Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...