Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...