Homeಮುಖಪುಟಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

- Advertisement -
- Advertisement -

ಉದ್ಯೋಗ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ ಭಾರತೀಯ ಯುವಕರನ್ನು ಉಕ್ರೇನ್ ವಿರುದ್ದದ ಯುದ್ದಕ್ಕೆ ಕಳುಹಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವಂತೆ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌ ಜೈಶಂಕರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಯುವಕರ ಸಹಾಯಕ್ಕೆ ಧಾವಿಸುವಂತೆ ಓವೈಸಿ ಆಗ್ರಹಿಸಿದ್ದಾರೆ.

ನಿರುದ್ಯೋಗಿ ಯುವಕರನ್ನು ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನೀಡುವ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಲಾಗಿದೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ನಿರ್ವಹಣೆಯ ತರಬೇತಿ ಕೊಟ್ಟು ಬಲವಂತವಾಗಿ ಯುದ್ಧಭೂಮಿಗೆ ಕಳುಹಿಸಲಾಗಿದೆ. ಪ್ರಸ್ತುತ ಯುವಕರು ಉಕ್ರೇನ್ ಗಡಿಯ ಮಾರಿಯುಪೋಲ್, ಖಾರ್ಕಿವ್ ಮತ್ತು ಡೊನೆಟ್ಸ್ಕ್‌ ಪ್ರದೇಶಗಳಲ್ಲಿ ರಷ್ಯಾದ ಖಾಸಗಿ ಸೇನೆ ವ್ಯಾಗ್ನರ್‌ನ ಭಾಗವಾಗಿ ಸಿಲುಕಿಕೊಂಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ತೆಲಂಗಾಣದ ಇಬ್ಬರು, ಕರ್ನಾಟಕದ ಕಲಬುರಗಿಯ ಮೂವರು, ಕಾಶ್ಮೀರದ ಇಬ್ಬರು ಮತ್ತು ಗುಜರಾತ್ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ಯುವಕರ ಕುಟುಂಬಸ್ಥರು ನನ್ನನ್ನು ಭೇಟಿಯಾಗಿ ವಿಷಯ ತಿಳಿಸಿದ ಬಳಿಕ, ನಾನು ಸಚಿವ ಜೈಶಂಕರ್ ಮತ್ತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ತಿಳಿಸಿದ್ದಾರೆ.

“ತೆಲಂಗಾಣ, ಗುಜರಾತ್, ಕರ್ನಾಟಕ, ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದ ನಿರುದ್ಯೋಗಿ ಯುವಕರಿಗೆ
ಸೆಕ್ಯೂರಿಟಿ ಗಾರ್ಡ್ ಕೆಲಸ ನೀಡುವುದಾಗಿ ಸುಳ್ಳು ಹೇಳಿ ರಷ್ಯಾದ ಏಜೆಂಟರು ಕರೆಸಿಕೊಂಡಿದ್ದಾರೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ಕೊಟ್ಟು ಬಲವಂತವಾಗಿ ಯುದ್ಧ ಭೂಮಿಗೆ ಕಳುಹಿಸಲಾಗಿದೆ. ನಾನು ಯುವಕರ ಕುಟುಂಬಸ್ಥರನ್ನು ಭೇಟಿಯಾಗಿದ್ದೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರು ನನ್ನಿಂದ ಸಹಾಯ ಕೇಳಿದ್ದರು. ಯುವಕರನ್ನು ಮರಳಿ ಕರೆತರುವಂತೆ ನಾನು ವಿದೇಶಾಂಗ ಸಚಿವರಿಗೆ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಏಜೆಂಟ್‌ಗಳಲ್ಲಿ ಒಬ್ಬನಾದ, ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿರುವ ‘ಬಾಬಾ ಬ್ಲಾಗ್ಸ್’ ಎಂಬ ಯೂಟ್ಯೂಬ್ ಚಾನೆಲ್‌ನ ಫೈಝಲ್ ಖಾನ್ ಎಂಬಾತ ಯುವಕರನ್ನು ವಂಚಿಸಿದ್ದಾನೆ. ಪ್ರಸ್ತುತ ಆತ ದುಬೈನಲ್ಲಿದ್ದಾನೆ. ವಿವಿಧ ದೇಶಗಳಲ್ಲಿ ಹೇಗೆ ಉದ್ಯೋಗ ಮತ್ತು ಉದ್ಯೋಗದ ಪರವಾನಿಗೆ ಪಡೆಯುವುದು ಎಂಬುವುದರ ಕುರಿತು ಈತ ವಿಡಿಯೋಗಳನ್ನು ಮಾಡುತ್ತಿರುತ್ತಾನೆ. ಈತನ ಜೊತೆಗೆ ಮುಂಬೈನಿಂದ ಸುಫಿಯಾನ್ ಮತ್ತು ಪೂಜಾ, ರಮೇಶ್ ಮತ್ತು ಮೊಯಿನ್ ರಷ್ಯಾದಲ್ಲಿ ಭಾರತೀಯ ಏಜೆಂಟ್‌ಗಳು ಎಂದು ಓವೈಸಿ ಹೇಳಿದ್ದಾರೆ.

ಯುದ್ಧ ಭೂಮಿಗೆ ತಮ್ಮನ್ನು ಹೇಗೆ ತಳ್ಳಲಾಯಿತು ಎಂದು ಯುವಕರು ವಿಡಿಯೋ ಕಳುಹಿಸಿದ್ದಾರೆ. ಅವರಲ್ಲಿ ಒಬ್ಬ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುವಕರು ಹೇಳಿದ್ದಾಗಿ ಓವೈಸಿ ಮಾಹಿತಿ ನೀಡಿದ್ದಾರೆ.

ರಷ್ಯಾದಲ್ಲಿ ಸಿಲುಕಿದವರಲ್ಲಿ ಹೈದರಾಬಾದ್‌ನ ನಾಂಪಲ್ಲಿಯ ಮೊಹಮ್ಮದ್ ಅಫ್ಸಾನ್ ಕೂಡ ಒಬ್ಬರು, ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಫ್ಸಾನ್ ಪತ್ನಿ ಅಸ್ಮಾ ಶಿರೀನ್, ತನ್ನ ಪತಿಯನ್ನು ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಷ್ಯಾದ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಅಧಿಕಾರಿಯೊಬ್ಬರು ದೃಢಪಡಿಸಿದಂತೆ, ಕಳೆದ ಒಂದು ವರ್ಷದಲ್ಲಿ ತನ್ನ ಮಾಸ್ಕೋ ನೇಮಕಾತಿ ಕೇಂದ್ರದಲ್ಲಿ ರಷ್ಯಾದ ಸೇನೆಯು ಸುಮಾರು 100 ಭಾರತೀಯರನ್ನು ನೇಮಿಸಿಕೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವಾರು ದೇಶಗಳ ಜನರನ್ನು ಕಳೆದ ಒಂದೂವರೆ ವರ್ಷಗಳಿಂದ ರಷ್ಯಾದ ಸೇನೆಯು ನೇಮಿಸಿಕೊಳ್ಳುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪ್ರಾರಂಭಗೊಂಡು ಎರಡು ವರ್ಷಗಳಾಗುತ್ತಾ ಬಂದಿದೆ. ಉಭಯ ರಾಷ್ಟ್ರಗಳ ನಡುವೆ ಮಾತುಕತೆಗಳು ನಿಂತು ಹೋಗಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಂಘರ್ಷಕ್ಕೆ ಸಿದ್ಧರಾಗಿದ್ದಾರೆ. ತಮ್ಮ ಭೂ ಪ್ರದೇಶಗಳನ್ನು ಮರಳಿ ಪಡೆಯಲು ಉಕ್ರೇನ್ ಮುಂದಾಗಲಿರುವ ಕಾರಣ 2024ರಲ್ಲಿ ಯುದ್ಧ ತೀವ್ರಗೊಳ್ಳಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. ಉಕ್ರೇನ್‌ ಬೇಷರತ್ ಆಗಿ ಶರಣಾಗುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ರಷ್ಯಾ ಪಟ್ಟು ಹಿಡಿದಿದೆ.

ಇದನ್ನೂ ಓದಿ : ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...