Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...