Homeಮುಖಪುಟಓವೈಸಿ ಪಕ್ಷ ಎಸ್‌ಪಿಗೆ ಮುಳುವಾಯಿತೆ? ಬಿಜೆಪಿ ಅತಿ ಕಡಿಮೆ ಅಂತರದಲ್ಲಿ ಗೆದ್ದ ಕ್ಷೇತ್ರಗಳಿವು...

ಓವೈಸಿ ಪಕ್ಷ ಎಸ್‌ಪಿಗೆ ಮುಳುವಾಯಿತೆ? ಬಿಜೆಪಿ ಅತಿ ಕಡಿಮೆ ಅಂತರದಲ್ಲಿ ಗೆದ್ದ ಕ್ಷೇತ್ರಗಳಿವು…

- Advertisement -
- Advertisement -

ಸಮಾಜವಾದಿ ಪಾರ್ಟಿ ಹಾಗೂ ಇದರ ಮಿತ್ರ ಪಕ್ಷಗಳಿಗೆ ಅಸಾದುದ್ದೀನ್ ಓವೈಸಿಯವರ ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್) ಪಕ್ಷ ಹಲವು ಕ್ಷೇತ್ರಗಳಲ್ಲಿ ಬಿಸಿ ತುಪ್ಪವಾಗಿರುವ ಸಾಧ್ಯತೆಯನ್ನು ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ತೆರೆದಿಟ್ಟಿದೆ.

ಮತಗಳಿಕೆಯಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊಮ್ಮಿರುವ ಬಹುಜನ ಸಮಾಜವಾದಿ ಪಕ್ಷವು ಹಲವೆಡೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಜೊತೆಗೆ ಹಲವಾರು ಪಕ್ಷೇತರ ಅಭ್ಯರ್ಥಿಗಳು ಮುಸ್ಲಿಮರಾಗಿದ್ದರು. ಇವೆಲ್ಲವೂ ಎಸ್‌ಪಿ ಮತ ಚದುರಲು ಕಾರಣವಾಗಿರಬಹುದು. ಅದಕ್ಕಾಗಿ ಹೆಚ್ಚಾಗಿ ಮುಸ್ಲಿಂ ಮುಖವಾಣಿ ಎಂದೇ ಬಿಂಬಿತವಾಗಿರುವ ಹೈದ್ರಾಬಾದ್‌ ಮೂಲದ ಎಎಂಐಎಂಎ ಪಕ್ಷಕ್ಕೆ ಬಿದ್ದಿರುವ ಮತಗಳು ಒಂದು ವೇಳೆ ಎಸ್‌ಪಿ ತೆಕ್ಕೆಗೆ ಬಿದ್ದಿದ್ದರೆ ಮತ್ತಷ್ಟು ಕ್ಷೇತ್ರಗಳು ಎಸ್‌ಪಿ ಪಾಲಾಗುತ್ತಿದ್ದವು ಎಂಬ ಚರ್ಚೆಯಾಗುತ್ತಿದೆ.

ಯಾದವ ಹಾಗೂ ಮುಸ್ಲಿಂ ಸಮುದಾಯದ ಮತಗಳನ್ನು ಬಹುಮುಖ್ಯವಾಗಿ ನಂಬಿಕೊಂಡಿರುವ ಸಮಾಜವಾದಿ ಪಕ್ಷವನ್ನು ಮುಸ್ಲಿಂ ಮತದಾರರು ಕೈ ಹಿಡಿದಿರುವುದು ಸ್ಪಷ್ಟವಾಗುತ್ತದೆ. ಬಿಜೆಪಿ ವಿರುದ್ಧ ಕಡಿಮೆ ಅಂತರದಲ್ಲಿ ಎಸ್‌ಪಿ ಸೋತಿರುವ ಕೆಲವು ಕ್ಷೇತ್ರಗಳಲ್ಲಿ ಎಐಎಂಐಎಂ ಸೇರಿದಂತೆ ಇತರ ಪಕ್ಷಗಳು ಮುಸ್ಲಿಂ ಮತಗಳನ್ನು ಚದುರಿಸಿರುವ ಸಾಧ್ಯತೆ ಇದೆ.

ಒಟ್ಟು ಮತ ವಿಭಜನೆಯಲ್ಲಿ ಬಿಎಸ್‌ಪಿ ಶೇ. 12.88, ಬಿಜೆಪಿ ಶೇ. 41.29, ಎಸ್‌ಪಿ 32.06 ಮತಗಳನ್ನು ಪಡೆದಿವೆ. ಎಎಎಪಿ ಶೇ. 0.38, ಎಐಎಫ್‌ಬಿ ಶೇ. 0.00, ಸಿಪಿಐ ಶೇ. 0.07, ಸಿಪಿಐ(ಎಂ) ಶೇ. 0.01, ಸಿಪಿಐ(ಎಂಎಲ್‌) ಶೇ. 0.01, ಕಾಂಗ್ರೆಸ್‌ ಶೇ. 2.33, ಐಯುಎಂಎಲ್‌‌ ಶೇ. 0.00, ಜೆಡಿಯು ಶೇ 0.11, ಎಲ್‌ಜೆಪಿ ಶೇ. 0.00, ಎಲ್‌ಜೆಪಿಆರ್‌ವಿ ಶೇ. 0.01, ಎನ್‌ಸಿಪಿ ಶೇ. 0.05, ನೋಟಾ ಶೇ. 0.69%, ಆರ್‌‌ಎಲ್‌ಡಿ ಶೇ. 2.85, ಎಸ್‌‌ಎಚ್‌‌ಎಸ್‌ ಶೇ. 0.02, ಪಕ್ಷೇತರರು ಶೇ. 6.74 ಮತಗಳನ್ನು ಪಡೆದಿದ್ದಾರೆ. ಎಐಎಂಐಎಂ ಪಕ್ಷವು ಉತ್ತರ ಪ್ರದೇಶದ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಶೇ. 0.49 ಮತಗಳನ್ನು ಎಐಎಂಐಎಂ ಪಡೆದಿರುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ. ಶೇ. 0.49ರಷ್ಟು ಮತ ಗಳಿಸಿದರೂ ಮತ ವಿಭಜನೆಯಾಗುವಲ್ಲಿ ಎಐಎಂಐಎಂ ಪ್ರಮುಖ ಪಾತ್ರ ವಹಿಸಿರುವುದು ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಕೆಲವು ಕ್ಷೇತ್ರಗಳ ಫಲಿತಾಂಶ ಚರ್ಚೆಯಾಗುತ್ತಿದೆ.

ಬಿಜ್ನೋರ್‌ ಕ್ಷೇತ್ರ

ಬಿಜ್ನೋರ್‌ ಕ್ಷೇತ್ರದಲ್ಲಿ ಬಿಜೆಪಿಯ ಸುಚಿ ಮೌಸಮ್‌ ಚೌದರಿ ಗೆಲುವು ಪಡೆದಿದ್ದಾರೆ. 97,165 ಮತಗಳನ್ನು ಅವರು ಗಳಿಸಿದ್ದರೆ, ಎಸ್‌ಪಿಯ ಮಿತ್ರ ಪಕ್ಷ ಆರ್‌ಎಲ್‌ಡಿಯ ಅಭ್ಯರ್ಥಿ ನೀರಜ್ ಚೌದರಿಯವರು 95,720 ಮತಗಳನ್ನು ಪಡೆದಿದ್ದಾರೆ. ಬಿಜೆಪಿ 1,445 ಮತಗಳ ಅಂತರದಲ್ಲಿ ಗೆದ್ದಿದೆ. ಎಐಎಂಐಎಂ ಅಭ್ಯರ್ಥಿ 2,290 ಮತಗಳನ್ನು ಗಳಿಸಿದ್ದರೆ, ಮೂರನೇ ಸ್ಥಾನದಲ್ಲಿರುವ ಬಿಎಸ್‌ಪಿ ಅಭ್ಯರ್ಥಿ 52,035 ಮತಗಳನ್ನು ತಮ್ಮ ತೆಕ್ಕೆಗೆ ಹಾಕಿಕೊಂಡಿದ್ದಾರೆ.

***

ನಾಕೂರ್‌ ಕ್ಷೇತ್ರ

ನಾಕೂರ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ಚೌದರಿಯವರು 315 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಎಸ್‌ಪಿ ಹಾಗೂ ಬಿಜೆಪಿಯ ಭಾರಿ ಪೈಪೋಟಿಯ ನಡುವೆ ಬಿಎಸ್‌ಪಿ ಮೂರನೇ ಸ್ಥಾನದಲ್ಲಿದೆ. ಬಿಜೆಪಿ ಅಭ್ಯರ್ಥಿ 1,04,114 ಮತಗಳನ್ನು ಗಳಿಸಿದರೆ, ಎಸ್‌ಪಿ ಅಭ್ಯರ್ಥಿ ಧರಂಸಿಂಗ್ ಸೈನಿ 1,03,799 ಮತಗಳನ್ನು ಪಡೆದು ಸೋತಿದ್ದಾರೆ. ಎಐಎಂಐಎಂ ಪಕ್ಷದ ರಿಜ್ವಾನಾ 3,593 ಮತಗಳನ್ನು ಪಡೆದಿದ್ದಾರೆ. ಬಿಎಸ್‌ಪಿಯು ಮುಸ್ಲಿಂ ಅಭ್ಯರ್ಥಿ ಸಾಹಿಲ್‌ ಖಾನ್‌ ಅವರನ್ನು ಕಣಕ್ಕಿಳಿಸಿ 55,112 ಮತಗಳನ್ನು ಗಳಿಸಿದೆ.

***

ಕುರ್ಸಿ ಕ್ಷೇತ್ರ

ಕುರ್ಸಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಕೇಂದ್ರ ಪ್ರತಾಪ್ ವರ್ಮಾ 118,720 ಮತಗಳನ್ನು ಪಡೆಯುವ ಮೂಲಕ 217 ಮತಗಳ ಅಂತರದಲ್ಲಿ ಎಸ್‌ಪಿ ಅಭ್ಯರ್ಥಿ ರಾಕೇಶ್‌ ವರ್ಮಾ ಅವರನ್ನು ಸೋಲಿಸಿದ್ದಾರೆ. ರಾಕೇಶ್‌‌ 118,503 ಮತಗಳನ್ನು ಗಳಿಸಿದ್ದರು. ಮೂರನೇ ಸ್ಥಾನದಲ್ಲಿರುವ ಬಿಎಸ್‌ಪಿ ಅಭ್ಯರ್ಥಿ ಕುಮಾರಿ ಮೀತಾ ಗೌತಮ್‌ 35,561 ಮತಗಳನ್ನು ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ಎಐಎಂಐಎಂ ಅಭ್ಯರ್ಥಿ ಕಮೈಲ್ ಅಶ್ರಫ್ ಖಾನ್‌ 8,541 ಮತಗಳನ್ನು ತಮ್ಮ ತೆಕ್ಕೆಗೆ ಹಾಕಿಕೊಂಡಿದ್ದಾರೆ. ಐದನೇ ಸ್ಥಾನದಲ್ಲಿರುವ ಉರ್ಮಿಳಾ ಪಟೆ 2,803 ಮತಗಳನ್ನು ಗಳಿಸಿದ್ದರು.

***

ಸುಲ್ತಾನ್‌ಪುರ್‌ ಕ್ಷೇತ್ರ

ಸುಲ್ತಾನ್‌ಪುರ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿನೋದ್‌ ಸಿಂಗ್‌ ಅವರು 92,715, ಎಸ್‌ಪಿ ಅಭ್ಯರ್ಥಿ ಅನೂಪ್‌ ಸಂದ 91,706 ಮತ ಗಳಿಸಿದ್ದಾರೆ. 1,009 ಮತಗಳ ಅಂತರದಲ್ಲಿ ಬಿಜೆಪಿ ಗೆದ್ದಿದ್ದು, ಎಐಎಂಐಎಂನ ಮಿರ್ಜಾ ಅಕ್ರಮ್ ಬೇಗ್‌ 5,251 ಮತ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬಿಎಸ್‌ಪಿಯ ದೇವಿ ಶಹಾ ಮಿಶ್ರಾ ಅವರು 22,521 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನಿಂದ ಮುಸ್ಲಿಂ ಅಭ್ಯರ್ಥಿ ಫಿರೋಜ್‌ ಖಾನ್‌ ಕಣದಲ್ಲಿದ್ದು, 2,655 ಮತಗಳನ್ನು ಗಳಿಸಿದ್ದಾರೆ.

***

ಔರೈ

ಔರೈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಧೀನನಾಥ್ ಭಾಸ್ಕರ್‌ 93,691, ಎಸ್‌ಪಿಯ ಅಂಜನಿಯವರು 92,044 ಮತ ಗಳಿಸಿದ್ದರು. ಬಿಜೆಪಿ 1,647 ಮತಗಳ ಅಂತರದಲ್ಲಿ ಗೆದ್ದಿದೆ. ಮೂರನೇ ಸ್ಥಾನದಲ್ಲಿರುವ ಬಿಎಸ್‌ಪಿಯ ಕಮಲಾ ಶಂಕರ್‌ 28,413 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ 2,694 ಮತ, ವಿಎಸ್‌ಐಪಿ 2,499 ಮತ, ನೋಟಾ 2,205 ಮತಗಳು, ಎಐಎಂಐಎಂ ಪಕ್ಷದ ತೆದೈ 2,190 ಮತಗಳನ್ನು ಗಳಿಸಿದ್ದಾರೆ.

***

ಶಹಗಂಜ್ ಕ್ಷೇತ್ರ

ಬಿಜೆಪಿ ಮಿತ್ರ ಪಕ್ಷವಾದ ನಿಶಾದ್ ಪಾರ್ಟಿಯ ಅಭ್ಯರ್ಥಿ ರಮೇಶ್ 719 ಮತಗಳ ಅಂತರದಲ್ಲಿ ಎಸ್‌ಪಿ ಅಭ್ಯರ್ಥಿ ಶೈಲೇಂದ್ರ ಯಾದವ್‌ ವಿರುದ್ಧ ಜಯ ಗಳಿಸಿದ್ದಾರೆ. ಶೈಲೇಂದ್ರ ಅವರು 86,514 ಮತ ಗಳಿಸಿದ್ದರೆ ರಮೇಶ್ 87,233 ಮತ ಪಡೆದಿದ್ದಾರೆ. ಬಿಎಸ್‌ಪಿಯ ಇಂದರ್‌ದೇವ್‌ 48,957 ಮತ ಗಳಿಸಿದ್ದಾರೆ. ಎಐಎಂಐಎಂ ಪಕ್ಷದ ನಯಾದ್ ಅಹಮದ್ ಖಾನ್‌ 8,128 ಮತ ಗಳಿಸಿದ್ದಾರೆ. ವಿಎಸ್‌ಐಪಿ 2,551 ಮತ, ಕಾಂಗ್ರೆಸ್ 1,529 ಮತ ಪಡೆದಿವೆ.

***

ಹೀಗೆ ಹಲವು ಕ್ಷೇತ್ರಗಳಲ್ಲಿ ಎಸ್‌ಪಿ ಮತಗಳು ವಿಭಜನೆಯಾಗಿರುವ ಸಾಧ್ಯತೆಯನ್ನು ಚುನಾವಣಾ ಫಲಿತಾಂಶ ತೆರೆದಿಟ್ಟಿದೆ. ಉತ್ತರ ಪ್ರದೇಶದ ಚುಣಾವಣೆಯಲ್ಲಿ ಓವೈಸಿಯವರ ಉಪಸ್ಥಿತಿ, ಮುಸ್ಲಿಂ ಮತಬ್ಯಾಂಕ್‌ ಮೂಲಕ ಗುರುತಿಸಿಕೊಂಡಿರುವ ಎಸ್‌ಪಿಗೆ ಹೊಡೆತ ನೀಡಿದೆ ಎಂದೇ ಚರ್ಚೆಗಳಾಗುತ್ತಿವೆ. ಚುನಾವಣಾ ರಾಜಕಾರಣದಲ್ಲಿ ಜಾತಿಗಳ ಸಮೀಕರಣ, ಕೋಮು ಧ್ರುವೀಕರಣ ಹಾಗೂ ಸಂಪತ್ತಿನ ಕ್ರೋಢೀಕರಣ ಕೆಲಸ ಮಾಡುತ್ತದೆ ಎಂಬುದು ಓಪನ್‌ ಸಿಕ್ರೆಟ್‌. ಮಾಯವತಿಯವರ ಮೌನವೂ ಬಿಜೆಪಿಯ ದಿಗ್ವಿಜಯಕ್ಕೆ ಕಾರಣವಾಗಿರಬಹುದೆಂಬ ಸಾಧ್ಯತೆಯನ್ನು ಹೊರಗಿಟ್ಟು ನೋಡಲಾಗದು.


ಇದನ್ನೂ ಓದಿರಿ: ಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....