Homeಮುಖಪುಟಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

- Advertisement -
- Advertisement -

ಉದ್ಯೋಗ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ ಭಾರತೀಯ ಯುವಕರನ್ನು ಉಕ್ರೇನ್ ವಿರುದ್ದದ ಯುದ್ದಕ್ಕೆ ಕಳುಹಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವಂತೆ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌ ಜೈಶಂಕರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಯುವಕರ ಸಹಾಯಕ್ಕೆ ಧಾವಿಸುವಂತೆ ಓವೈಸಿ ಆಗ್ರಹಿಸಿದ್ದಾರೆ.

ನಿರುದ್ಯೋಗಿ ಯುವಕರನ್ನು ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನೀಡುವ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಲಾಗಿದೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ನಿರ್ವಹಣೆಯ ತರಬೇತಿ ಕೊಟ್ಟು ಬಲವಂತವಾಗಿ ಯುದ್ಧಭೂಮಿಗೆ ಕಳುಹಿಸಲಾಗಿದೆ. ಪ್ರಸ್ತುತ ಯುವಕರು ಉಕ್ರೇನ್ ಗಡಿಯ ಮಾರಿಯುಪೋಲ್, ಖಾರ್ಕಿವ್ ಮತ್ತು ಡೊನೆಟ್ಸ್ಕ್‌ ಪ್ರದೇಶಗಳಲ್ಲಿ ರಷ್ಯಾದ ಖಾಸಗಿ ಸೇನೆ ವ್ಯಾಗ್ನರ್‌ನ ಭಾಗವಾಗಿ ಸಿಲುಕಿಕೊಂಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ತೆಲಂಗಾಣದ ಇಬ್ಬರು, ಕರ್ನಾಟಕದ ಕಲಬುರಗಿಯ ಮೂವರು, ಕಾಶ್ಮೀರದ ಇಬ್ಬರು ಮತ್ತು ಗುಜರಾತ್ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ಯುವಕರ ಕುಟುಂಬಸ್ಥರು ನನ್ನನ್ನು ಭೇಟಿಯಾಗಿ ವಿಷಯ ತಿಳಿಸಿದ ಬಳಿಕ, ನಾನು ಸಚಿವ ಜೈಶಂಕರ್ ಮತ್ತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ತಿಳಿಸಿದ್ದಾರೆ.

“ತೆಲಂಗಾಣ, ಗುಜರಾತ್, ಕರ್ನಾಟಕ, ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದ ನಿರುದ್ಯೋಗಿ ಯುವಕರಿಗೆ
ಸೆಕ್ಯೂರಿಟಿ ಗಾರ್ಡ್ ಕೆಲಸ ನೀಡುವುದಾಗಿ ಸುಳ್ಳು ಹೇಳಿ ರಷ್ಯಾದ ಏಜೆಂಟರು ಕರೆಸಿಕೊಂಡಿದ್ದಾರೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ಕೊಟ್ಟು ಬಲವಂತವಾಗಿ ಯುದ್ಧ ಭೂಮಿಗೆ ಕಳುಹಿಸಲಾಗಿದೆ. ನಾನು ಯುವಕರ ಕುಟುಂಬಸ್ಥರನ್ನು ಭೇಟಿಯಾಗಿದ್ದೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರು ನನ್ನಿಂದ ಸಹಾಯ ಕೇಳಿದ್ದರು. ಯುವಕರನ್ನು ಮರಳಿ ಕರೆತರುವಂತೆ ನಾನು ವಿದೇಶಾಂಗ ಸಚಿವರಿಗೆ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಏಜೆಂಟ್‌ಗಳಲ್ಲಿ ಒಬ್ಬನಾದ, ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿರುವ ‘ಬಾಬಾ ಬ್ಲಾಗ್ಸ್’ ಎಂಬ ಯೂಟ್ಯೂಬ್ ಚಾನೆಲ್‌ನ ಫೈಝಲ್ ಖಾನ್ ಎಂಬಾತ ಯುವಕರನ್ನು ವಂಚಿಸಿದ್ದಾನೆ. ಪ್ರಸ್ತುತ ಆತ ದುಬೈನಲ್ಲಿದ್ದಾನೆ. ವಿವಿಧ ದೇಶಗಳಲ್ಲಿ ಹೇಗೆ ಉದ್ಯೋಗ ಮತ್ತು ಉದ್ಯೋಗದ ಪರವಾನಿಗೆ ಪಡೆಯುವುದು ಎಂಬುವುದರ ಕುರಿತು ಈತ ವಿಡಿಯೋಗಳನ್ನು ಮಾಡುತ್ತಿರುತ್ತಾನೆ. ಈತನ ಜೊತೆಗೆ ಮುಂಬೈನಿಂದ ಸುಫಿಯಾನ್ ಮತ್ತು ಪೂಜಾ, ರಮೇಶ್ ಮತ್ತು ಮೊಯಿನ್ ರಷ್ಯಾದಲ್ಲಿ ಭಾರತೀಯ ಏಜೆಂಟ್‌ಗಳು ಎಂದು ಓವೈಸಿ ಹೇಳಿದ್ದಾರೆ.

ಯುದ್ಧ ಭೂಮಿಗೆ ತಮ್ಮನ್ನು ಹೇಗೆ ತಳ್ಳಲಾಯಿತು ಎಂದು ಯುವಕರು ವಿಡಿಯೋ ಕಳುಹಿಸಿದ್ದಾರೆ. ಅವರಲ್ಲಿ ಒಬ್ಬ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುವಕರು ಹೇಳಿದ್ದಾಗಿ ಓವೈಸಿ ಮಾಹಿತಿ ನೀಡಿದ್ದಾರೆ.

ರಷ್ಯಾದಲ್ಲಿ ಸಿಲುಕಿದವರಲ್ಲಿ ಹೈದರಾಬಾದ್‌ನ ನಾಂಪಲ್ಲಿಯ ಮೊಹಮ್ಮದ್ ಅಫ್ಸಾನ್ ಕೂಡ ಒಬ್ಬರು, ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಫ್ಸಾನ್ ಪತ್ನಿ ಅಸ್ಮಾ ಶಿರೀನ್, ತನ್ನ ಪತಿಯನ್ನು ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಷ್ಯಾದ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಅಧಿಕಾರಿಯೊಬ್ಬರು ದೃಢಪಡಿಸಿದಂತೆ, ಕಳೆದ ಒಂದು ವರ್ಷದಲ್ಲಿ ತನ್ನ ಮಾಸ್ಕೋ ನೇಮಕಾತಿ ಕೇಂದ್ರದಲ್ಲಿ ರಷ್ಯಾದ ಸೇನೆಯು ಸುಮಾರು 100 ಭಾರತೀಯರನ್ನು ನೇಮಿಸಿಕೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವಾರು ದೇಶಗಳ ಜನರನ್ನು ಕಳೆದ ಒಂದೂವರೆ ವರ್ಷಗಳಿಂದ ರಷ್ಯಾದ ಸೇನೆಯು ನೇಮಿಸಿಕೊಳ್ಳುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪ್ರಾರಂಭಗೊಂಡು ಎರಡು ವರ್ಷಗಳಾಗುತ್ತಾ ಬಂದಿದೆ. ಉಭಯ ರಾಷ್ಟ್ರಗಳ ನಡುವೆ ಮಾತುಕತೆಗಳು ನಿಂತು ಹೋಗಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಂಘರ್ಷಕ್ಕೆ ಸಿದ್ಧರಾಗಿದ್ದಾರೆ. ತಮ್ಮ ಭೂ ಪ್ರದೇಶಗಳನ್ನು ಮರಳಿ ಪಡೆಯಲು ಉಕ್ರೇನ್ ಮುಂದಾಗಲಿರುವ ಕಾರಣ 2024ರಲ್ಲಿ ಯುದ್ಧ ತೀವ್ರಗೊಳ್ಳಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. ಉಕ್ರೇನ್‌ ಬೇಷರತ್ ಆಗಿ ಶರಣಾಗುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ರಷ್ಯಾ ಪಟ್ಟು ಹಿಡಿದಿದೆ.

ಇದನ್ನೂ ಓದಿ : ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...