Homeಕರೋನಾ ತಲ್ಲಣಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

- Advertisement -
- Advertisement -

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಪ್ರಯೋಗ ನಡೆಸಲು ಭಾರತೀಯ ನಿಯಂತ್ರಕರಿಗೆ ಮುಂದಿನ ಒಂದು ವಾರದೊಳಗೆ ಅರ್ಜಿ ಸಲ್ಲಿಸಲಿದೆ ಎಂದು ತಿಳಿಸಿದೆ.

ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಲಸಿಕೆ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ್ಲಾ, “ಪ್ರಯೋಗಗಳು ಭರವಸೆಯ ಫಲಿತಾಂಶಗಳನ್ನು ತೋರಿಸಿವೆ ಮತ್ತು ಅದರ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ. ನಾವು ಭಾರತೀಯ ನಿಯಂತ್ರಕರಿಗೆ ಪರವಾನಗಿ ಪ್ರಯೋಗಗಳಿಗೆ ವಾರಗಳೊಳಗೆ ಅರ್ಜಿ ಸಲ್ಲಿಸುತ್ತೇವೆ. ಅವರು ನಮಗೆ ಅನುಮತಿ ನೀಡಿದ ಕೂಡಲೇ, ನಾವು ಭಾರತದಲ್ಲಿ ಲಸಿಕೆಗಾಗಿ ಪ್ರಯೋಗಗಳನ್ನು ಪ್ರಾರಂಭಿಸುತ್ತೇವೆ. ಇದಲ್ಲದೆ, ಶೀಘ್ರದಲ್ಲೇ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ಪ್ರಾರಂಭಿಸುತ್ತೇವೆ.” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

ವರ್ಷಾಂತ್ಯಕ್ಕೆ ಲಸಿಕೆ ಸಿದ್ಧವಾಗಬಹುದು ಎಂದು ಸಂಶೋಧಕರು ಸೂಚಿಸುತ್ತಿದ್ದಾರೆ. ಚುಚ್ಚುಮದ್ದಿನಿಂದ ಶೇಕಡಾ 91 ಕ್ಕಿಂತ ಹೆಚ್ಚು ಸ್ವಯಂಸೇವಕರು ಕೊರೊನಾ ವೈರಸ್ ವಿರುದ್ಧ ರೋಗನಿರೋಧಕ ಪ್ರತಿಕ್ರಿಯೆಯನ್ನು ಉಂಟುಮಾಡಿದ್ದಾರೆ ಎಂದು ಫಲಿತಾಂಶಗಳು ತೋರಿಸಿದವು.

ಈ ಪ್ರಯೋಗವು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ನಡೆಯಿತು. ಪ್ರತಿರಕ್ಷಣಾ (ಇಮ್ಯೂನಿಟೆ) ಪ್ರತಿಕ್ರಿಯೆಗಳು ಕನಿಷ್ಠ 56 ದಿನಗಳವರೆಗೆ ಪ್ರಬಲವಾಗಿದ್ದವು ಎಂದಿದ್ದಾರೆ.

AZD1222 ಎಂದು ಕರೆಯಲ್ಪಡುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆಯನ್ನು ಪ್ರಮುಖ ಔಷಧೀಯ ಸಂಸ್ಥೆ ಅಸ್ಟ್ರಾಜೆನೆಕಾ ತಯಾರಿಸುತ್ತಿದೆ. ಯುಕೆ ಸರ್ಕಾರವು ಈಗಾಗಲೇ 100 ಮಿಲಿಯನ್ ಡೋಸ್‌ಗಳನ್ನು ಆದೇಶಿಸಿದೆ.

ಫಲಿತಾಂಶಗಳ ಪ್ರಕಾರ, ಲಸಿಕೆಯು ಟಿ ಸೆಲ್ ಮತ್ತು ಆಂಟಿಬಾಡಿ ಇಮ್ಯುನಿಟಿಯನ್ನು ಹೆಚ್ಚಿಸಿದೆ. ಈ ಎರಡೂ ವಿಷಯದಲ್ಲಿ ಲಸಿಕೆಯು ಹೆಚ್ಚಿನ ಪ್ರತಿಕ್ರಿಯೆ ನೀಡಿದೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಟಿ ಕೋಶಗಳ ಇಮ್ಯೂನಿಟಿಯು ಎರಡು ವಾರಗಳ ನಂತರ ಉತ್ತುಂಗಕ್ಕೇರಿತು ನಂತರ 56 ನೇ ದಿನಕ್ಕೆ ಸ್ವಲ್ಪ ಇಳಿಯಿತು ಎಂದು ಅಧ್ಯಯವು ಹೇಳಿದೆ.

ಮತ್ತೊಂದೆಡೆ, ಆಂಟಿಬಾಡಿ ಇಮ್ಯೂನಿಟಿಯು ನಾಲ್ಕು ವಾರಗಳ ನಂತರ ಉತ್ತುಂಗಕ್ಕೇರಿತು ಹಾಗೂ 56 ನೇ ದಿನಗಳವರೆಗೆ ಉಳಿಯಿತು ಎಂದು ಅಧ್ಯಯನ ಹೇಳಿದೆ. ಇದು ಇನ್ನೂ ಹೆಚ್ಚು ಕಾಲ ಉಳಿಯಬಹುದು ಎಂದು ಅದು ಸೂಚಿಸುತ್ತದೆ.


ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...