Homeಕರೋನಾ ತಲ್ಲಣಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಉತ್ಪಾದಿಸುತ್ತಿರುವ ಇಂಗ್ಲೆಂಡ್​​ನ ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಔಷಧ ತಯಾರಿಕಾ ಕಂಪನಿ ತಮ್ಮ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಶೇಕಡಾ 70.4 ರಷ್ಟು ಪರಿಣಾಮಕಾರಿ ಎಂದು ಸೋಮವಾರ ಹೇಳಿವೆ.

ಬ್ರಿಟನ್ ಮತ್ತು ಬ್ರೆಜಿಲ್‌ನಲ್ಲಿ ನಡೆದ ಕೊನೆಯ ಹಂತದ ಲಸಿಕೆ ಪ್ರಯೋಗಗಳ ಮಾಹಿತಿಯ ಪ್ರಕಾರ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಒಂದು ತಿಂಗಳ ಅಂತರದಲ್ಲಿ ಎರಡು ಪೂರ್ಣ ಡೋಸ್ ನೀಡಿದಾಗ ಅದು ಶೇಕಡಾ 90 ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಲಸಿಕೆಯ ಸಾಮರ್ಥ್ಯ ಮತ್ತು ಸುರಕ್ಷತೆಯು COVID-19 ವಿರುದ್ಧದ ಹೋರಾಟದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ. ಜೊತೆಗೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲಿ ತಕ್ಷಣದ ಪರಿಣಾಮ ಬೀರುತ್ತದೆ” ಎಂದು ಅಸ್ಟ್ರಾಜೆನೆಕಾದ ಮುಖ್ಯ ಕಾರ್ಯನಿರ್ವಾಹಕ ಪ್ಯಾಸ್ಕಲ್ ಸೊರಿಯೊಟ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

 

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಅಸ್ಟ್ರಾಜೆನೆಕಾ, ಗೇಟ್ಸ್ ಫೌಂಡೇಶನ್ ಮತ್ತು ಗೇವಿ ವಾಕೆನ್ಸಿ ಅಲಯನ್ಸ್  ಕಂಪನಿಗಳು ಪತ್ಯೇಕವಾಗಿ ವಿಶ್ವದಾದ್ಯಂತ ಲಸಿಕೆ ಪೂರೈಕೆಗಾಗಿ ಒಂದು ಬಿಲಿಯನ್ ಕೊರೊನಾ ಲಸಿಕೆಯನ್ನು ಉತ್ಪಾದಿಸುತ್ತಿವೆ.

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ “ಆಕ್ಸ್‌ಫರ್ಡ್ ಲಸಿಕೆ ಪ್ರಯೋಗಗಳಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ ’ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ. ಆಕ್ಸ್‌ಫರ್ಡ್ ವ್ಯಾಕ್ಸಿನ್ ಅನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಹುದು’ ಎಂದು ತಿಳಿಸಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಪ್ರಗತಿ; ಮನುಷ್ಯರ ಮೇಲೆ ಪ್ರಯೋಗ

ಕೊರೊನಾ ಲಸಿಕೆ ತಯಾರಕ ಮತ್ತೊಂದು ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದರು.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ ತಿಳಿಸಿದ್ದರು.

ಇನ್ನು ಅಮೆರಿಕಾ ಮೂಲದ ಮಾಡರ್ನಾ ಇಂಕ್ ತನ್ನ ಪ್ರಾಯೋಗಿಕ ಲಸಿಕೆಯ  ಪ್ರಾಥಮಿಕ ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ 94.5% ಪರಿಣಾಮಕಾರಿ ಎಂದು ಸಾಬೀತಾಗಿದೆ ಎಂದು ನವೆಂಬರ್ 16 ರಂದು ಹೇಳಿದೆ.


ಇದನ್ನೂ ಓದಿ: ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...