Homeಕರೋನಾ ತಲ್ಲಣಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

- Advertisement -
- Advertisement -

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಪ್ರಯೋಗ ನಡೆಸಲು ಭಾರತೀಯ ನಿಯಂತ್ರಕರಿಗೆ ಮುಂದಿನ ಒಂದು ವಾರದೊಳಗೆ ಅರ್ಜಿ ಸಲ್ಲಿಸಲಿದೆ ಎಂದು ತಿಳಿಸಿದೆ.

ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಲಸಿಕೆ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ್ಲಾ, “ಪ್ರಯೋಗಗಳು ಭರವಸೆಯ ಫಲಿತಾಂಶಗಳನ್ನು ತೋರಿಸಿವೆ ಮತ್ತು ಅದರ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ. ನಾವು ಭಾರತೀಯ ನಿಯಂತ್ರಕರಿಗೆ ಪರವಾನಗಿ ಪ್ರಯೋಗಗಳಿಗೆ ವಾರಗಳೊಳಗೆ ಅರ್ಜಿ ಸಲ್ಲಿಸುತ್ತೇವೆ. ಅವರು ನಮಗೆ ಅನುಮತಿ ನೀಡಿದ ಕೂಡಲೇ, ನಾವು ಭಾರತದಲ್ಲಿ ಲಸಿಕೆಗಾಗಿ ಪ್ರಯೋಗಗಳನ್ನು ಪ್ರಾರಂಭಿಸುತ್ತೇವೆ. ಇದಲ್ಲದೆ, ಶೀಘ್ರದಲ್ಲೇ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ಪ್ರಾರಂಭಿಸುತ್ತೇವೆ.” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

ವರ್ಷಾಂತ್ಯಕ್ಕೆ ಲಸಿಕೆ ಸಿದ್ಧವಾಗಬಹುದು ಎಂದು ಸಂಶೋಧಕರು ಸೂಚಿಸುತ್ತಿದ್ದಾರೆ. ಚುಚ್ಚುಮದ್ದಿನಿಂದ ಶೇಕಡಾ 91 ಕ್ಕಿಂತ ಹೆಚ್ಚು ಸ್ವಯಂಸೇವಕರು ಕೊರೊನಾ ವೈರಸ್ ವಿರುದ್ಧ ರೋಗನಿರೋಧಕ ಪ್ರತಿಕ್ರಿಯೆಯನ್ನು ಉಂಟುಮಾಡಿದ್ದಾರೆ ಎಂದು ಫಲಿತಾಂಶಗಳು ತೋರಿಸಿದವು.

ಈ ಪ್ರಯೋಗವು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ನಡೆಯಿತು. ಪ್ರತಿರಕ್ಷಣಾ (ಇಮ್ಯೂನಿಟೆ) ಪ್ರತಿಕ್ರಿಯೆಗಳು ಕನಿಷ್ಠ 56 ದಿನಗಳವರೆಗೆ ಪ್ರಬಲವಾಗಿದ್ದವು ಎಂದಿದ್ದಾರೆ.

AZD1222 ಎಂದು ಕರೆಯಲ್ಪಡುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆಯನ್ನು ಪ್ರಮುಖ ಔಷಧೀಯ ಸಂಸ್ಥೆ ಅಸ್ಟ್ರಾಜೆನೆಕಾ ತಯಾರಿಸುತ್ತಿದೆ. ಯುಕೆ ಸರ್ಕಾರವು ಈಗಾಗಲೇ 100 ಮಿಲಿಯನ್ ಡೋಸ್‌ಗಳನ್ನು ಆದೇಶಿಸಿದೆ.

ಫಲಿತಾಂಶಗಳ ಪ್ರಕಾರ, ಲಸಿಕೆಯು ಟಿ ಸೆಲ್ ಮತ್ತು ಆಂಟಿಬಾಡಿ ಇಮ್ಯುನಿಟಿಯನ್ನು ಹೆಚ್ಚಿಸಿದೆ. ಈ ಎರಡೂ ವಿಷಯದಲ್ಲಿ ಲಸಿಕೆಯು ಹೆಚ್ಚಿನ ಪ್ರತಿಕ್ರಿಯೆ ನೀಡಿದೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಟಿ ಕೋಶಗಳ ಇಮ್ಯೂನಿಟಿಯು ಎರಡು ವಾರಗಳ ನಂತರ ಉತ್ತುಂಗಕ್ಕೇರಿತು ನಂತರ 56 ನೇ ದಿನಕ್ಕೆ ಸ್ವಲ್ಪ ಇಳಿಯಿತು ಎಂದು ಅಧ್ಯಯವು ಹೇಳಿದೆ.

ಮತ್ತೊಂದೆಡೆ, ಆಂಟಿಬಾಡಿ ಇಮ್ಯೂನಿಟಿಯು ನಾಲ್ಕು ವಾರಗಳ ನಂತರ ಉತ್ತುಂಗಕ್ಕೇರಿತು ಹಾಗೂ 56 ನೇ ದಿನಗಳವರೆಗೆ ಉಳಿಯಿತು ಎಂದು ಅಧ್ಯಯನ ಹೇಳಿದೆ. ಇದು ಇನ್ನೂ ಹೆಚ್ಚು ಕಾಲ ಉಳಿಯಬಹುದು ಎಂದು ಅದು ಸೂಚಿಸುತ್ತದೆ.


ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...