Homeಮುಖಪುಟಅತಿಯಾದ ಆತ್ಮವಿಶ್ವಾಸ ಬಿಜೆಪಿಯ ನಿರೀಕ್ಷೆಯನ್ನು ಘಾಸಿಗೊಳಿಸಿದೆ: ಯುಪಿ ಸಿಎಂ ಆದಿತ್ಯನಾಥ್

ಅತಿಯಾದ ಆತ್ಮವಿಶ್ವಾಸ ಬಿಜೆಪಿಯ ನಿರೀಕ್ಷೆಯನ್ನು ಘಾಸಿಗೊಳಿಸಿದೆ: ಯುಪಿ ಸಿಎಂ ಆದಿತ್ಯನಾಥ್

- Advertisement -
- Advertisement -

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸೋಲಿನ ನಂತರ ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷ (ಬಿಜೆಪಿ) ಘಟಕದ ಮೊದಲ ಪ್ರಮುಖ ಸಭೆಯಲ್ಲಿ ಭಾನುವಾರ (ಜುಲೈ 14) ನಡೆದಿದ್ದು, “ಅತಿಯಾದ ಆತ್ಮವಿಶ್ವಾಸವು ಈ ವರ್ಷದ ಚುನಾವಣೆಯಲ್ಲಿ ಬಿಜೆಪಿಯ ಭರವಸೆಯನ್ನು ಘಾಸಿಗೊಳಿಸಿದೆ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಬಿಜೆಪಿಯ ಯುಪಿ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ತನ್ನ ಮತಗಳ ಪಾಲನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಈ ಚುನಾವಣೆಯಲ್ಲಿ ಮತಗಳ ಸ್ಥಳಾಂತರ ಕಂಡುಬಂದಿದೆ. ಈಗ ಸೋತ ಪ್ರತಿಪಕ್ಷಗಳು ಮತ್ತೆ ಜಿಗಿಯುತ್ತಿವೆ. ಪಿಎಂ ಮೋದಿಯವರ ನಾಯಕತ್ವದಲ್ಲಿ ನಾವು ಯುಪಿಯಲ್ಲಿ ಪ್ರತಿಪಕ್ಷಗಳ ಮೇಲೆ ನಿರಂತರ ಒತ್ತಡವನ್ನು ಹೊಂದಿದ್ದೇವೆ, 2014, 2017, 2019 ಮತ್ತು 2022 ರಲ್ಲಿ (ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳು) ಉತ್ತಮ ಯಶಸ್ಸನ್ನು ಸಾಧಿಸಿದ್ದೇವೆ” ಎಂದು ಮುಖ್ಯಮಂತ್ರಿ ಹೇಳಿದರು.

2014 ಮತ್ತು ನಂತರದ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿದ್ದ ಶೇಕಡವಾರು ಮತಗಳು, 2024ರಲ್ಲೂ ಬಿಜೆಪಿ ಅದೇ ಪ್ರಮಾಣದ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಆದರೆ, ಮತಗಳ ಪಲ್ಲಟ ಮತ್ತು ಅತಿಯಾದ ಆತ್ಮವಿಶ್ವಾಸವು ನಮ್ಮ ಭರವಸೆಯನ್ನು ಘಾಸಿಗೊಳಿಸಿದೆ ಎಂದು ಅವರು ಹೇಳಿದರು.

ಲಕ್ನೋದ ರಾಮ್ ಮನೋಹರ್ ಲೋಹಿಯಾ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ದಿನವಿಡೀ ನಡೆದ ಸಭೆಯ ಸಮಾರೋಪದಲ್ಲಿ ಮಾತನಾಡಿದ ಅವರು, “ಹಿಂದೆ ಸೋಲನ್ನು ಒಪ್ಪಿಕೊಂಡಿದ್ದ ಪ್ರತಿಪಕ್ಷಗಳು ಇಂದು ಮತ್ತೆ ಜಿಗಿಯುತ್ತಿವೆ” ಎಂದು ಹೇಳಿದರು.

ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹೀನಾಯ ಪ್ರದರ್ಶನ ನೀಡಿದ ಒಂದು ದಿನದ ನಂತರ ಆದಿತ್ಯನಾಥ್‌ರ ಈ ಹೇಳಿಕೆ ಹೊರಬಿದ್ದಿದೆ. 13 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ I.N.D.I.A ಬ್ಲಾಕ್‌ನ ಸದಸ್ಯರು ಗೆಲುವು ಸಾಧಿಸಿದರೆ, ಬಿಜೆಪಿ 2 ಮತ್ತು ಪಕ್ಷೇತರರು ಒಂದು ಸ್ಥಾನವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿ 33 ಸ್ಥಾನಗಳನ್ನು ಗೆದ್ದುಕೊಂಡಿತು, 2019 ರಲ್ಲಿ ಅದು 62 ಸ್ಥಾನಗಳು ಕಡಿಮೆಯಾಗಿದೆ. ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ, ಅದರ I.N.D.I.A ಬ್ಲಾಕ್ ಮಿತ್ರ ಸಮಾಜವಾದಿ ಪಕ್ಷವು ಯುಪಿಯಿಂದ 37 ಸ್ಥಾನಗಳನ್ನು ಗಳಿಸಿತು, ಇಂಡಿಯಾ 80 ಸದಸ್ಯರನ್ನು ಸಂಸತ್ತಿಗೆ ಕಳುಹಿಸುತ್ತದೆ.

ವಿರೋಧ ಪಕ್ಷಗಳ ಮೇಲೆ ಪರೋಕ್ಷ ದಾಳಿ ನಡೆಸಿದ ಆದಿತ್ಯನಾಥ್, “ನಮ್ಮ ಸಮಾಜ ಚದುರಿ ಹೋದರೆ ಸಲೀಸಾಗಿ ಬೀಳುತ್ತದೆ ಎಂಬುದು ಜಗತ್ತಿಗೆ ಗೊತ್ತಿದೆ, ಆದರೆ ಒಗ್ಗಟ್ಟಾದರೆ ದೊಡ್ಡ ದೊಡ್ಡ ಶಕ್ತಿಗಳು ಕೂಡ ತನ್ನ ಮುಂದೆ ಬೀಳುತ್ತವೆ” ಎಂದರು.

“ನಾವು ಸಾಧ್ಯವಾದಷ್ಟು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಬೇಕು, ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ಪ್ರತಿಪಕ್ಷಗಳು ಮತ್ತು ವಿದೇಶಿಯರು ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ ಮತ್ತು ಅದರಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದರು.

ಆದರೆ, ಬಿಜೆಪಿ ರಾಷ್ಟ್ರೀಯವಾದಿ ದೃಷ್ಟಿಕೋನವನ್ನು ಹೊಂದಿದೆ. ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮೀಸಲಾತಿಯನ್ನು ಕೊನೆಗೊಳಿಸಲು ಬಯಸುತ್ತಿದೆ ಎಂದು I.N.D.I.A ಬ್ಲಾಕ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಬೇಕು, ನಾವು ತಕ್ಷಣ ವದಂತಿಗಳನ್ನು ತಳ್ಳಿಹಾಕಬೇಕು, ಪರಿಶಿಷ್ಟ ಜಾತಿಯ ಮಹಾಪುರುಷರ ಬಗ್ಗೆ ಬಿಜೆಪಿಯ ಅಭಿಪ್ರಾಯಗಳ ಬಗ್ಗೆ ಮಾತನಾಡಬೇಕು, 2019 ರಲ್ಲಿ ನಾವು ರಾಜ್ಯದಲ್ಲಿ ದೊಡ್ಡ ಮೈತ್ರಿಯನ್ನು ಸೋಲಿಸಿದ್ದೇವೆ ಎಂದು ಆದಿತ್ಯನಾಥ್ ಹೇಳಿದರು.

“ನಾವು ಜಾತಿ, ಧರ್ಮ ಅಥವಾ ಪಂಥದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ. ಎಂಬತ್ತು ಕೋಟಿ ಜನರಿಗೆ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಉಚಿತ ಪಡಿತರ ಸಿಗುತ್ತಿಲ್ಲ” ಎಂದು ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ; ಗುಜರಾತ್‌: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...