Homeಕರೋನಾ ತಲ್ಲಣಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಉತ್ಪಾದಿಸುತ್ತಿರುವ ಇಂಗ್ಲೆಂಡ್​​ನ ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಔಷಧ ತಯಾರಿಕಾ ಕಂಪನಿ ತಮ್ಮ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಶೇಕಡಾ 70.4 ರಷ್ಟು ಪರಿಣಾಮಕಾರಿ ಎಂದು ಸೋಮವಾರ ಹೇಳಿವೆ.

ಬ್ರಿಟನ್ ಮತ್ತು ಬ್ರೆಜಿಲ್‌ನಲ್ಲಿ ನಡೆದ ಕೊನೆಯ ಹಂತದ ಲಸಿಕೆ ಪ್ರಯೋಗಗಳ ಮಾಹಿತಿಯ ಪ್ರಕಾರ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಒಂದು ತಿಂಗಳ ಅಂತರದಲ್ಲಿ ಎರಡು ಪೂರ್ಣ ಡೋಸ್ ನೀಡಿದಾಗ ಅದು ಶೇಕಡಾ 90 ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಲಸಿಕೆಯ ಸಾಮರ್ಥ್ಯ ಮತ್ತು ಸುರಕ್ಷತೆಯು COVID-19 ವಿರುದ್ಧದ ಹೋರಾಟದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ. ಜೊತೆಗೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲಿ ತಕ್ಷಣದ ಪರಿಣಾಮ ಬೀರುತ್ತದೆ” ಎಂದು ಅಸ್ಟ್ರಾಜೆನೆಕಾದ ಮುಖ್ಯ ಕಾರ್ಯನಿರ್ವಾಹಕ ಪ್ಯಾಸ್ಕಲ್ ಸೊರಿಯೊಟ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

 

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಅಸ್ಟ್ರಾಜೆನೆಕಾ, ಗೇಟ್ಸ್ ಫೌಂಡೇಶನ್ ಮತ್ತು ಗೇವಿ ವಾಕೆನ್ಸಿ ಅಲಯನ್ಸ್  ಕಂಪನಿಗಳು ಪತ್ಯೇಕವಾಗಿ ವಿಶ್ವದಾದ್ಯಂತ ಲಸಿಕೆ ಪೂರೈಕೆಗಾಗಿ ಒಂದು ಬಿಲಿಯನ್ ಕೊರೊನಾ ಲಸಿಕೆಯನ್ನು ಉತ್ಪಾದಿಸುತ್ತಿವೆ.

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ “ಆಕ್ಸ್‌ಫರ್ಡ್ ಲಸಿಕೆ ಪ್ರಯೋಗಗಳಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ ’ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ‌ಮುಂದಿನ ವರ್ಷದ (2021) ಅಂತ್ಯದ ವೇಳೆಗೆ 3 ಬಿಲಿಯನ್ ಡೋಸ್ ಲಸಿಕೆಯನ್ನು ವಿಶ್ವದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡುವ ವಿಶ್ವಾಸ ಹೊಂದಿದ್ದೇವೆ. ಆಕ್ಸ್‌ಫರ್ಡ್ ವ್ಯಾಕ್ಸಿನ್ ಅನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಹುದು’ ಎಂದು ತಿಳಿಸಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಪ್ರಗತಿ; ಮನುಷ್ಯರ ಮೇಲೆ ಪ್ರಯೋಗ

ಕೊರೊನಾ ಲಸಿಕೆ ತಯಾರಕ ಮತ್ತೊಂದು ಕಂಪನಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದರು.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ ತಿಳಿಸಿದ್ದರು.

ಇನ್ನು ಅಮೆರಿಕಾ ಮೂಲದ ಮಾಡರ್ನಾ ಇಂಕ್ ತನ್ನ ಪ್ರಾಯೋಗಿಕ ಲಸಿಕೆಯ  ಪ್ರಾಥಮಿಕ ದತ್ತಾಂಶ ವಿಶ್ಲೇಷಣೆಯ ಆಧಾರದ ಮೇಲೆ 94.5% ಪರಿಣಾಮಕಾರಿ ಎಂದು ಸಾಬೀತಾಗಿದೆ ಎಂದು ನವೆಂಬರ್ 16 ರಂದು ಹೇಳಿದೆ.


ಇದನ್ನೂ ಓದಿ: ಬೌರಿಂಗ್ ಮತ್ತು ಲೇಡಿ ಕರ್ಜನ್ ಬದಲು ಶ್ರೀ ಅಟಲ್ ಬಿಹಾರಿ ವಾಜಪೇಯಿ!: ಕನ್ನಡಿಗರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...