Homeಕರೋನಾ ತಲ್ಲಣ2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಜನಸಾಮಾನ್ಯರಿಗೆ ಏಪ್ರಿಲ್ 2021ರ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ.

- Advertisement -
- Advertisement -

ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲ್ಲಾ ಭಾರತದಲ್ಲಿ ಜನಸಾಮಾನ್ಯರಿಗೆ ಮುಂದಿನ ವರ್ಷದ ಏಪ್ರಿಲ್​ ವೇಳೆಗೆ ಕೊರೊನಾ ಲಸಿಕೆಯ ವಿತರಣೆ ಮಾಡಲಾಗುತ್ತದೆ ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ಫೆಬ್ರವರಿ 2021ರ ವೇಳೆಗೆ, ಜನಸಾಮಾನ್ಯರಿಗೆ ಏಪ್ರಿಲ್ ವೇಳೆಗೆ ಲಸಿಕೆ ಸಿಗಲಿದೆ. ಈ ಲಸಿಕೆಯ ಎರಡು ಡೋಸ್​​ಗಳಿಗೆ ಗರಿಷ್ಠ ಬೆಲೆ 1 ಸಾವಿರ ರೂಪಾಯಿ ಇರಲಿದೆ. ಇದು ಕೊರೊನಾ ಲಸಿಕೆಯ ಅಂತಿಮ ಪ್ರಯೋಗ ಫಲಿತಾಂಶಗಳು ಮತ್ತು ಲಸಿಕೆಗೆ ಅನುಮತಿ ಮೇಲೆ ಅವಲಂಬಿಸಿದೆ ಎಂದಿದ್ದಾರೆ.

ಬಹುಶಃ 2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು ಎಂದು ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದಾರೆ.

ವಿಶ್ವದಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಲಸಿಕೆಗಳನ್ನು ತಯಾರಿಸುವ ಪುಣೆಯ ಸೀರಮ್ ಸಂಸ್ಥೆ ಭಾರತದಲ್ಲಿ  ಲಸಿಕೆ ವಿತರಿಸಲು ಇಂಗ್ಲೆಂಡ್​​ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

“ಪ್ರತಿ ಭಾರತೀಯನಿಗೆ ಚುಚ್ಚುಮದ್ದು ಪಡೆಯಲು ಬಹುಶಃ ಎರಡು ಅಥವಾ ಮೂರು ವರ್ಷಗಳು ಬೇಕಾಗಬಹುದು, ಇದು ಕೇವಲ ಸರಬರಾಜು ನಿರ್ಬಂಧಗಳಿಂದಾಗಿ ಮಾತ್ರವಲ್ಲ, ಆದರೆ ನಿಮಗೆ ಬಜೆಟ್, ಲಸಿಕೆ, ಲಾಜಿಸ್ಟಿಕ್ಸ್, ಮೂಲಸೌಕರ್ಯಗಳು ಬೇಕು ಮತ್ತು ಜನರು ಲಸಿಕೆ ತೆಗೆದುಕೊಳ್ಳಲು ಸಿದ್ಧರಿರಬೇಕು” ಎಂದಿದ್ದಾರೆ.

ಜನಸಾಮಾನ್ಯರಿಗೆ ಲಸಿಕೆ ಯಾವ ಬೆಲೆ ಸಿಗುತ್ತದೆ ಎಂಬ ಪ್ರಶ್ನೆಗೆ, ಎರಡು ಡೋಸ್‌ಗಳಿಗೆ 5-6 ಡಾಲರ್‌ಗಳಷ್ಟು  ಅಂದರೆ ಸುಮಾರು 1,000 ರೂಪಾಯಿ ಇರುತ್ತದೆ ಎಂದಿದ್ದಾರೆ. ಜೊತೆಗೆ ’ಭಾರತ ಸರ್ಕಾರ ಲಸಿಕೆಯನ್ನು 3-4 ಯುಎಸ್ ಡಾಲರ್‌ಗೆ ಪಡೆಯಲಿದೆ. ಏಕೆಂದರೆ ಭಾರತ ದೊಡ್ಡ ಪ್ರಮಾಣದಲ್ಲಿ ವಾಕ್ಸಿನ್ ಖರೀದಿಸಲಿದೆ’ ಎಂದು ಪೂನವಾಲ್ಲಾ ತಿಳಿಸಿದ್ದಾರೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯು ವಯಸ್ಸಾದವರಲ್ಲಿಯೂ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾಬೀತಾಗಿದೆ ಎಂದು ಲಸಿಕೆಯ ಪರಿಣಾಮದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಲಸಿಕೆಯನ್ನು ಮೊದಲು ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ವೃದ್ಧರಿಗೆ ನೀಡಲಾಗುತ್ತದೆ ಎಂದಿದ್ದಾರೆ.


ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...