Homeಕರೋನಾ ತಲ್ಲಣ2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಜನಸಾಮಾನ್ಯರಿಗೆ ಏಪ್ರಿಲ್ 2021ರ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ.

- Advertisement -
- Advertisement -

ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದಿದ್ದಾರೆ.

ಬಹುಶಃ 2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು ಎಂದು ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದಾರೆ.

ವಿಶ್ವದಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಲಸಿಕೆಗಳನ್ನು ತಯಾರಿಸುವ ಪುಣೆಯ ಸೀರಮ್ ಸಂಸ್ಥೆ ಭಾರತದಲ್ಲಿ  ಲಸಿಕೆ ವಿತರಿಸಲು ಇಂಗ್ಲೆಂಡ್​​ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

“ಪ್ರತಿ ಭಾರತೀಯನಿಗೆ ಚುಚ್ಚುಮದ್ದು ಪಡೆಯಲು ಬಹುಶಃ ಎರಡು ಅಥವಾ ಮೂರು ವರ್ಷಗಳು ಬೇಕಾಗಬಹುದು, ಇದು ಕೇವಲ ಸರಬರಾಜು ನಿರ್ಬಂಧಗಳಿಂದಾಗಿ ಮಾತ್ರವಲ್ಲ, ಆದರೆ ನಿಮಗೆ ಬಜೆಟ್, ಲಸಿಕೆ, ಲಾಜಿಸ್ಟಿಕ್ಸ್, ಮೂಲಸೌಕರ್ಯಗಳು ಬೇಕು ಮತ್ತು ಜನರು ಲಸಿಕೆ ತೆಗೆದುಕೊಳ್ಳಲು ಸಿದ್ಧರಿರಬೇಕು” ಎಂದಿದ್ದಾರೆ.

ಜನಸಾಮಾನ್ಯರಿಗೆ ಲಸಿಕೆ ಯಾವ ಬೆಲೆ ಸಿಗುತ್ತದೆ ಎಂಬ ಪ್ರಶ್ನೆಗೆ, ಎರಡು ಡೋಸ್‌ಗಳಿಗೆ 5-6 ಡಾಲರ್‌ಗಳಷ್ಟು  ಅಂದರೆ ಸುಮಾರು 1,000 ರೂಪಾಯಿ ಇರುತ್ತದೆ ಎಂದಿದ್ದಾರೆ. ಜೊತೆಗೆ ’ಭಾರತ ಸರ್ಕಾರ ಲಸಿಕೆಯನ್ನು 3-4 ಯುಎಸ್ ಡಾಲರ್‌ಗೆ ಪಡೆಯಲಿದೆ. ಏಕೆಂದರೆ ಭಾರತ ದೊಡ್ಡ ಪ್ರಮಾಣದಲ್ಲಿ ವಾಕ್ಸಿನ್ ಖರೀದಿಸಲಿದೆ’ ಎಂದು ಪೂನವಾಲ್ಲಾ ತಿಳಿಸಿದ್ದಾರೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯು ವಯಸ್ಸಾದವರಲ್ಲಿಯೂ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾಬೀತಾಗಿದೆ ಎಂದು ಲಸಿಕೆಯ ಪರಿಣಾಮದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಲಸಿಕೆಯನ್ನು ಮೊದಲು ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ನೀಡಲಾಗುತ್ತದೆ ಎಂದಿದ್ದಾರೆ.


ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...