Homeಕರ್ನಾಟಕಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ರೈತರ ಬೇಡಿಕೆಗೆ ಅನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ತರಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರಿಗೆ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಹಾಗಾಗಿ ರೈತರ ಸಂಕಷ್ಟ ಪರಿಹರಿಸಿ ಎಂದು ಸಿಎಂ ಯಡಿಯೂರಪ್ಪನವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಯೂರಿಯಾ ತರಿಸಿಕೊಂಡು, ಅಗತ್ಯಕ್ಕೆ ಅನುಗುಣವಾಗಿ ರೈತರಿಗೆ ವಿತರಿಸಲು ಆಗ್ರಹಿಸಿದ್ದಾರೆ.

ಮುಂಗಾರು ಅವಧಿಗೆ ಸಾಮಾನ್ಯವಾಗಿ 8.50 ಲಕ್ಷ ಟನ್‍ ಯೂರಿಯಾ ಅವಶ್ಯಕತೆ ಇತ್ತು. ಆದರೆ, ವೈಬ್‍ಸೈಟ್‍ನಲ್ಲಿರುವ ಮಾಹಿತಿ ಪ್ರಕಾರ ಏ. 1ರಿಂದ ಸೆ.6ರವರೆಗೆ 8,95,221 ಟನ್‍ ಯೂರಿಯಾ ವಿತರಿಸಲಾಗಿದೆ. ಇನ್ನೂ 1,88,996 ಟನ್‍ ಲಭ್ಯವಿದೆ ಎಂದು ಹೇಳಲಾಗುತ್ತಿದೆ. ಆದರೂ ಜನ ಯೂರಿಯಾಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಕಾಳಸಂತೆಕೋರರು ಅಕ್ರಮವಾಗಿ ದಾಸ್ತಾನು ಮಾಡಿರಬೇಕು, ಇಲ್ಲವೇ ನಿಮ್ಮ ವೆಬ್‍ಸೈಟ್‍ನ ಅಂಕಿಅಂಶಗಳು ತಪ್ಪಿರಬೇಕು ಅಥವಾ ಜನರ ಬೇಡಿಕೆ ಹೆಚ್ಚಾಗಿರಬೇಕು’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಲಾಕ್‌‌ಡೌನ್ ಕಾರಣ ಜನರು ಗ್ರಾಮಾಂತರ ಪ್ರದೇಶಕ್ಕೆ ವಲಸೆ ಹೋದರು. ಹೀಗಾಗಿ, ಸಹಜವಾಗಿಯೇ ಕೃಷಿ ಕ್ಷೇತ್ರದ ಮೇಲೆ ಒತ್ತು ಬೀಳಲಾರಂಭಿಸಿತು. ಈ ವಿಚಾರವನ್ನು ಮನಗಂಡು ನಾವು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರ್ಕಾರಕ್ಕೆ ಮಾಡಿದ ಮನವಿ ಪತ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರ ದಾಸ್ತಾನು ಮಾಡಿಕೊಂಡು, ಪೂರೈಸುವಂತೆ ಆಗ್ರಹಿಸಿದ್ದೆವು. ಆದರೂ ಸರ್ಕಾರ ನಮ್ಮ ಮಾತನ್ನು ನಿರ್ಲಕ್ಷಿಸಿತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಈ ಬಾರಿ ಹೆಚ್ಚುವರಿ ಭೂ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಹಾಗಾಗಿ  ಸರ್ಕಾರ ನಿರ್ಲಕ್ಷ್ಯ ತೋರಿದರೆ ರೈತರು ಪರದಾಡಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಜೊತೆಗೆ ಹಾವೇರಿಯಲ್ಲಿ ಗೋಲಿಬಾರ್ ನಡೆದು ಇಬ್ಬರು ರೈತರು ಬಲಿಯಾಗಿದ್ದನ್ನು ಪತ್ರದಲ್ಲಿ ಉಲ್ಲೇಖಿಸಿ, ಗೊಬ್ಬರದಂಥ ಮಹತ್ವವಾದ ವಿಷಯವನ್ನು ನಿಭಾಯಿಸಲಾಗದೆ ಸರ್ಕಾರ ಮತ್ತೊಮ್ಮೆ ಸಂಪೂರ್ಣ ವಿಫಲವಾಗಿದೆ’ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ರೈತರ ಕಾಳಜಿಯಿಂದಾಗಿ ಬೆಳೆಗಳು ಚೆನ್ನಾಗಿರುವುದರಿಂದ ಬೆಲೆ ಕುಸಿತದ ಸಮಸ್ಯೆ ಮುಂದಿನ ದಿನಗಳಲ್ಲಿ ಖಂಡಿತವಾಗಿ ಉದ್ಭವಿಸುತ್ತದೆ. ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ’ ಎಂದು ಪತ್ರದಲ್ಲಿ ಅವರು ವಿವರಿಸಿದ್ದಾರೆ.

ಸದ್ಯ ರೈತರ ಬೇಡಿಕೆಗೆ ಅನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ತರಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...