Homeಕರೋನಾ ತಲ್ಲಣಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಉತ್ಪಾದಿಸುತ್ತಿರುವ ಇಂಗ್ಲೆಂಡ್​​ನ ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಔಷಧ ತಯಾರಿಕಾ ಕಂಪನಿ ತಮ್ಮ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಶೇಕಡಾ 70.4 ರಷ್ಟು ಪರಿಣಾಮಕಾರಿ ಎಂದು ಸೋಮವಾರ ಹೇಳಿವೆ.

ಬ್ರಿಟನ್ ಮತ್ತು ಬ್ರೆಜಿಲ್‌ನಲ್ಲಿ ನಡೆದ ಕೊನೆಯ ಹಂತದ ಲಸಿಕೆ ಪ್ರಯೋಗಗಳ ಮಾಹಿತಿಯ ಪ್ರಕಾರ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಒಂದು ತಿಂಗಳ ಅಂತರದಲ್ಲಿ ಎರಡು ಪೂರ್ಣ ಡೋಸ್ ನೀಡಿದಾಗ ಅದು ಶೇಕಡಾ 90 ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಲಸಿಕೆಯ ಸಾಮರ್ಥ್ಯ ಮತ್ತು ಸುರಕ್ಷತೆಯು COVID-19 ವಿರುದ್ಧದ ಹೋರಾಟದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ. ಜೊತೆಗೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲಿ ತಕ್ಷಣದ ಪರಿಣಾಮ ಬೀರುತ್ತದೆ” ಎಂದು ಅಸ್ಟ್ರಾಜೆನೆಕಾದ ಮುಖ್ಯ ಕಾರ್ಯನಿರ್ವಾಹಕ ಪ್ಯಾಸ್ಕಲ್ ಸೊರಿಯೊಟ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

 

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಅಸ್ಟ್ರಾಜೆನೆಕಾ, ಗೇಟ್ಸ್ ಫೌಂಡೇಶನ್ ಮತ್ತು ಗೇವಿ ವಾಕೆನ್ಸಿ ಅಲಯನ್ಸ್  ಕಂಪನಿಗಳು ಪತ್ಯೇಕವಾಗಿ ವಿಶ್ವದಾದ್ಯಂತ ಲಸಿಕೆ ಪೂರೈಕೆಗಾಗಿ ಒಂದು ಬಿಲಿಯನ್ ಕೊರೊನಾ ಲಸಿಕೆಯನ್ನು ಉತ್ಪಾದಿಸುತ್ತಿವೆ.

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ “ಆಕ್ಸ್‌ಫರ್ಡ್ ಲಸಿಕೆ ಪ್ರಯೋಗಗಳಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ ’ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ. ಆಕ್ಸ್‌ಫರ್ಡ್ ವ್ಯಾಕ್ಸಿನ್ ಅನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಹುದು’ ಎಂದು ತಿಳಿಸಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಪ್ರಗತಿ; ಮನುಷ್ಯರ ಮೇಲೆ ಪ್ರಯೋಗ

ಕೊರೊನಾ ಲಸಿಕೆ ತಯಾರಕ ಮತ್ತೊಂದು ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದರು.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ ತಿಳಿಸಿದ್ದರು.

ಇನ್ನು ಅಮೆರಿಕಾ ಮೂಲದ ಮಾಡರ್ನಾ ಇಂಕ್ ತನ್ನ ಪ್ರಾಯೋಗಿಕ ಲಸಿಕೆಯ  ಪ್ರಾಥಮಿಕ ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ 94.5% ಪರಿಣಾಮಕಾರಿ ಎಂದು ಸಾಬೀತಾಗಿದೆ ಎಂದು ನವೆಂಬರ್ 16 ರಂದು ಹೇಳಿದೆ.


ಇದನ್ನೂ ಓದಿ: ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...