Homeಮುಖಪುಟಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

- Advertisement -
- Advertisement -

ಉದ್ಯೋಗ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ ಭಾರತೀಯ ಯುವಕರನ್ನು ಉಕ್ರೇನ್ ವಿರುದ್ದದ ಯುದ್ದಕ್ಕೆ ಕಳುಹಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವಂತೆ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌ ಜೈಶಂಕರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಯುವಕರ ಸಹಾಯಕ್ಕೆ ಧಾವಿಸುವಂತೆ ಓವೈಸಿ ಆಗ್ರಹಿಸಿದ್ದಾರೆ.

ನಿರುದ್ಯೋಗಿ ಯುವಕರನ್ನು ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನೀಡುವ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಲಾಗಿದೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ನಿರ್ವಹಣೆಯ ತರಬೇತಿ ಕೊಟ್ಟು ಬಲವಂತವಾಗಿ ಯುದ್ಧಭೂಮಿಗೆ ಕಳುಹಿಸಲಾಗಿದೆ. ಪ್ರಸ್ತುತ ಯುವಕರು ಉಕ್ರೇನ್ ಗಡಿಯ ಮಾರಿಯುಪೋಲ್, ಖಾರ್ಕಿವ್ ಮತ್ತು ಡೊನೆಟ್ಸ್ಕ್‌ ಪ್ರದೇಶಗಳಲ್ಲಿ ರಷ್ಯಾದ ಖಾಸಗಿ ಸೇನೆ ವ್ಯಾಗ್ನರ್‌ನ ಭಾಗವಾಗಿ ಸಿಲುಕಿಕೊಂಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ತೆಲಂಗಾಣದ ಇಬ್ಬರು, ಕರ್ನಾಟಕದ ಕಲಬುರಗಿಯ ಮೂವರು, ಕಾಶ್ಮೀರದ ಇಬ್ಬರು ಮತ್ತು ಗುಜರಾತ್ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ಯುವಕರ ಕುಟುಂಬಸ್ಥರು ನನ್ನನ್ನು ಭೇಟಿಯಾಗಿ ವಿಷಯ ತಿಳಿಸಿದ ಬಳಿಕ, ನಾನು ಸಚಿವ ಜೈಶಂಕರ್ ಮತ್ತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ತಿಳಿಸಿದ್ದಾರೆ.

“ತೆಲಂಗಾಣ, ಗುಜರಾತ್, ಕರ್ನಾಟಕ, ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದ ನಿರುದ್ಯೋಗಿ ಯುವಕರಿಗೆ
ಸೆಕ್ಯೂರಿಟಿ ಗಾರ್ಡ್ ಕೆಲಸ ನೀಡುವುದಾಗಿ ಸುಳ್ಳು ಹೇಳಿ ರಷ್ಯಾದ ಏಜೆಂಟರು ಕರೆಸಿಕೊಂಡಿದ್ದಾರೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ಕೊಟ್ಟು ಬಲವಂತವಾಗಿ ಯುದ್ಧ ಭೂಮಿಗೆ ಕಳುಹಿಸಲಾಗಿದೆ. ನಾನು ಯುವಕರ ಕುಟುಂಬಸ್ಥರನ್ನು ಭೇಟಿಯಾಗಿದ್ದೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರು ನನ್ನಿಂದ ಸಹಾಯ ಕೇಳಿದ್ದರು. ಯುವಕರನ್ನು ಮರಳಿ ಕರೆತರುವಂತೆ ನಾನು ವಿದೇಶಾಂಗ ಸಚಿವರಿಗೆ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಏಜೆಂಟ್‌ಗಳಲ್ಲಿ ಒಬ್ಬನಾದ, ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿರುವ ‘ಬಾಬಾ ಬ್ಲಾಗ್ಸ್’ ಎಂಬ ಯೂಟ್ಯೂಬ್ ಚಾನೆಲ್‌ನ ಫೈಝಲ್ ಖಾನ್ ಎಂಬಾತ ಯುವಕರನ್ನು ವಂಚಿಸಿದ್ದಾನೆ. ಪ್ರಸ್ತುತ ಆತ ದುಬೈನಲ್ಲಿದ್ದಾನೆ. ವಿವಿಧ ದೇಶಗಳಲ್ಲಿ ಹೇಗೆ ಉದ್ಯೋಗ ಮತ್ತು ಉದ್ಯೋಗದ ಪರವಾನಿಗೆ ಪಡೆಯುವುದು ಎಂಬುವುದರ ಕುರಿತು ಈತ ವಿಡಿಯೋಗಳನ್ನು ಮಾಡುತ್ತಿರುತ್ತಾನೆ. ಈತನ ಜೊತೆಗೆ ಮುಂಬೈನಿಂದ ಸುಫಿಯಾನ್ ಮತ್ತು ಪೂಜಾ, ರಮೇಶ್ ಮತ್ತು ಮೊಯಿನ್ ರಷ್ಯಾದಲ್ಲಿ ಭಾರತೀಯ ಏಜೆಂಟ್‌ಗಳು ಎಂದು ಓವೈಸಿ ಹೇಳಿದ್ದಾರೆ.

ಯುದ್ಧ ಭೂಮಿಗೆ ತಮ್ಮನ್ನು ಹೇಗೆ ತಳ್ಳಲಾಯಿತು ಎಂದು ಯುವಕರು ವಿಡಿಯೋ ಕಳುಹಿಸಿದ್ದಾರೆ. ಅವರಲ್ಲಿ ಒಬ್ಬ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುವಕರು ಹೇಳಿದ್ದಾಗಿ ಓವೈಸಿ ಮಾಹಿತಿ ನೀಡಿದ್ದಾರೆ.

ರಷ್ಯಾದಲ್ಲಿ ಸಿಲುಕಿದವರಲ್ಲಿ ಹೈದರಾಬಾದ್‌ನ ನಾಂಪಲ್ಲಿಯ ಮೊಹಮ್ಮದ್ ಅಫ್ಸಾನ್ ಕೂಡ ಒಬ್ಬರು, ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಫ್ಸಾನ್ ಪತ್ನಿ ಅಸ್ಮಾ ಶಿರೀನ್, ತನ್ನ ಪತಿಯನ್ನು ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಷ್ಯಾದ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಅಧಿಕಾರಿಯೊಬ್ಬರು ದೃಢಪಡಿಸಿದಂತೆ, ಕಳೆದ ಒಂದು ವರ್ಷದಲ್ಲಿ ತನ್ನ ಮಾಸ್ಕೋ ನೇಮಕಾತಿ ಕೇಂದ್ರದಲ್ಲಿ ರಷ್ಯಾದ ಸೇನೆಯು ಸುಮಾರು 100 ಭಾರತೀಯರನ್ನು ನೇಮಿಸಿಕೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವಾರು ದೇಶಗಳ ಜನರನ್ನು ಕಳೆದ ಒಂದೂವರೆ ವರ್ಷಗಳಿಂದ ರಷ್ಯಾದ ಸೇನೆಯು ನೇಮಿಸಿಕೊಳ್ಳುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪ್ರಾರಂಭಗೊಂಡು ಎರಡು ವರ್ಷಗಳಾಗುತ್ತಾ ಬಂದಿದೆ. ಉಭಯ ರಾಷ್ಟ್ರಗಳ ನಡುವೆ ಮಾತುಕತೆಗಳು ನಿಂತು ಹೋಗಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಂಘರ್ಷಕ್ಕೆ ಸಿದ್ಧರಾಗಿದ್ದಾರೆ. ತಮ್ಮ ಭೂ ಪ್ರದೇಶಗಳನ್ನು ಮರಳಿ ಪಡೆಯಲು ಉಕ್ರೇನ್ ಮುಂದಾಗಲಿರುವ ಕಾರಣ 2024ರಲ್ಲಿ ಯುದ್ಧ ತೀವ್ರಗೊಳ್ಳಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. ಉಕ್ರೇನ್‌ ಬೇಷರತ್ ಆಗಿ ಶರಣಾಗುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ರಷ್ಯಾ ಪಟ್ಟು ಹಿಡಿದಿದೆ.

ಇದನ್ನೂ ಓದಿ : ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...