Homeಕರೋನಾ ತಲ್ಲಣಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಉತ್ಪಾದಿಸುತ್ತಿರುವ ಇಂಗ್ಲೆಂಡ್​​ನ ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಔಷಧ ತಯಾರಿಕಾ ಕಂಪನಿ ತಮ್ಮ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಶೇಕಡಾ 70.4 ರಷ್ಟು ಪರಿಣಾಮಕಾರಿ ಎಂದು ಸೋಮವಾರ ಹೇಳಿವೆ.

ಬ್ರಿಟನ್ ಮತ್ತು ಬ್ರೆಜಿಲ್‌ನಲ್ಲಿ ನಡೆದ ಕೊನೆಯ ಹಂತದ ಲಸಿಕೆ ಪ್ರಯೋಗಗಳ ಮಾಹಿತಿಯ ಪ್ರಕಾರ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಒಂದು ತಿಂಗಳ ಅಂತರದಲ್ಲಿ ಎರಡು ಪೂರ್ಣ ಡೋಸ್ ನೀಡಿದಾಗ ಅದು ಶೇಕಡಾ 90 ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಲಸಿಕೆಯ ಸಾಮರ್ಥ್ಯ ಮತ್ತು ಸುರಕ್ಷತೆಯು COVID-19 ವಿರುದ್ಧದ ಹೋರಾಟದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ. ಜೊತೆಗೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲಿ ತಕ್ಷಣದ ಪರಿಣಾಮ ಬೀರುತ್ತದೆ” ಎಂದು ಅಸ್ಟ್ರಾಜೆನೆಕಾದ ಮುಖ್ಯ ಕಾರ್ಯನಿರ್ವಾಹಕ ಪ್ಯಾಸ್ಕಲ್ ಸೊರಿಯೊಟ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

 

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಅಸ್ಟ್ರಾಜೆನೆಕಾ, ಗೇಟ್ಸ್ ಫೌಂಡೇಶನ್ ಮತ್ತು ಗೇವಿ ವಾಕೆನ್ಸಿ ಅಲಯನ್ಸ್  ಕಂಪನಿಗಳು ಪತ್ಯೇಕವಾಗಿ ವಿಶ್ವದಾದ್ಯಂತ ಲಸಿಕೆ ಪೂರೈಕೆಗಾಗಿ ಒಂದು ಬಿಲಿಯನ್ ಕೊರೊನಾ ಲಸಿಕೆಯನ್ನು ಉತ್ಪಾದಿಸುತ್ತಿವೆ.

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ “ಆಕ್ಸ್‌ಫರ್ಡ್ ಲಸಿಕೆ ಪ್ರಯೋಗಗಳಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ ’ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ. ಆಕ್ಸ್‌ಫರ್ಡ್ ವ್ಯಾಕ್ಸಿನ್ ಅನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಹುದು’ ಎಂದು ತಿಳಿಸಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಪ್ರಗತಿ; ಮನುಷ್ಯರ ಮೇಲೆ ಪ್ರಯೋಗ

ಕೊರೊನಾ ಲಸಿಕೆ ತಯಾರಕ ಮತ್ತೊಂದು ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದರು.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ ತಿಳಿಸಿದ್ದರು.

ಇನ್ನು ಅಮೆರಿಕಾ ಮೂಲದ ಮಾಡರ್ನಾ ಇಂಕ್ ತನ್ನ ಪ್ರಾಯೋಗಿಕ ಲಸಿಕೆಯ  ಪ್ರಾಥಮಿಕ ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ 94.5% ಪರಿಣಾಮಕಾರಿ ಎಂದು ಸಾಬೀತಾಗಿದೆ ಎಂದು ನವೆಂಬರ್ 16 ರಂದು ಹೇಳಿದೆ.


ಇದನ್ನೂ ಓದಿ: ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...