Homeಕರೋನಾ ತಲ್ಲಣಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

- Advertisement -
- Advertisement -

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಪ್ರಯೋಗ ನಡೆಸಲು ಭಾರತೀಯ ನಿಯಂತ್ರಕರಿಗೆ ಮುಂದಿನ ಒಂದು ವಾರದೊಳಗೆ ಅರ್ಜಿ ಸಲ್ಲಿಸಲಿದೆ ಎಂದು ತಿಳಿಸಿದೆ.

ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಲಸಿಕೆ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ್ಲಾ, “ಪ್ರಯೋಗಗಳು ಭರವಸೆಯ ಫಲಿತಾಂಶಗಳನ್ನು ತೋರಿಸಿವೆ ಮತ್ತು ಅದರ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ. ನಾವು ಭಾರತೀಯ ನಿಯಂತ್ರಕರಿಗೆ ಪರವಾನಗಿ ಪ್ರಯೋಗಗಳಿಗೆ ವಾರಗಳೊಳಗೆ ಅರ್ಜಿ ಸಲ್ಲಿಸುತ್ತೇವೆ. ಅವರು ನಮಗೆ ಅನುಮತಿ ನೀಡಿದ ಕೂಡಲೇ, ನಾವು ಭಾರತದಲ್ಲಿ ಲಸಿಕೆಗಾಗಿ ಪ್ರಯೋಗಗಳನ್ನು ಪ್ರಾರಂಭಿಸುತ್ತೇವೆ. ಇದಲ್ಲದೆ, ಶೀಘ್ರದಲ್ಲೇ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ಪ್ರಾರಂಭಿಸುತ್ತೇವೆ.” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

ವರ್ಷಾಂತ್ಯಕ್ಕೆ ಲಸಿಕೆ ಸಿದ್ಧವಾಗಬಹುದು ಎಂದು ಸಂಶೋಧಕರು ಸೂಚಿಸುತ್ತಿದ್ದಾರೆ. ಚುಚ್ಚುಮದ್ದಿನಿಂದ ಶೇಕಡಾ 91 ಕ್ಕಿಂತ ಹೆಚ್ಚು ಸ್ವಯಂಸೇವಕರು ಕೊರೊನಾ ವೈರಸ್ ವಿರುದ್ಧ ರೋಗನಿರೋಧಕ ಪ್ರತಿಕ್ರಿಯೆಯನ್ನು ಉಂಟುಮಾಡಿದ್ದಾರೆ ಎಂದು ಫಲಿತಾಂಶಗಳು ತೋರಿಸಿದವು.

ಈ ಪ್ರಯೋಗವು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ನಡೆಯಿತು. ಪ್ರತಿರಕ್ಷಣಾ (ಇಮ್ಯೂನಿಟೆ) ಪ್ರತಿಕ್ರಿಯೆಗಳು ಕನಿಷ್ಠ 56 ದಿನಗಳವರೆಗೆ ಪ್ರಬಲವಾಗಿದ್ದವು ಎಂದಿದ್ದಾರೆ.

AZD1222 ಎಂದು ಕರೆಯಲ್ಪಡುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆಯನ್ನು ಪ್ರಮುಖ ಔಷಧೀಯ ಸಂಸ್ಥೆ ಅಸ್ಟ್ರಾಜೆನೆಕಾ ತಯಾರಿಸುತ್ತಿದೆ. ಯುಕೆ ಸರ್ಕಾರವು ಈಗಾಗಲೇ 100 ಮಿಲಿಯನ್ ಡೋಸ್‌ಗಳನ್ನು ಆದೇಶಿಸಿದೆ.

ಫಲಿತಾಂಶಗಳ ಪ್ರಕಾರ, ಲಸಿಕೆಯು ಟಿ ಸೆಲ್ ಮತ್ತು ಆಂಟಿಬಾಡಿ ಇಮ್ಯುನಿಟಿಯನ್ನು ಹೆಚ್ಚಿಸಿದೆ. ಈ ಎರಡೂ ವಿಷಯದಲ್ಲಿ ಲಸಿಕೆಯು ಹೆಚ್ಚಿನ ಪ್ರತಿಕ್ರಿಯೆ ನೀಡಿದೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಟಿ ಕೋಶಗಳ ಇಮ್ಯೂನಿಟಿಯು ಎರಡು ವಾರಗಳ ನಂತರ ಉತ್ತುಂಗಕ್ಕೇರಿತು ನಂತರ 56 ನೇ ದಿನಕ್ಕೆ ಸ್ವಲ್ಪ ಇಳಿಯಿತು ಎಂದು ಅಧ್ಯಯವು ಹೇಳಿದೆ.

ಮತ್ತೊಂದೆಡೆ, ಆಂಟಿಬಾಡಿ ಇಮ್ಯೂನಿಟಿಯು ನಾಲ್ಕು ವಾರಗಳ ನಂತರ ಉತ್ತುಂಗಕ್ಕೇರಿತು ಹಾಗೂ 56 ನೇ ದಿನಗಳವರೆಗೆ ಉಳಿಯಿತು ಎಂದು ಅಧ್ಯಯನ ಹೇಳಿದೆ. ಇದು ಇನ್ನೂ ಹೆಚ್ಚು ಕಾಲ ಉಳಿಯಬಹುದು ಎಂದು ಅದು ಸೂಚಿಸುತ್ತದೆ.


ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...