Homeಕರೋನಾ ತಲ್ಲಣಆಕ್ಸಿಜನ್‌ ಕೊರತೆ: ಪಂಜಾಬ್‌ನ ಖಾಸಗಿ ಆಸ್ಪತ್ರೆಯಲ್ಲಿ 6 ರೋಗಿಗಳ ಸಾವು

ಆಕ್ಸಿಜನ್‌ ಕೊರತೆ: ಪಂಜಾಬ್‌ನ ಖಾಸಗಿ ಆಸ್ಪತ್ರೆಯಲ್ಲಿ 6 ರೋಗಿಗಳ ಸಾವು

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಪಂಜಾಬ್‌‌ನ ಖಾಸಗಿ ಆಸ್ಪತ್ರೆಯಲ್ಲಿ ಐವರು ಕೊರೊನಾ ಸೋಂಕಿತರು ಸೇರಿದಂತೆ ಒಟ್ಟು ಆರು ರೋಗಿಗಳು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಅಮೃತಸರದ ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಆರು ಜನರು ಗಂಭೀರ ರೋಗಿಗಳಾದ್ದರು. ಆರು ಜನರಲ್ಲಿ ಮೂವರು ಅಮೃತಸರದವರು, ಇಬ್ಬರು ಗುರುದಾಸ್‌ಪುರದವರು ಮತ್ತು ಒಬ್ಬರು ತರಣ್ ತಾರ್ನ್‌ಗೆ ಸೇರಿದವರಾಗಿದ್ದಾರೆ. ಅವರೆಲ್ಲರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಗುರುವಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಆಮ್ಲಜನಕದ ಕೊರತೆ ಇದೆ, ರೋಗಿಗಳ ಕುಟುಂಬಸ್ಥರೆ ಅದರ ವ್ಯವಸ್ಥೆ ಮಾಡಬೇಕು ಎಂದು ಎಂದು ಆಸ್ಪತ್ರೆಯ ಸಿಬ್ಬಂದಿ ನಿನ್ನೆ ರಾತ್ರಿ ತಿಳಿಸಿದ್ದಾರೆ ಎಂದು ಸಂತ್ರಸ್ತರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಆಮ್ಲಜನಕ ಸಿಲಿಂಡರ್‌ಗಳ ಕೊರತೆಯ ಬಗ್ಗೆ ನಿನ್ನೆಯೆ ಅಮೃತಸರ ಜಿಲ್ಲಾಡಳಿತಕ್ಕೆ ತಿಳಿಸಿದ್ದು, ಆದರೆ ಯಾರೂ ತಮ್ಮ ಮಾತನ್ನು ಆಲಿಸಲಿಲ್ಲ ಎಂದು ಆಸ್ಪತ್ರೆಯು ಜಿಲ್ಲಾಡಳಿತವನ್ನು ದೂಷಿಸಿದೆ.

ವೈದ್ಯಕೀಯ ಆಮ್ಲಜನಕ ಸಿಲಿಂಡರ್‌ಗಳನ್ನು ಭರ್ತಿ ಮಾಡುವುದನ್ನು ವಿಳಂಬ ಮಾಡದಂತೆ ಅವರು ಜಿಲ್ಲಾಡಳಿತವನ್ನು ಪದೇ ಪದೇ ಕೋರಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆದರೆ ಆಮ್ಲಜನಕವನ್ನು ಪೂರೈಸುವ ಆದ್ಯತೆಯು ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ, ಅದರ ನಂತರವೇ ಖಾಸಗಿ ಆಸ್ಪತ್ರೆಗಳ ಬೇಡಿಕೆ ಈಡೇರುತ್ತದೆ ಎಂದು ಅವರಿಗೆ ತಿಳಿಸಲಾಗಿದೆ ಎಂದು TNIE ವರದಿ ಮಾಡಿದೆ.

ನೀಲಕಂಠ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಸುನಿಲ್ ದೇವಗನ್ ಮಾತನಾಡಿ, “ಆಮ್ಲಜನಕದ ಕೊರತೆಯ ಬಗ್ಗೆ ಹೇಳಿ ರೋಗಿಗಳ ಕುಟುಂಬಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ನಾವು ವಿನಂತಿಸಿದ್ದೇವೆ ಆದರೆ ಕುಟುಂಬಗಳು ಒಪ್ಪಲಿಲ್ಲ. ಜಿಲ್ಲಾಡಳಿತವು ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯನ್ನು ಮಾಡುತ್ತಿದೆ, ಇದು ಖಾಸಗಿ ಆಸ್ಪತ್ರೆಗಳಲ್ಲಿನ ಕೊರತೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...