Homeಮುಖಪುಟಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣ: ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಮಾಲಕನ ಬಂಧನ

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣ: ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಮಾಲಕನ ಬಂಧನ

- Advertisement -
- Advertisement -

ಇದುವರೆಗೆ ಸುಮಾರು 20 ಮಕ್ಕಳ ಸಾವಿಗೆ ಕಾರಣವಾಗಿರುವ ‘ಕೋಲ್ಡ್ರಿಫ್ ಕೆಮ್ಮಿನ ಸಿರಪ್’ ತಯಾರಿಸಿದ ತಮಿಳುನಾಡಿನ ಔಷಧ ಕಂಪೆನಿ ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ನ ಮಾಲಕ ರಂಗನಾಥನ್ ಗೋವಿಂದನ್ ಅವರನ್ನು ಮಧ್ಯಪ್ರದೇಶದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬುಧವಾರ (ಅ.8) ತಡರಾತ್ರಿ ಚೆನ್ನೈನಿಂದ ಬಂಧಿಸಿದೆ.

ರಂಗನಾಥನ್ ಅವರನ್ನು ಚೆನ್ನೈ ನಗರದ ಕೋಡಂಬಾಕಂನಲ್ಲಿರುವ ಮನೆಯಿಂದ ವಶಕ್ಕೆ ಪಡೆದ ಎಸ್‌ಐಟಿ ತಂಡ, ನಂತರ ಪ್ರಾಥಮಿಕ ವಿಚಾರಣೆಗಾಗಿ ಕಾಂಚೀಪುರಂ ಜಿಲ್ಲೆಯ ಸುಂಗುವರ್ಚತ್ರಂ ಪೊಲೀಸ್ ಠಾಣೆಗೆ ಕರೆದೊಯ್ದಿದೆ. ಸ್ಥಳೀಯ ಅಶೋಕ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಎಸ್ಐಟಿಗೆ ಸಾಥ್ ನೀಡಿದ್ದಾರೆ ಎಂದು ವರದಿಯಾಗಿದೆ.

ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಪೂರೈಕೆ ಮಾಡಿದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ಗಳನ್ನು ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 1 ರಿಂದ 7 ವರ್ಷದೊಳಗಿನ ಮಕ್ಕಳು ಸಾವಿಗೀಡಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಹೆಚ್ಚು ಮಕ್ಕಳ ಸಾವು ಸಂಭವಿಸಿದೆ. ಈ ಹಿನ್ನೆಲೆ, ಅಲ್ಲಿನ ಸರ್ಕಾರ ತನಿಖೆಗೆ ಎಸ್‌ಐಟಿ ರಚಿಸಿದೆ.

ಅಕ್ಟೋಬರ್ 2ರಂದು, ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶಕರು ನೀಡಿದ ವರದಿಯು ಶ್ರೇಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನ ಮಾದರಿಗಳು ಪ್ರಮಾಣಿತ ಗುಣಮಟ್ಟ (Not of Standard Quality-NSQ)ಹೊಂದಿಲ್ಲ ಎಂದಿತ್ತು.

ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಶೇಕಡ 48.6ರಷ್ಟು ಡೈಥಿಲೀನ್ ಗ್ಲೈಕೋಲ್ ಇದ್ದು, ಇದು ತೀವ್ರ ಮೂತ್ರಪಿಂಡ ಮತ್ತು ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿತ್ತು.

ಬಂಧಿತ ರಂಗನಾಥನ್ ಅವರನ್ನು ಹೆಚ್ಚಿನ ಕಸ್ಟಡಿಯಲ್ ವಿಚಾರಣೆಗಾಗಿ ಮಧ್ಯಪ್ರದೇಶಕ್ಕೆ ವರ್ಗಾಯಿಸಲು ಟ್ರಾನ್ಸಿಟ್ ವಾರಂಟ್‌ನ ಪ್ರಕ್ರಿಯೆ ನಡೆಯುತ್ತಿದೆ.

ರಂಗನಾಥನ್ ಅವರ ಬಂಧನದ ನಂತರ, ಎಸ್‌ಐಟಿ ಸ್ಥಳೀಯ ಅಧಿಕಾರಿಗಳೊಂದಿಗೆ ಸೇರಿ ಕಾಂಚೀಪುರಂನ ಸುಂಗುವರ್ಚತ್ರಂನಲ್ಲಿ ಬಾಡಿಗೆಗೆ ಪಡೆದಿರುವ 4,500 ಚದರ ಅಡಿ ಆವರಣದಲ್ಲಿ ನೆಲೆಗೊಂಡಿರುವ ಶ್ರೇಸನ್ ಫಾರ್ಮಾದ ಉತ್ಪಾದನಾ ಘಟಕದಲ್ಲಿ ಪರಿಶೀಲನೆ ನಡೆಸಿದೆ.

ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು, ಉತ್ಪಾದನಾ ಶಿಷ್ಟಾಚಾರಗಳ ಹಲವಾರು ಉಲ್ಲಂಘನೆಗಳನ್ನು ಕಂಡುಕೊಂಡ ನಂತರ, ಘಟಕವನ್ನು ಸೀಲ್ ಮಾಡಿದ್ದಾರೆ.

ವರದಿಗಳ ಪ್ರಕಾರ, ಶ್ರೇಸನ್ ಫಾರ್ಮಾ ಕೆಮ್ಮಿನ ಸಿರಪ್ ತಯಾರಿಕೆಗೆ ಬೇಕಾದ ಉನ್ನತ ಗುಣಮಟ್ಟದ (ಫಾರ್ಮಾ-ಗ್ರೇಡ್) ಪ್ರೊಪಿಲೀನ್ ಗ್ಲೈಕಾಲ್ ಎಂಬ ಪದಾರ್ಥವನ್ನು ಖರೀದಿಸದೆ, ಬದಲಿಗೆ ಡಿಇಜಿ (ಡೈಥಿಲೀನ್ ಗ್ಲೈಕಾಲ್) ಎಂಬ ಹಾನಿಕಾರಕ ಕಲ್ಮಶವನ್ನು ಒಳಗೊಂಡಿರುವ ಕೆಳದರ್ಜೆಯ ವಸ್ತುವನ್ನು ಬಳಸಿದೆ.

ಕಂಪನಿಯ ಆವರಣದಿಂದ ವಶಪಡಿಸಿಕೊಂಡ ಮಾದರಿಗಳಲ್ಲಿ ವಿಷಕಾರಿ ವಸ್ತು ಇರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ, ತನಿಖೆಯನ್ನು ಮುಂದುವರಿಸಲು ಮಧ್ಯಪ್ರದೇಶದ ಎಸ್‌ಐಟಿ ರಂಗನಾಥನ್ ಅವರನ್ನು ಕರೆದೊಯ್ಯುವ ಸಾಧ್ಯತೆ ಇದೆ.

ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...