Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...