Homeಕರ್ನಾಟಕಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ರೈತರ ಬೇಡಿಕೆಗೆ ಅನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ತರಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರಿಗೆ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಹಾಗಾಗಿ ರೈತರ ಸಂಕಷ್ಟ ಪರಿಹರಿಸಿ ಎಂದು ಸಿಎಂ ಯಡಿಯೂರಪ್ಪನವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಯೂರಿಯಾ ತರಿಸಿಕೊಂಡು, ಅಗತ್ಯಕ್ಕೆ ಅನುಗುಣವಾಗಿ ರೈತರಿಗೆ ವಿತರಿಸಲು ಆಗ್ರಹಿಸಿದ್ದಾರೆ.

ಮುಂಗಾರು ಅವಧಿಗೆ ಸಾಮಾನ್ಯವಾಗಿ 8.50 ಲಕ್ಷ ಟನ್‍ ಯೂರಿಯಾ ಅವಶ್ಯಕತೆ ಇತ್ತು. ಆದರೆ, ವೈಬ್‍ಸೈಟ್‍ನಲ್ಲಿರುವ ಮಾಹಿತಿ ಪ್ರಕಾರ ಏ. 1ರಿಂದ ಸೆ.6ರವರೆಗೆ 8,95,221 ಟನ್‍ ಯೂರಿಯಾ ವಿತರಿಸಲಾಗಿದೆ. ಇನ್ನೂ 1,88,996 ಟನ್‍ ಲಭ್ಯವಿದೆ ಎಂದು ಹೇಳಲಾಗುತ್ತಿದೆ. ಆದರೂ ಜನ ಯೂರಿಯಾಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಕಾಳಸಂತೆಕೋರರು ಅಕ್ರಮವಾಗಿ ದಾಸ್ತಾನು ಮಾಡಿರಬೇಕು, ಇಲ್ಲವೇ ನಿಮ್ಮ ವೆಬ್‍ಸೈಟ್‍ನ ಅಂಕಿಅಂಶಗಳು ತಪ್ಪಿರಬೇಕು ಅಥವಾ ಜನರ ಬೇಡಿಕೆ ಹೆಚ್ಚಾಗಿರಬೇಕು’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಲಾಕ್‌‌ಡೌನ್ ಕಾರಣ ಜನರು ಗ್ರಾಮಾಂತರ ಪ್ರದೇಶಕ್ಕೆ ವಲಸೆ ಹೋದರು. ಹೀಗಾಗಿ, ಸಹಜವಾಗಿಯೇ ಕೃಷಿ ಕ್ಷೇತ್ರದ ಮೇಲೆ ಒತ್ತು ಬೀಳಲಾರಂಭಿಸಿತು. ಈ ವಿಚಾರವನ್ನು ಮನಗಂಡು ನಾವು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರ್ಕಾರಕ್ಕೆ ಮಾಡಿದ ಮನವಿ ಪತ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರ ದಾಸ್ತಾನು ಮಾಡಿಕೊಂಡು, ಪೂರೈಸುವಂತೆ ಆಗ್ರಹಿಸಿದ್ದೆವು. ಆದರೂ ಸರ್ಕಾರ ನಮ್ಮ ಮಾತನ್ನು ನಿರ್ಲಕ್ಷಿಸಿತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಈ ಬಾರಿ ಹೆಚ್ಚುವರಿ ಭೂ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಹಾಗಾಗಿ  ಸರ್ಕಾರ ನಿರ್ಲಕ್ಷ್ಯ ತೋರಿದರೆ ರೈತರು ಪರದಾಡಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಜೊತೆಗೆ ಹಾವೇರಿಯಲ್ಲಿ ಗೋಲಿಬಾರ್ ನಡೆದು ಇಬ್ಬರು ರೈತರು ಬಲಿಯಾಗಿದ್ದನ್ನು ಪತ್ರದಲ್ಲಿ ಉಲ್ಲೇಖಿಸಿ, ಗೊಬ್ಬರದಂಥ ಮಹತ್ವವಾದ ವಿಷಯವನ್ನು ನಿಭಾಯಿಸಲಾಗದೆ ಸರ್ಕಾರ ಮತ್ತೊಮ್ಮೆ ಸಂಪೂರ್ಣ ವಿಫಲವಾಗಿದೆ’ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ರೈತರ ಕಾಳಜಿಯಿಂದಾಗಿ ಬೆಳೆಗಳು ಚೆನ್ನಾಗಿರುವುದರಿಂದ ಬೆಲೆ ಕುಸಿತದ ಸಮಸ್ಯೆ ಮುಂದಿನ ದಿನಗಳಲ್ಲಿ ಖಂಡಿತವಾಗಿ ಉದ್ಭವಿಸುತ್ತದೆ. ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ’ ಎಂದು ಪತ್ರದಲ್ಲಿ ಅವರು ವಿವರಿಸಿದ್ದಾರೆ.

ಸದ್ಯ ರೈತರ ಬೇಡಿಕೆಗೆ ಅನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ತರಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...