Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...