Homeಮುಖಪುಟದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? - ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಹಲವಾರು ರಾಜ್ಯಗಳು ಆಮ್ಲಜನಕದ ತುರ್ತುಸ್ಥಿತಿಯನ್ನು ಎದುರಿಸುತ್ತಿರುವ ಸಮಯದಲ್ಲಿ ಆಮ್ಲಜನಕ ರಫ್ತು ಕುರಿತಂತೆ ಲಭ್ಯವಿರುವ ಅಧಿಕೃತ ಅಂಕಿಅಂಶಗಳು ಈ ಸರ್ಕಾರದ ನೀತಿಯ ಕುರಿತು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಪ್ರಿಲ್ 2020 ಮತ್ತು ಜನವರಿ 2021 ರ ನಡುವೆ, ಭಾರತವು 9,000 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದೆ! ಏಪ್ರಿಲ್ 2020 ಅಂದರೆ ಆಗ ಮೊದಲ ಕೋವಿಡ್ ಅಲೆ ತೀವ್ರವಾಗಿತ್ತು ಮತ್ತು ಕಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿತ್ತು. ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ರಫ್ತು ಪ್ರಮಾಣ ಶೇ. 700ರಷ್ಟು ಹೆಚ್ಚಾಗಿದೆ!

ಈಗ ಕೋವಿಡ್‌ನ ಎರಡನೇ ಅಲೆಯ ಭಾರಿ ಉಲ್ಬಣವು ಉಸಿರಾಟದ ತೊಂದರೆಗಳು ಮತ್ತು ಆ ಕಾರಣಕ್ಕೆ ಆಮ್ಲಜನಕದ ಬೇಡಿಕೆಯ ಹೆಚ್ಚಳವನ್ನು ಉಂಟು ಮಾಡಿದೆ. ಆದರೆ, ದೇಶದಲ್ಲಿ ಈಗ ಆಮ್ಲಜನಕದ ಕೊರತೆ ತೀವ್ರವಾಗಿದೆ. ಹಲವಾರು ರಾಜ್ಯಗಳು ಈ ಕುರಿತಂತೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿ ಕೇಂದ್ರದ ನೆರವು ಯಾಚಿಸಿವೆ, ಮಂಗಳವಾರ ರಾತ್ರಿಯ ಭಾಷಣದಲ್ಲಿ ಪ್ರಧಾನಿಯವರು ಸಹ ಆಮ್ಲಜನಕದ ಕೊರತೆಯನ್ನು ದೃಢೀಕರಿಸಿದ್ದಾರೆ. ಆದರೆ, ಭಾರತದಿಂದ ಆಮ್ಲಜನಕದ ರಫ್ತು ದ್ವಿಗುಣಗೊಂಡಿದೆ ಎಂದು ಸರ್ಕಾರದ ಮಾಹಿತಿಯು ತಿಳಿಸುತ್ತದೆ!

2020 ರ ಆರ್ಥಿಕ ವರ್ಷದಲ್ಲಿ ಕೇವಲ 4,500 ಮೆಟ್ರಿಕ್ ಟನ್ ಆಮ್ಲಜನಕವನ್ನು ಮಾತ್ರ ರಫ್ತು ಮಾಡಲಾಗಿತ್ತು. ಆದರೆ 2021ರ ಆರ್ಥಿಕ ವರ್ಷದಲ್ಲಿ, ಅದೂ ಕೊರೊನಾ 1ನೆ ಅಲೆ ತೀವ್ರವಾಗಿದ್ದ ಸಮಯದಲ್ಲಿ, ಈ ರಫ್ತು ದ್ವಿಗುಣಗೊಂಡಿದೆ. ಇದು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

2020 ರ ಜನವರಿಯಿಂದ, ಭಾರತವು 352 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದ್ದಕ್ಕೆ ಹೋಲಿಸಿದಾಗ, ಈಗ 2021 ರ ಜನವರಿಯಲ್ಲಿ ಇದು ಶೇಕಡಾ 734 ರಷ್ಟು ಹೆಚ್ಚಾಗಿದೆ.
ಡಿಸೆಂಬರ್‌ನಲ್ಲಿ ದೇಶವು 2,193 ಮೆಟ್ರಿಕ್ ಟನ್ ಆಮ್ಲಜನಕವನ್ನು ರಫ್ತು ಮಾಡಿದೆ. ಇದು 2019 ರ ಡಿಸೆಂಬರ್‌ನಲ್ಲಿ ರಫ್ತಾದ 538 ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ ಇದು ಶೇ. 308 ರಷ್ಟು ಹೆಚ್ಚಾಗಿದೆ.

2021 ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ರಫ್ತು ಅಂಕಿಅಂಶಗಳನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಇದನ್ನೂ ಓದಿ: ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ಭಾರತವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಆಮ್ಲಜನಕ ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೂ ನಮ್ಮ ದೇಶದ ಪ್ರಜೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಸಿಗುತ್ತಿಲ್ಲ ಏಕೆ ಎಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತದ ಆಮ್ಲಜನಕ ರಫ್ತು

2019-20: 4502 ಮೆ.ಟನ್
2020-21: 9300 ಮೆ.ಟನ್

ನಮ್ಮಲ್ಲಿ ಆಮ್ಲಜನಕದ ಕೊರತೆ ಇರಲಿಲ್ಲ. ನಾವು ಆಮ್ಲಜನಕದ ಅತಿದೊಡ್ಡ ಉತ್ಪಾದಕರು. ಆದರೆ ಕೊರೊನಾದ ಬೆದರಿಕೆಯ ಹೊರತಾಗಿಯೂ, ಸರ್ಕಾರವು 2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? ಎಂದು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೈಗಾರಿಕಾ ಬಳಕೆಗಾಗಿ ಆಮ್ಲಜನಕವನ್ನು ಏ. 22ರಿಂದ ನಿಷೇಧಿಸುವ ನಿರ್ಧಾರವನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. “ಇಂದು ಅದನ್ನು ಏಕೆ ಮಾಡಬಾರದು? ಏಪ್ರಿಲ್ 22 ರವರೆಗೆ ಏಕೆ ಕಾಯಬೇಕು? ಜೀವಗಳು ಅಪಾಯದಲ್ಲಿದೆ. ಆಮ್ಲಜನಕಕ್ಕಾಗಿ ಏಪ್ರಿಲ್ 22 ರವರೆಗೆ ಕಾಯುವಂತೆ ನೀವು ರೋಗಿಗಳಿಗೆ ಹೇಳಲು ಹೋಗುತ್ತೀರಾ” ಎಂದು ನ್ಯಾಯಾಲಯ ಮಂಗಳವಾರ ಪ್ರಶ್ನಿಸಿದೆ.

“ಆರ್ಥಿಕ ಹಿತಾಸಕ್ತಿಗಳು ಮಾನವ ಜೀವನವನ್ನು ಅತಿಕ್ರಮಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ ನಾವು ವಿಪತ್ತಿನತ್ತ ಸಾಗುತ್ತಿದ್ದೇವೆ’ ಎಂದರ್ಥ ಎಂದು ಕೋರ್ಟ್ ಎಚ್ಚರಿಸಿದೆ.

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ “ಮಾನಸಿಕ ಉದ್ದೇಶಗಳಿಗಾಗಿ” ಹೆಚ್ಚಿನ ಆಮ್ಲಜನಕವನ್ನು ನೀಡುತ್ತವೆ, ಇದು ದುರುಪಯೋಗಕ್ಕೆ ಕಾರಣವಾಗುತ್ತದೆ ಎಂದು ಕೇಂದ್ರವು ಇತ್ತೀಚೆಗೆ ವಾದಿಸಿತ್ತು. ದೆಹಲಿ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಆಮ್ಲಜನಕದ ಬಳಕೆಯನ್ನು ತರ್ಕಬದ್ಧಗೊಳಿಸುವಂತೆ ಸೂಚಿಸಲಾಗಿದೆ ಮತ್ತು ಪ್ರಾಯೋಗಿಕವಾಗಿ ಅಗತ್ಯವಿಲ್ಲದ ರೋಗಿಗಳಿಗೆ ಆಮ್ಲಜನಕವನ್ನು ನೀಡಬಾರದು ಎಂದು ಕೇಂದ್ರ ತಿಳಿಸಿತ್ತು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...