯಾಗ ಮಾಡಿತ್ತು.

ಇನ್ನು ರಾಹುಲ್‌ ಗಾಂಧಿ “ಮೋದಿಯವರು ಮೇಕ್‌ ಇನ್‌ ಇಂಡಿಯಾ ಎಂದು ಘೋಷಣೆ ನೀಡಿದ್ದರು. ಆದರೀಗ ರೇಪ್‌ ಇನ್‌ ಇಂಡಿಯಾ” ಆಗಿದೆ ಎಂದು ಟೀಕಿಸಿದ್ದರು. ಈ ಹೇಳಿಕೆಗೆ ರಾಹುಲ್‌ ಕ್ಷಮೆಯಾಚಿಸಬೇಕೆಂದು ಬಿಜೆಪಿಯು ಪಟ್ಟು ಹಿಡಿದಿತ್ತು. ಉಭಯ ಸದನಗಳಲ್ಲಿ ಈ ಬಗ್ಗೆ ಪ್ರತಿಭಟನೆಗಳು ದಾಖಲಾಗಿದ್ದವು.

ಇದಕ್ಕೆ ಪ್ರತಿಕ್ರಿಯೆಯಾಗಿ “ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ. ಸತ್ಯವನ್ನು ಮಾತನಾಡಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರೂ ಹಾಗೆ ಮಾಡುವುದಿಲ್ಲ. ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶಕ್ಕೆ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು ಶನಿವಾರ ಮಧ್ಯಾಹ್ನ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ಪಕ್ಷದ ಮೆಗಾ ರ್‍ಯಾಲಿಯಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...