Homeಮುಖಪುಟಲಂಕೇಶ್ 86: ಕಣ್ಣಾಮುಚ್ಚಾಲೆ ಓದುತ್ತಾ, ಟೀಕೆ-ಟಿಪ್ಪಣಿಯ ಬಂಧನವಾದ ಕತೆ

ಲಂಕೇಶ್ 86: ಕಣ್ಣಾಮುಚ್ಚಾಲೆ ಓದುತ್ತಾ, ಟೀಕೆ-ಟಿಪ್ಪಣಿಯ ಬಂಧನವಾದ ಕತೆ

ಇಟ್ಟಿಗೆ ಪವಿತ್ರವಲ್ಲ ಜೀವ ಪವಿತ್ರ ಎಂಬ ಲಂಕೇಶರ ಟೈಟಲ್ ಈಗಲೂ ದೇಹ ಮತ್ತು ಮನಸ್ಸಿನಲ್ಲಿದೆ. ಪೋಸ್ಟರ್ ಕದಿಯುತ್ತ, ಕಣ್ಣಾ ಮುಚ್ಚಾಲೆ ಆಡುತ್ತ ತುಂಟಾಟ ಮಾಡುತ್ತಿದ್ದ ಕಳ್ಳನೊಬ್ಬ ಟೀಕೆ-ಟಿಪ್ಪಣಿಯಲ್ಲಿ ಬಂಧಿತನಾದ ಕತೆಯಿದು

- Advertisement -
- Advertisement -

ಅದು ತುಂಟಾಟವೂ ಆಗಿತ್ತು, ಕಣ್ಣಾಮುಚ್ಚಾಲೆಯೂ ಆಗಿತ್ತು ಎಂದರೆ ಸಾಕೆ? ನಾವಿಬ್ಬರು ಕಳ್ಳರು ಕದಿಯುವ ಹುಚ್ಚಾಟವಾಗಿಯೇ ಇತ್ತು ಎಂದರೆ ಸರಿ ಅನಿಸುತ್ತದೆ.

ಅದೊಂದು ಪುಟ್ಟ ಗ್ರಂಥಾಲಯ. 3ನೆ ಕ್ಲಾಸಿನಲ್ಲಿದ್ದ ನಾನು ಮತ್ತು ಧನಂಜಯ್ ಕುಂದಾಪೂರ (ಹೊಟೆಲ್ ಮಾಡಿದ್ದ ಕುಂದಾಪೂರ ಕುಟುಂಬದ ಹುಡುಗ, ಈಗ ಅವರ ಫ್ಯಾಮಿಲಿ ಅಲ್ಲಿಲ್ಲ) ಅದ್ಹೇಗೋ ಆ ಗ್ರಂಥಾಲಯದತ್ತ ಆಕರ್ಷಿತರಾದೆವು, ಶಾಲೆಯ ಸಮೀಪವೇ ಇದ್ದುದು ಒಂದು ಕಾರಣ ಅನಿಸುತ್ತೆ.

ಶಾಲೆ ಮುಗಿದ ನಂತರ ಸಿಕ್ಕಾಪಟ್ಟೆ ಆಟ ಆಡಿ ಸುಸ್ತಾಗಿರುತ್ತಿದ್ದ ನಮಗೆ ಆ ಗ್ರಂಥಾಲಯ ಒಂದು ರಿಲೀಫ್ ಸೆಂಟರ್ ಆಗಿತ್ತೇನೊ? ಹಲವು ದಿನಪತ್ರಿಕೆಗಳು, ವಾರಪತ್ರಿಕೆಗಳು… ಅಂತೂ ಒಂದನ್ನು ಹಿಡಿದು ಓದುತ್ತ ಇದ್ದೆವು… ನಂತರ ಹಾಗೆ ನಟಿಸ ತೊಡಗಿದೆವು!
ಇದಕ್ಕೆ ಕಾರಣ ಆಗ ನಮಗೆ ಹುಚ್ಚು ಹಿಡಿಸಿದ್ದ ಕ್ರಿಕೆಟ್ ಮತ್ತು ಗ್ರಂಥಾಲಯದಲ್ಲಿ ಇರುತ್ತಿದ್ದ ಸ್ಪೋರ್ಟ್ಸ್ ಸ್ಟಾರ್ ಮ್ಯಾಗಜೀನ್!

ನಾವು ಕಳ್ಳರಾಗಿ ಬಿಟ್ಟೆವು, ಸ್ಪೋರ್ಟ್ಸ್ ಸ್ಟಾರ್ ‌ನಲ್ಲಿ ಬರುತ್ತಿದ್ದ ಕ್ರಿಕೆಟಿಗರ ವರ್ಣರಂಜಿತ ಫೋಟೊ ಇರುವ ಪೇಜ್ ಎಗರಿಸತೊಡಗಿದೆವು.. 4ನೆ ಕ್ಲಾಸ್ ಮುಟ್ಟುವವರೆಗೂಗೂ ಅವ್ಯಾಹತವಾಗಿ ಹರಿದೆವು, ಕಲೆಕ್ಷನ್ ಮಾಡಿದೆವು. ನನ್ನ ಕಡೆ ಕಲೆಕ್ಷನ್ ಜಾಸ್ತಿ ಎಂದೆಲ್ಲ ಜಗಳ ಆಡಿದೆವು. ಕಲೆಕ್ಷನ್ ಹೆಚ್ಚಿಸಲು, ರಣಜಿ ಆಟಗಾರರ ಫೋಟೊಗಳನ್ನೂ ಕಿತ್ತುಕೊಂಡು ಬಂದೆವು. ರಾಷ್ಟ್ರೀಯ ತಂಡಕ್ಕೆ ಆಡುವ ಮೊದಲೇ ದೆಹಲಿಯ ಬ್ತಾಟ್ಸ್‌ಮನ್ ರಮಣ್ ಲಂಬಾ ಪೋಸ್ಟರ್ ನನ್ನ ಸಂಗ್ರಹದಲ್ಲಿತ್ತು!

ಗಂಭೀರ ಓದುಗರಿಗೆ ಸಂಶಯ ಬರಬಾರದೆಂದು, ಬೇರೆ ಬೇರೆ ಪೇಪರ್ ಓದುವ ನಾಟಕ ಮಾಡುತ್ತಿದ್ದೆವು. ಆಗ ತುಂಟಾಟ ಮತ್ತು ಕಣ್ಣಾಮುಚ್ಚಾಲೆ ನನಗೆ ಆಪ್ತವಾದವು!

ಅಲ್ಲಿನ ಗ್ರಂಥಪಾಲಕ ‘ಪುಂಡ’ ಅವರ ಕೈಗೆ ನಾವು ಒಂದು ಸಲಾನೂ ಸಿಗಲಿಲ್ಲ. ಮೊದಲೆಲ್ಲ ಸ್ಪೋರ್ಟ್ಸ್ ಸ್ಟಾರ್ ಪುಟ ಹರಿದಾಗ ಚರಕ್ ಎಂಬ ಶಬ್ದ ಬರುತ್ತಿತ್ತು, ಪಕ್ಕದವರು ನೋಡಿದ ಕೂಡಲೇ ಗಾಬರಿ ಆಗುತ್ತಿತ್ತು. ಅದಕ್ಕೂ ಒಂದು ಸಲ್ಯೂಷನ್ ಕಂಡು ಹಿಡಿದೆವು. ನೈಸ್ ಆಗಿರುತ್ತಿದ್ದ ಆ ಪುಟಗಳ ಅಂಚಿಗೆ ಒಗುಳನ್ನು (ಎಂಜಲನ್ನು) ಹಚ್ಚಿ ಬಿಡುವುದು! ಹರಿಯುವಾಗ ಚರಕ್ ಇಲ್ಲ ಪರಕ್ ಇಲ್ಲ!

ಗ್ರಂಥಪಾಲಕ ‘ಪುಂಡ’ ಎಂದು ಬರಹದಲ್ಲಿ ಇದೆ ಅಲ್ಲವೇ? ಮುಂದೆ ಇವರೇ ನೀಲು ಕಾವ್ಯಕ್ಕೆ ಹಲವು ವರ್ಷ ‘ಪುಂಡ’ ಹೆಸರಲ್ಲಿ ರೇಖಾಚಿತ್ರ ಬರೆದ ಕೆ.ವಿ. ಪುಂಡಲೀಕ ಅಥವಾ ಪುಂಡಲೀಕ ಕಲ್ಲಿಗನೂರು…

ಈ ದುಸ್ಸಾಹಸದ ನಡುವೆ ನನ್ನನ್ನು ಲಂಕೇಶ್ ಪತ್ರಿಕೆ ಕ್ಯಾಚ್ ಮಾಡಿತ್ತು. ಆರನೇ ಕ್ಲಾಸಿನಲ್ಲಿ ಇರುವಾಗ ಹೈಸ್ಕೂಲ್‌ಗೆ ಜೀವಶಾಸ್ತ್ರ ಪಾಠ ಮಾಡುತ್ತಿದ್ದ ಇ.ಪ್ರಭಾಕರನ್ ಸರ್ ಹತ್ತಿರವಾದರು. ದಿನವೂ ಅವರ ಮನೆಗೆ ಹೋಗುತ್ತಿದ್ದೆ. ಅಲ್ಲಿ ಪ್ರಜಾವಾಣಿ, ಲಂಕೇಶ್ ಪತ್ರಿಕೆ, ಸುಧಾ, ಮಯೂರ ಎಲ್ಲವೂ ಲಭ್ಯವಿತ್ತು. ತಮಿಳು ಮೂಲದ ಪ್ರಭಾಕರನ್ ಸರ್ ಗದಗ ಜಿಲ್ಲೆಯ ಪುಟ್ಟ ಊರಿಗೆ ಮಾಸ್ತರಾಗಿ ಬಂದಿದ್ದೇ ಒಂದು ಕುತೂಹಲದ ವಿಷಯ. ಅಪ್ಪಟ ಸೆಕ್ಯುಲರ್ ಮತ್ತು ವಿಚಾರವಾದಿ ಆಗಿದ್ದ ಅವರು ನನ್ನಂತಹ ಅನೇಕರಿಗೆ ಟೀಕೆ ಟಿಪ್ಪಣಿ ಓದಲು ಸಲಹೆ ಮಾಡುತ್ತಿದ್ದರು. (ಸರ್ 3 ವರ್ಷದ ಹಿಂದೆ ತೀರಿಕೊಂಡರು)

ಅಲ್ಲಿಂದ ಶುರುವಾಯ್ತು ಲಂಕೇಶರ ಜೊತೆಗಿನ ವರ್ಚುವಲ್ ಒಡನಾಟ. ಪಿಯುಸಿಗೆಂದು ಬಲವಂತವಾಗಿ ನನ್ನನ್ನು ಧಾರವಾಡಕ್ಕೆ ಅಟ್ಟಿದ ಮೇಲೆ, ಅಲ್ಲಿದ್ದ ಹೋರಾಟದ ಪರಿಸರ ನನ್ನನ್ನು ಲಂಕೇಶ್ ಪತ್ರಿಕೆಯೊಂದಿಗೆ ಇನ್ನಷ್ಟು ಆಪ್ತಗೊಳಿಸಿತು. ಕಣ್ಣಾಮುಚ್ಚಾಲೆಗೆ ಕಳಿಸಿದ ಪ್ರಶ್ನೆಗಳಿಗೆ ಮೊದಲು 30, ನಂತರ 50 ರೂ ಬಹುಮಾನ ತಿಂಗಳಲ್ಲಿ ಎರಡು ಸಲ ಸಿಗುವಂತಾಯಿತು.
****

ಧಾರವಾಡದಲ್ಲಿ ನಾನಿದ್ದ ಹಾಸ್ಟೇಲ್ ಪಕ್ಕದಲ್ಲಿ ಎಸ್‌ಸಿ/ಎಸ್‌ಟಿ, ಬಿಸಿಎಂ ಮತ್ತು ಸ್ಪೋರ್ಟ್ಸ್ ಹಾಸ್ಟೇಲ್ ಇದ್ದವು. ಅಲ್ಲಿದ್ದ ಮಿತ್ರರನ್ನು ಭೇಟಿಯಾಗಲು ಹೋಗುತ್ತಿದ್ದ ಕಾರಣಕ್ಕೆ, ನನಗೆ ಪಿವಿಕೆ (ಪ್ರಗತಿಪರ ವಿದ್ಯಾರ್ಥಿ ಕೇಂದ್ರ) ನಂಟು ಬೆಳೆಯಿತು. ಹಾಗಂತ ನಾನೇನೂ ಅದರ ಸದಸ್ಯನಾಗಲಿಲ್ಲ. ಪಿವಿಕೆ ಧಾರವಾಡದ ಅಗ್ರಿ ಯುನಿವರ್ಸಿಟಿಯಲ್ಲಿ ತುಂಬ ಸ್ಟ್ರಾಂಗ್ ಆಗಿತ್ತು. ವಿದ್ಯಾರ್ಥಿಗಳ ಕಷ್ಟಗಳಿಗೆ ಅದು ಸ್ಪಂದಿಸಿ ಜಯ ಸಾಧಿಸುತ್ತಿತ್ತು.

ಚೆನ್ನೈನಲ್ಲಿ ನಡೆದ ಅಖಿಲ ಭಾರತೀಯ ಕ್ರಾಂತಿಕಾರಿ ವಿದ್ಯಾರ್ಥಿ ಸಮಾವೇಶಕ್ಕೆ ಹೋಗಿ ಚೆನ್ನೈನ ಪೆರಿಯಾರ್ ಭವನದಲ್ಲಿ ಎಂಟು ತಾಸು ಗೃಹ ಬಂಧನವಾಗಿತ್ತು.
ನಂತರ ಕಾಡತೊಡಗಿದ್ದು, ಯಾಕೆ ಲಂಕೇಶ್ ಇಂತಹ ಚಳುವಳಿಯ ಬಗ್ಗೆ ಅಷ್ಟಾಗಿ ಪ್ರಚಾರ ಕೊಡುತ್ತಿಲ್ಲ ಎಂಬ ವಿಷಯ… ಅದು ಆ ಕಾಲಘಟ್ಟದ ವೈಪರೀತ್ಯವೋ? ಅಥವಾ ಲಂಕೇಶ್‌ರಿಗೆ ಆಪ್ತವಾಗಿದ್ದವರು ಪಿವಿಕೆ ಮತ್ತು ಕೆವಿಆರ್ ಸದಸ್ಯರನ್ನು ಅವರಿಂದ ದೂರ ಇಡಿಸಿದರೋ? ಈ ಪ್ರಶ್ನೆ ಈಗಲೂ ಇದೆ.
****

ಆಗ ನನಗೆ ಚಳುವಳಿಗಳ ಬಗ್ಗೆ ಅಷ್ಟಾದ ತಿಳುವಳಿಕೆ ಇರಲಿಲ್ಲ. ಧಾರವಾಡ ಗ್ರಾಮೀಣದಲ್ಲಿ ನಂಜುಂಡಸ್ವಾಮಿಯವರ ಗೆಲುವಿಗೆ ಕೆಲಸ ಮಾಡಿದೆವು. ಅದೊಂದು ಅಭೂತಪೂರ್ವ ಅನುಭವ. ಹಳ್ಳಿಹಳ್ಳಿಗಳಲ್ಲಿ ರೈತರ ರಣೋತ್ಸಾಹವಿತ್ತು. ಈಗಿನ ಐತಿಹಾಸಿಕ ರೈತ ಪ್ರತಿಭಟನೆ ವೇಳೆ ಅದೆಲ್ಲ ನೆನಪಾಗುತ್ತಿದೆ.

ಮತ್ತೆ ಮೂಲ ವಿಷಯಕ್ಕೆ ಬರೋಣ, ತುಮಕೂರಿನಲ್ಲಿ ಎರಡನೇ ಪಿಯುಸಿ ವಿಜ್ಞಾನ ಓದುತ್ತಿದ್ದ ಹುಡುಗನೊಬ್ಬ (ಹೆಸರು ಯೋಗೀಶ್ ಅನಿಸುತ್ತೆ) ಲಂಕೇಶರಿಗೆ ಪತ್ರ ಬರೆದಿದ್ದ: ‘ದೆಹಲಿಯಲ್ಲಿ ಅಧಿಕಾರ ಸ್ವೀಕಾರದ ಸಂಭ್ರಮ ನಡೆಯುತ್ತಿರುವಾಗ ಗಾಂಧಿ ಕಲಕತ್ತಾದ ಬೀದಿಗಳಲ್ಲಿ ಅಡ್ಡಾಡುತ್ತಿದ್ದರು’ ಎಂಬ ವಾಕ್ಯ ಅರ್ಥವಾಗಲಿಲ್ಲ ಸರ್ ಎಂದು ಕೇಳಿದ್ದ. ಆಗ ಎರಡನೇ ಪಿಯು ಕನ್ನಡದಲ್ಲಿ ಲಂಕೇಶರ ‘ಮೋಕ್ಷ ಹುಡುಕುತ್ತ ಪ್ರೀತಿಯ ಬಂಧನದಲ್ಲಿ’ ಎಂಬ ಟೀಕೆ-ಟಿಪ್ಪಣೆ ಪಠ್ಯವಾಗಿತ್ತು. ಆ ತುಮಕೂರಿನ ಹುಡುಗನ ಪ್ರಶ್ನೆಗೆ ಮರುವಾರ ಉತ್ತರಿಸಿದ ಲಂಕೇಶ್, ಅಂದಿನ ( ಸ್ವಾತಂತ್ರ್ಯ ಸಿಕ್ಕ ಸಂದರ್ಭ) ಸಾಮಾಜಿಕ ಸಂದರ್ಭ, ಕೋಮು ಗಲಭೆ ಇತ್ಯಾದಿ ಸಂಗತಿಗಳನ್ನು ಸರಳವಾಗಿ ಹೇಳಿದ್ದರು.

ಬರೆದರೆ ದೀರ್ಘವಾಗುತ್ತದೆ.. ಪ್ರತಿ ಸಲ ದೇಶದಲ್ಲಿ, ರಾಜ್ಯದಲ್ಲಿ ಬಿಕ್ಕಟ್ಟು ಸಂಭವಿಸಿದಾಗೆಲ್ಲ ಲಂಕೇಶ್ ಇದ್ದರೆ ಏನು ಹೇಳುತ್ತಿದ್ದರು ಎಂಬ ಪ್ರಶ್ನೆ ಕಾಡಿತ್ತು. ಅದಕ್ಕೆ ಚಳುವಳಿಯ ಮೂಲಕ ಗೌರಿ ನಮಗೆ ಉತ್ತರ ಕೊಟ್ಟರು.

ಈಗ ಗೌರಿಯೂ ಇಲ್ಲ, ಲಂಕೇಶರೂ ಇಲ್ಲ ಎಂದು ಕೈಚೆಲ್ಲುವಂತಿಲ್ಲ.
ಈಗ ನಡೆಯುತ್ತಿರವ ಐತಿಹಾಸಿಕ ಚಳುವಳಿಗೆ ಬೆಂಬಲಿಸುವ ಮೂಲಕ ನಾವೆಲ್ಲ ನಂಜುಂಡಸ್ವಾಮಿ, ಲಂಕೇಶ್, ತೇಜಸ್ವಿ…. ಅದರಾಚೆ ಕುವೆಂಪು, ಬಸವಣ್ಣ ಮತ್ತು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.


ಇದನ್ನೂ ಓದಿ: ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...