Homeಕೊರೊನಾಲಸಿಕೆ ಪಡೆದ ಮೂರು ತಿಂಗಳ ನಂತರ ಕೋವಿಶೀಲ್ಡ್ ರಕ್ಷಣೆ ಕ್ಷೀಣಿಸುತ್ತದೆ- ದಿ ಲ್ಯಾನ್ಸೆಟ್ ಅಧ್ಯಯನದ ವರದಿ

ಲಸಿಕೆ ಪಡೆದ ಮೂರು ತಿಂಗಳ ನಂತರ ಕೋವಿಶೀಲ್ಡ್ ರಕ್ಷಣೆ ಕ್ಷೀಣಿಸುತ್ತದೆ- ದಿ ಲ್ಯಾನ್ಸೆಟ್ ಅಧ್ಯಯನದ ವರದಿ

- Advertisement -
- Advertisement -

ಆಕ್ಸ್‌ಫರ್ಡ್-ಅಸ್ಟ್ರಾ ಜೆನೆಕಾ ಕಂಪನಿ ತಯಾರಿಸಿರುವ ಕೊರೊನಾದ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ ಪಡೆದ ಮೂರು ತಿಂಗಳ ನಂತರ ಅದರ ರಕ್ಷಣೆ ಕ್ಷೀಣಿಸುತ್ತಾ ಹೋಗುತ್ತದೆ ಎಂಬ ಅಂಶವನ್ನು ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನ ಹೊರ ಹಾಕಿದೆ.

ಬ್ರೆಜಿಲ್ ಮತ್ತು ಸ್ಕಾಟ್ಲೆಂಡ್‌ನಲ್ಲಿನ ಸಂಶೋಧನೆಗಳು ಭಾರತದಲ್ಲಿ ಕೋವಿಶೀಲ್ಡ್ ಎಂದು ಕರೆಯಲ್ಪಡುವ ಅಸ್ಟ್ರಾಜೆನೆಕದ ಲಸಿಕೆ ಪಡೆದವರು ತೀವ್ರವಾದ ಕಾಯಿಲೆಯಿಂದ ರಕ್ಷಣೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡಲು ಬೂಸ್ಟರ್ ಡೋ‌ಸ್‌ಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಸೂಚಿಸಿವೆ.

ಅಧ್ಯಯನ ನಡೆಸಿರುವ ಸಂಶೋಧಕರು ಅಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆ ಪಡೆದಿರುವ ಸ್ಕಾಟ್ಲೆಂಡ್‌ನಲ್ಲಿ 20 ಲಕ್ಷ ಜನರು ಮತ್ತು ಬ್ರೆಜಿಲ್‌ನಲ್ಲಿ 4 ಕೋಟಿ 20 ಲಕ್ಷ ಜನರ ಅಂಕಿ ಅಂಶಗಳನ್ನು ವಿಶ್ಲೇಷಿಸಿದ್ದಾರೆ.

ಸ್ಕಾಟ್ಲೆಂಡ್‌ನಲ್ಲಿ, ಕೋವಿಶೀಲ್ಡ್ ಎರಡು ಡೋಸ್ ಲಸಿಕೆ ಪಡೆದ ಸುಮಾರು ಐದು ತಿಂಗಳ ನಂತರ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗುವ /ಕೊರೊನಾದಿಂದ ಸಾಯುವವರರು ಸುಮಾರು ಐದು ಪಟ್ಟು ಹೆಚ್ಚಾಗಿದ್ದಾರೆ ಎಂದು ಸಂಶೋಧಕರು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ಪ್ರಶ್ನಿಸಿದ್ದ ಅರ್ಜಿ ವಜಾ; 1 ಲಕ್ಷ ರೂ. ದಂಡ!

ಲಸಿಕೆಯ ಪರಿಣಾಮಕಾರಿತ್ವದ ಕುಸಿತವು ಸುಮಾರು ಮೂರು ತಿಂಗಳುಗಳಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ, ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಅಪಾಯವು ಎರಡನೇ ಡೋಸ್ ಪಡೆದ ಎರಡು ವಾರಗಳ ನಂತರ ದ್ವಿಗುಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

“ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಸಾಧನವಾಗಿವೆ. ಆದರೆ ಅವುಗಳ ಪರಿಣಾಮಕಾರಿತ್ವದಲ್ಲಿ ಕ್ಷೀಣಿಸುತ್ತಿರುವುದು ಕಳವಳಕಾರಿಯಾಗಿದೆ” ಎಂದು ಯುಕೆ ಎಡಿನ್ಬರ್ಗ್ ವಿಶ್ವವಿದ್ಯಾಲಯದ ಪ್ರೊಫೆಸರ್ ಶೇಖ್ ಹೇಳಿದ್ದಾರೆ.

“ಆಕ್ಸ್‌ಫರ್ಡ್-ಆಸ್ಟ್ರಾಜೆನೆಕಾ ಲಸಿಕೆ ರಕ್ಷಣೆ ಕ್ಷೀಣಿಸುವಿಕೆಯು ಯಾವಾಗ ಆರಂಭವಾಗುತ್ತೆ ಎಂಬುದನ್ನು ಗುರುತಿಸುವ ಮೂಲಕ, ಗರಿಷ್ಠ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಗಳನ್ನು ನಡೆಸಬೇಕು” ಎಂದು ಅಜೀಜ್ ಶೇಖ್ ಹೇಳಿದ್ದಾರೆ.

“ನಮ್ಮ ಕೆಲಸವು ಬೂಸ್ಟರ್‌ಗಳನ್ನು ಪಡೆಯುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ನೀವು ಎರಡು ಡೋಸ್ ಆಕ್ಸ್‌ಫರ್ಡ್ ಅಸ್ಟ್ರಾಜೆನೆಕಾ ಲಸಿಕೆಯನ್ನು ಹೊಂದಿದ್ದರೂ ಸಹ, ನಿಮಗೆ ಸಾಧ್ಯವಾದ ತಕ್ಷಣ ಬೂಸ್ಟರ್‌ ಡೋಸ್ ಪಡೆಯಿರಿ” ಎಂದು ಯುಕೆ ಗ್ಲಾಸ್ಗೋ ವಿಶ್ವವಿದ್ಯಾಲಯದ ಪ್ರೊಫೆಸರ್ ಶ್ರೀನಿವಾಸ ವಿಟ್ಟಲ್ ಕಾಟಿಕಿರೆಡ್ಡ್ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರದಿಂದ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಾಗ‌ಲೇ ಎರ‌ಡು ಡೋಜ್ ಆಗಿದೆ ಈಗ‌ ಮೂರ‌ನೇ ಬೂಸ್ಟ‌ರ್ ಡೋಜ್ ಬೇರೆ… ಅದಾದ‌ನ‌0ತ‌ರ್ 4 ನೇ, 5 ನೇ 6 ನೇ… ಭೂಸ್ಟ‌ರ್ ಡೋಜ್…. ಹೀಗೆ ತ‌ಗೊಳ್ತಾ ಹೋಗೋದು. ಇವೆಲ್ಲಾ ಆದ್ರೂ ಡಿಷ್ಟ‌ನ್ಸಿ0ಗ್ ಮಾಸ್ಕ್, ಲಾಕ್ ಡೌನ್ ತ‌ಪ್ಪಿದ್ದ‌ಲ್ಲ‌.

LEAVE A REPLY

Please enter your comment!
Please enter your name here

- Advertisment -

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...