Homeಮುಖಪುಟದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? - ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಹಲವಾರು ರಾಜ್ಯಗಳು ಆಮ್ಲಜನಕದ ತುರ್ತುಸ್ಥಿತಿಯನ್ನು ಎದುರಿಸುತ್ತಿರುವ ಸಮಯದಲ್ಲಿ ಆಮ್ಲಜನಕ ರಫ್ತು ಕುರಿತಂತೆ ಲಭ್ಯವಿರುವ ಅಧಿಕೃತ ಅಂಕಿಅಂಶಗಳು ಈ ಸರ್ಕಾರದ ನೀತಿಯ ಕುರಿತು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಪ್ರಿಲ್ 2020 ಮತ್ತು ಜನವರಿ 2021 ರ ನಡುವೆ, ಭಾರತವು 9,000 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದೆ! ಏಪ್ರಿಲ್ 2020 ಅಂದರೆ ಆಗ ಮೊದಲ ಕೋವಿಡ್ ಅಲೆ ತೀವ್ರವಾಗಿತ್ತು ಮತ್ತು ಕಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿತ್ತು. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ರಫ್ತು ಪ್ರಮಾಣ ಶೇ. 700ರಷ್ಟು ಹೆಚ್ಚಾಗಿದೆ!

ಈಗ ಕೋವಿಡ್‌ನ ಎರಡನೇ ಅಲೆಯ ಭಾರಿ ಉಲ್ಬಣವು ಉಸಿರಾಟದ ತೊಂದರೆಗಳು ಮತ್ತು ಆ ಕಾರಣಕ್ಕೆ ಆಮ್ಲಜನಕದ ಬೇಡಿಕೆಯ ಹೆಚ್ಚಳವನ್ನು ಉಂಟು ಮಾಡಿದೆ. ಆದರೆ, ದೇಶದಲ್ಲಿ ಈಗ ಆಮ್ಲಜನಕದ ಕೊರತೆ ತೀವ್ರವಾಗಿದೆ. ಹಲವಾರು ರಾಜ್ಯಗಳು ಈ ಕುರಿತಂತೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿ ಕೇಂದ್ರದ ನೆರವು ಯಾಚಿಸಿವೆ, ಮಂಗಳವಾರ ರಾತ್ರಿಯ ಭಾಷಣದಲ್ಲಿ ಪ್ರಧಾನಿಯವರು ಸಹ ಆಮ್ಲಜನಕದ ಕೊರತೆಯನ್ನು ದೃಢೀಕರಿಸಿದ್ದಾರೆ. ಆದರೆ, ಭಾರತದಿಂದ ಆಮ್ಲಜನಕದ ರಫ್ತು ದ್ವಿಗುಣಗೊಂಡಿದೆ ಎಂದು ಸರ್ಕಾರದ ಮಾಹಿತಿಯು ತಿಳಿಸುತ್ತದೆ!

2020 ರ ಆರ್ಥಿಕ ವರ್ಷದಲ್ಲಿ ಕೇವಲ 4,500 ಮೆಟ್ರಿಕ್ ಟನ್ ಆಮ್ಲಜನಕವನ್ನು ಮಾತ್ರ ರಫ್ತು ಮಾಡಲಾಗಿತ್ತು. ಆದರೆ 2021ರ ಆರ್ಥಿಕ ವರ್ಷದಲ್ಲಿ, ಅದೂ ಕೊರೊನಾ 1ನೆ ಅಲೆ ತೀವ್ರವಾಗಿದ್ದ ಸಮಯದಲ್ಲಿ, ಈ ರಫ್ತು ದ್ವಿಗುಣಗೊಂಡಿದೆ. ಇದು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

2020 ರ ಜನವರಿಯಿಂದ, ಭಾರತವು 352 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದ್ದಕ್ಕೆ ಹೋಲಿಸಿದಾಗ, ಈಗ 2021 ರ ಜನವರಿಯಲ್ಲಿ ಇದು ಶೇಕಡಾ 734 ರಷ್ಟು ಹೆಚ್ಚಾಗಿದೆ.
ಡಿಸೆಂಬರ್‌ನಲ್ಲಿ ದೇಶವು 2,193 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದೆ. ಇದು 2019 ರ ಡಿಸೆಂಬರ್‌ನಲ್ಲಿ ರಫ್ತಾದ 538 ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ ಇದು ಶೇ. 308 ರಷ್ಟು ಹೆಚ್ಚಾಗಿದೆ.

2021 ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ರಫ್ತು ಅಂಕಿಅಂಶಗಳನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಇದನ್ನೂ ಓದಿ: ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ಭಾರತವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಆಮ್ಲಜನಕ ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೂ ನಮ್ಮ ದೇಶದ ಪ್ರಜೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಸಿಗುತ್ತಿಲ್ಲ ಏಕೆ ಎಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತದ ಆಮ್ಲಜನಕ ರಫ್ತು

2019-20: 4502 ಮೆ.ಟನ್
2020-21: 9300 ಮೆ.ಟನ್

ನಮ್ಮಲ್ಲಿ ಆಮ್ಲಜನಕದ ಕೊರತೆ ಇರಲಿಲ್ಲ. ನಾವು ಆಮ್ಲಜನಕದ ಅತಿದೊಡ್ಡ ಉತ್ಪಾದಕರು. ಆದರೆ ಕೊರೊನಾದ ಬೆದರಿಕೆಯ ಹೊರತಾಗಿಯೂ, ಸರ್ಕಾರವು 2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? ಎಂದು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೈಗಾರಿಕಾ ಬಳಕೆಗಾಗಿ ಆಮ್ಲಜನಕವನ್ನು ಏ. 22ರಿಂದ ನಿಷೇಧಿಸುವ ನಿರ್ಧಾರವನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. “ಇಂದು ಅದನ್ನು ಏಕೆ ಮಾಡಬಾರದು? ಏಪ್ರಿಲ್ 22 ರವರೆಗೆ ಏಕೆ ಕಾಯಬೇಕು? ಜೀವಗಳು ಅಪಾಯದಲ್ಲಿದೆ. ಆಮ್ಲಜನಕಕ್ಕಾಗಿ ಏಪ್ರಿಲ್ 22 ರವರೆಗೆ ಕಾಯುವಂತೆ ನೀವು ರೋಗಿಗಳಿಗೆ ಹೇಳಲು ಹೋಗುತ್ತೀರಾ” ಎಂದು ನ್ಯಾಯಾಲಯ ಮಂಗಳವಾರ ಪ್ರಶ್ನಿಸಿದೆ.

“ಆರ್ಥಿಕ ಹಿತಾಸಕ್ತಿಗಳು ಮಾನವ ಜೀವನವನ್ನು ಅತಿಕ್ರಮಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ ನಾವು ವಿಪತ್ತಿನತ್ತ ಸಾಗುತ್ತಿದ್ದೇವೆ’ ಎಂದರ್ಥ ಎಂದು ಕೋರ್ಟ್ ಎಚ್ಚರಿಸಿದೆ.

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ “ಮಾನಸಿಕ ಉದ್ದೇಶಗಳಿಗಾಗಿ” ಹೆಚ್ಚಿನ ಆಮ್ಲಜನಕವನ್ನು ನೀಡುತ್ತವೆ, ಇದು ದುರುಪಯೋಗಕ್ಕೆ ಕಾರಣವಾಗುತ್ತದೆ ಎಂದು ಕೇಂದ್ರವು ಇತ್ತೀಚೆಗೆ ವಾದಿಸಿತ್ತು. ದೆಹಲಿ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಆಮ್ಲಜನಕದ ಬಳಕೆಯನ್ನು ತರ್ಕಬದ್ಧಗೊಳಿಸುವಂತೆ ಸೂಚಿಸಲಾಗಿದೆ ಮತ್ತು ಪ್ರಾಯೋಗಿಕವಾಗಿ ಅಗತ್ಯವಿಲ್ಲದ ರೋಗಿಗಳಿಗೆ ಆಮ್ಲಜನಕವನ್ನು ನೀಡಬಾರದು ಎಂದು ಕೇಂದ್ರ ತಿಳಿಸಿತ್ತು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...