Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....