Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...