Homeಮುಖಪುಟಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣ: ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಮಾಲಕನ ಬಂಧನ

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣ: ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಮಾಲಕನ ಬಂಧನ

- Advertisement -
- Advertisement -

ಇದುವರೆಗೆ ಸುಮಾರು 20 ಮಕ್ಕಳ ಸಾವಿಗೆ ಕಾರಣವಾಗಿರುವ ‘ಕೋಲ್ಡ್ರಿಫ್ ಕೆಮ್ಮಿನ ಸಿರಪ್’ ತಯಾರಿಸಿದ ತಮಿಳುನಾಡಿನ ಔಷಧ ಕಂಪೆನಿ ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲಕ ರಂಗನಾಥನ್ ಗೋವಿಂದನ್ ಅವರನ್ನು ಮಧ್ಯಪ್ರದೇಶದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬುಧವಾರ (ಅ.8) ತಡರಾತ್ರಿ ಚೆನ್ನೈನಿಂದ ಬಂಧಿಸಿದೆ.

ರಂಗನಾಥನ್ ಅವರನ್ನು ಚೆನ್ನೈ ನಗರದ ಕೋಡಂಬಾಕಂನಲ್ಲಿರುವ ಮನೆಯಿಂದ ವಶಕ್ಕೆ ಪಡೆದ ಎಸ್‌ಐಟಿ ತಂಡ, ನಂತರ ಪ್ರಾಥಮಿಕ ವಿಚಾರಣೆಗಾಗಿ ಕಾಂಚೀಪುರಂ ಜಿಲ್ಲೆಯ ಸುಂಗುವರ್ಚತ್ರಂ ಪೊಲೀಸ್ ಠಾಣೆಗೆ ಕರೆದೊಯ್ದಿದೆ. ಸ್ಥಳೀಯ ಅಶೋಕ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಎಸ್ಐಟಿಗೆ ಸಾಥ್ ನೀಡಿದ್ದಾರೆ ಎಂದು ವರದಿಯಾಗಿದೆ.

ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಪೂರೈಕೆ ಮಾಡಿದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ಗಳನ್ನು ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 1 ರಿಂದ 7 ವರ್ಷದೊಳಗಿನ ಮಕ್ಕಳು ಸಾವಿಗೀಡಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಹೆಚ್ಚು ಮಕ್ಕಳ ಸಾವು ಸಂಭವಿಸಿದೆ. ಈ ಹಿನ್ನೆಲೆ, ಅಲ್ಲಿನ ಸರ್ಕಾರ ತನಿಖೆಗೆ ಎಸ್‌ಐಟಿ ರಚಿಸಿದೆ.

ಅಕ್ಟೋಬರ್ 2ರಂದು, ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶಕರು ನೀಡಿದ ವರದಿಯು ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನ ಮಾದರಿಗಳು ಪ್ರಮಾಣಿತ ಗುಣಮಟ್ಟ (Not of Standard Quality-NSQ)ಹೊಂದಿಲ್ಲ ಎಂದಿತ್ತು.

ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಶೇಕಡ 48.6ರಷ್ಟು ಡೈಥಿಲೀನ್ ಗ್ಲೈಕೋಲ್ ಇದ್ದು, ಇದು ತೀವ್ರ ಮೂತ್ರಪಿಂಡ ಮತ್ತು ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿತ್ತು.

ಬಂಧಿತ ರಂಗನಾಥನ್ ಅವರನ್ನು ಹೆಚ್ಚಿನ ಕಸ್ಟಡಿಯಲ್ ವಿಚಾರಣೆಗಾಗಿ ಮಧ್ಯಪ್ರದೇಶಕ್ಕೆ ವರ್ಗಾಯಿಸಲು ಟ್ರಾನ್ಸಿಟ್ ವಾರಂಟ್‌ನ ಪ್ರಕ್ರಿಯೆ ನಡೆಯುತ್ತಿದೆ.

ರಂಗನಾಥನ್ ಅವರ ಬಂಧನದ ನಂತರ, ಎಸ್‌ಐಟಿ ಸ್ಥಳೀಯ ಅಧಿಕಾರಿಗಳೊಂದಿಗೆ ಸೇರಿ ಕಾಂಚೀಪುರಂನ ಸುಂಗುವರ್ಚತ್ರಂನಲ್ಲಿ ಬಾಡಿಗೆಗೆ ಪಡೆದಿರುವ 4,500 ಚದರ ಅಡಿ ಆವರಣದಲ್ಲಿ ನೆಲೆಗೊಂಡಿರುವ ಶ್ರೇಸನ್ ಫಾರ್ಮಾದ ಉತ್ಪಾದನಾ ಘಟಕದಲ್ಲಿ ಪರಿಶೀಲನೆ ನಡೆಸಿದೆ.

ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು, ಉತ್ಪಾದನಾ ಶಿಷ್ಟಾಚಾರಗಳ ಹಲವಾರು ಉಲ್ಲಂಘನೆಗಳನ್ನು ಕಂಡುಕೊಂಡ ನಂತರ, ಘಟಕವನ್ನು ಸೀಲ್ ಮಾಡಿದ್ದಾರೆ.

ವರದಿಗಳ ಪ್ರಕಾರ, ಶ್ರೇಸನ್ ಫಾರ್ಮಾ ಕೆಮ್ಮಿನ ಸಿರಪ್ ತಯಾರಿಕೆಗೆ ಬೇಕಾದ ಉನ್ನತ ಗುಣಮಟ್ಟದ (ಫಾರ್ಮಾ-ಗ್ರೇಡ್) ಪ್ರೊಪಿಲೀನ್ ಗ್ಲೈಕಾಲ್ ಎಂಬ ಪದಾರ್ಥವನ್ನು ಖರೀದಿಸದೆ, ಬದಲಿಗೆ ಡಿಇಜಿ (ಡೈಥಿಲೀನ್ ಗ್ಲೈಕಾಲ್) ಎಂಬ ಹಾನಿಕಾರಕ ಕಲ್ಮಶವನ್ನು ಒಳಗೊಂಡಿರುವ ಕೆಳದರ್ಜೆಯ ವಸ್ತುವನ್ನು ಬಳಸಿದೆ.

ಕಂಪನಿಯ ಆವರಣದಿಂದ ವಶಪಡಿಸಿಕೊಂಡ ಮಾದರಿಗಳಲ್ಲಿ ವಿಷಕಾರಿ ವಸ್ತು ಇರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ, ತನಿಖೆಯನ್ನು ಮುಂದುವರಿಸಲು ಮಧ್ಯಪ್ರದೇಶದ ಎಸ್‌ಐಟಿ ರಂಗನಾಥನ್ ಅವರನ್ನು ಕರೆದೊಯ್ಯುವ ಸಾಧ್ಯತೆ ಇದೆ.

ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...