Homeಕರ್ನಾಟಕಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಆಮ್ಲಜನಕ ಸಿಲಿಂಡರ್‌ಗಳನ್ನು ಸಾಗಿಸುವ ಟ್ರಕ್ ಮುಂಜಾನೆ 2 ಗಂಟೆಯ ಹೊತ್ತಿಗೆ ಚಾಮರಾಜನಗರಕ್ಕೆ ತಲುಪಬೇಕಿತ್ತು. ಆದರೆ ಈ ಟ್ರಕ್ ಮೇ 3 ರಂದು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆ ತಲುಪಿದೆ.

- Advertisement -
- Advertisement -

ಕಳೆದ ವಾರ ಚಾಮರಾಜನಗರದಲ್ಲಿ 24 ಕೋವಿಡ್ ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಮತ್ತು ಆಸ್ಪತ್ರೆ ಮತ್ತು ಜಿಲ್ಲಾಡಳಿತದ ವೈಫಲ್ಯ ಕಾರಣವಾಗಿದೆ ಎಂದು ನ್ಯಾಯಮೂರ್ತಿ ಎ.ಎಸ್ ವೇಣುಗೋಪಾಲ್ ಗೌಡ (ನಿವೃತ್ತ) ನೇತೃತ್ವದ ಸಮಿತಿ ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.

ಮೇ 2 ರಂದು ರಾತ್ರಿ 10.30 ರಿಂದ ನಾಲ್ಕು ಗಂಟೆಗಳ ಕಾಲ ಆಮ್ಲಜನಕ ಲಭ್ಯವಿಲ್ಲದ ಕಾರಣ ಮೇ 3 ರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿ ದೃಢಪಡಿಸಿದೆ.

ಮೇ 4 ಮತ್ತು ಮೇ 10ರ ವರೆಗೆ ಆಸ್ಪತ್ರೆಯಲ್ಲಿ 62 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಕನಿಷ್ಠ 36 ಮಂದಿ ಮೇ 2 ರಂದು ಆಮ್ಲಜನಕ ಸಿಗದ ರೋಗಿಗಳಾಗಿದ್ದರು ಎಂದು ಸಮಿತಿ ತಿಳಿಸಿದೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ದುರಂತದ ಸಮಯದಲ್ಲಿ ನಾಯಕತ್ವದ ಗುಣವನ್ನು ಪ್ರದರ್ಶಿಸುವಲ್ಲಿ ಆಸ್ಪತ್ರೆಯ ಅಧಿಕಾರಿಗಳು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ವಿಫಲರಾಗಿದ್ದಾರೆ ಎಂದು ವರದಿ ತಿಳಿಸಿದೆ. “ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಐಎಂಎಸ್) ಡೀನ್ ಮತ್ತು ಮೈಕ್ರೋಬಯಾಲಜಿಸ್ಟ್ ಉಸ್ತುವಾರಿ ಜಿಲ್ಲಾ ಶಸ್ತ್ರಚಿಕಿತ್ಸಕ ರೋಗಿಗಳ ಜೀವಗಳನ್ನು ಉಳಿಸಲು ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಲು ಮಾರ್ಗದರ್ಶನ ಮಾಡುವಲ್ಲಿ ವಿಫಲರಾಗಿದ್ದಾರೆ” ಎಂದು ವರದಿ ತಿಳಿಸಿದೆ.

“ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆ ಮಾಡಲು ಶೋಚನೀಯವಾಗಿ ವಿಫಲರಾಗಿದ್ದಾರೆ. ಇದಕ್ಕೆ ತದ್ವಿರುದ್ಧವಾಗಿ, ಮೈಸೂರಿನ ಜಿಲ್ಲಾಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿಯುಂಟುಮಾಡಿದ್ದಾರೆ ಎಂದು ಯಾವುದೇ ಆಧಾರವಿಲ್ಲದೆ ಆರೋಪಿಸಿದ್ದಾರೆ” ಎಂದು ವರದಿಯಲ್ಲಿ ತಿಳಿಸಲಾಗಿದೆ.

ಚಾಮರಾಜನಗರ ಸೇರಿದಂತೆ ಇತರ ಯಾವುದೇ ಜಿಲ್ಲೆಗಳ ಆಮ್ಲಜನಕ ಸಿಲಿಂಡರ್‌ಗಳನ್ನು ಮರುಪೂರಣ ಮಾಡುವುದು ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಜವಾಬ್ದಾರಿ. ಮೈಸೂರು ಜಿಲ್ಲಾಧಿಖಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಆಧಾರವಿಲ್ಲ ಎಂದು ಸಮಿತಿ ತಿಳಿಸಿದೆ.

ಆಮ್ಲಜನಕ ಸಿಲಿಂಡರ್‌ಗಳನ್ನು ಸಾಗಿಸುವ ಟ್ರಕ್ ಮುಂಜಾನೆ 2 ಗಂಟೆಯ ಹೊತ್ತಿಗೆ ಚಾಮರಾಜನಗರಕ್ಕೆ ತಲುಪಬೇಕಿತ್ತು. ಆದರೆ ಇನ್ನೂ 30 ಸಿಲಿಂಡರ್‌ಗಳನ್ನು ಲೋಡ್ ಮಾಡಲು ಮರುಪೂರಣ ಏಜೆನ್ಸಿಯಲ್ಲಿ ನಿಲ್ಲಿಸಲಾಗಿತ್ತು. ಈ ಟ್ರಕ್ ಮೇ 3 ರಂದು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆ ತಲುಪಿದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ನ್ಯಾಯಾಲಯದ ನಿರ್ದೇಶನದ ನಂತರ ಮುಖ್ಯ ಕಾರ್ಯದರ್ಶಿ ಇತ್ತೀಚೆಗೆ ವಶಪಡಿಸಿಕೊಂಡಿದ್ದ ಅಧಿಕೃತ ದಾಖಲೆಗಳನ್ನು ವಿಶ್ಲೇಷಿಸಿದ ನಂತರ ಸಮಿತಿ ತನ್ನ ವರದಿಯನ್ನು ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದೆ. ಜೊತೆಗೆ ಮೃತರ ಕುಟುಂಬಗಳಿಗೆ ಪರಿಹಾರವನ್ನು ನೀಡಲು ಶಿಫಾರಸು ಮಾಡಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದರೆ ಅದಕ್ಕೆ ಸರ್ಕಾರವೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚಿಕಿತ್ಸೆ ವೈಫಲ್ಯದಿಂದ ಮೃತಪಟ್ಟಿದ್ದರೆ ಅದು ಉದ್ದೇಶಪೂರ್ವಕ ಅಲ್ಲ. ಉದ್ದೇಶಪೂರ್ವಕವಾಗಿ ಮಾಡಿದ್ದರೆ, ಅದಕ್ಕೆ ಕಾರಣರಾದವರೇ ಹೊಣೆ ಹೊರಬೇಕು ಎಂದು ಅವರು ಹೇಳಿದ್ದರು.


ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...