Homeಮುಖಪುಟಲಂಕೇಶ್ 86: ಕಣ್ಣಾಮುಚ್ಚಾಲೆ ಓದುತ್ತಾ, ಟೀಕೆ-ಟಿಪ್ಪಣಿಯ ಬಂಧನವಾದ ಕತೆ

ಲಂಕೇಶ್ 86: ಕಣ್ಣಾಮುಚ್ಚಾಲೆ ಓದುತ್ತಾ, ಟೀಕೆ-ಟಿಪ್ಪಣಿಯ ಬಂಧನವಾದ ಕತೆ

ಇಟ್ಟಿಗೆ ಪವಿತ್ರವಲ್ಲ ಜೀವ ಪವಿತ್ರ ಎಂಬ ಲಂಕೇಶರ ಟೈಟಲ್ ಈಗಲೂ ದೇಹ ಮತ್ತು ಮನಸ್ಸಿನಲ್ಲಿದೆ. ಪೋಸ್ಟರ್ ಕದಿಯುತ್ತ, ಕಣ್ಣಾ ಮುಚ್ಚಾಲೆ ಆಡುತ್ತ ತುಂಟಾಟ ಮಾಡುತ್ತಿದ್ದ ಕಳ್ಳನೊಬ್ಬ ಟೀಕೆ-ಟಿಪ್ಪಣಿಯಲ್ಲಿ ಬಂಧಿತನಾದ ಕತೆಯಿದು

- Advertisement -
- Advertisement -

ಅದು ತುಂಟಾಟವೂ ಆಗಿತ್ತು, ಕಣ್ಣಾಮುಚ್ಚಾಲೆಯೂ ಆಗಿತ್ತು ಎಂದರೆ ಸಾಕೆ? ನಾವಿಬ್ಬರು ಕಳ್ಳರು ಕದಿಯುವ ಹುಚ್ಚಾಟವಾಗಿಯೇ ಇತ್ತು ಎಂದರೆ ಸರಿ ಅನಿಸುತ್ತದೆ.

ಅದೊಂದು ಪುಟ್ಟ ಗ್ರಂಥಾಲಯ. 3ನೆ ಕ್ಲಾಸಿನಲ್ಲಿದ್ದ ನಾನು ಮತ್ತು ಧನಂಜಯ್ ಕುಂದಾಪೂರ (ಹೊಟೆಲ್ ಮಾಡಿದ್ದ ಕುಂದಾಪೂರ ಕುಟುಂಬದ ಹುಡುಗ, ಈಗ ಅವರ ಫ್ಯಾಮಿಲಿ ಅಲ್ಲಿಲ್ಲ) ಅದ್ಹೇಗೋ ಆ ಗ್ರಂಥಾಲಯದತ್ತ ಆಕರ್ಷಿತರಾದೆವು, ಶಾಲೆಯ ಸಮೀಪವೇ ಇದ್ದುದು ಒಂದು ಕಾರಣ ಅನಿಸುತ್ತೆ.

ಶಾಲೆ ಮುಗಿದ ನಂತರ ಸಿಕ್ಕಾಪಟ್ಟೆ ಆಟ ಆಡಿ ಸುಸ್ತಾಗಿರುತ್ತಿದ್ದ ನಮಗೆ ಆ ಗ್ರಂಥಾಲಯ ಒಂದು ರಿಲೀಫ್ ಸೆಂಟರ್ ಆಗಿತ್ತೇನೊ? ಹಲವು ದಿನಪತ್ರಿಕೆಗಳು, ವಾರಪತ್ರಿಕೆಗಳು… ಅಂತೂ ಒಂದನ್ನು ಹಿಡಿದು ಓದುತ್ತ ಇದ್ದೆವು… ನಂತರ ಹಾಗೆ ನಟಿಸ ತೊಡಗಿದೆವು!
ಇದಕ್ಕೆ ಕಾರಣ ಆಗ ನಮಗೆ ಹುಚ್ಚು ಹಿಡಿಸಿದ್ದ ಕ್ರಿಕೆಟ್ ಮತ್ತು ಗ್ರಂಥಾಲಯದಲ್ಲಿ ಇರುತ್ತಿದ್ದ ಸ್ಪೋರ್ಟ್ಸ್ ಸ್ಟಾರ್ ಮ್ಯಾಗಜೀನ್!

ನಾವು ಕಳ್ಳರಾಗಿ ಬಿಟ್ಟೆವು, ಸ್ಪೋರ್ಟ್ಸ್ ಸ್ಟಾರ್ ‌ನಲ್ಲಿ ಬರುತ್ತಿದ್ದ ಕ್ರಿಕೆಟಿಗರ ವರ್ಣರಂಜಿತ ಫೋಟೊ ಇರುವ ಪೇಜ್ ಎಗರಿಸತೊಡಗಿದೆವು.. 4ನೆ ಕ್ಲಾಸ್ ಮುಟ್ಟುವವರೆಗೂಗೂ ಅವ್ಯಾಹತವಾಗಿ ಹರಿದೆವು, ಕಲೆಕ್ಷನ್ ಮಾಡಿದೆವು. ನನ್ನ ಕಡೆ ಕಲೆಕ್ಷನ್ ಜಾಸ್ತಿ ಎಂದೆಲ್ಲ ಜಗಳ ಆಡಿದೆವು. ಕಲೆಕ್ಷನ್ ಹೆಚ್ಚಿಸಲು, ರಣಜಿ ಆಟಗಾರರ ಫೋಟೊಗಳನ್ನೂ ಕಿತ್ತುಕೊಂಡು ಬಂದೆವು. ರಾಷ್ಟ್ರೀಯ ತಂಡಕ್ಕೆ ಆಡುವ ಮೊದಲೇ ದೆಹಲಿಯ ಬ್ತಾಟ್ಸ್‌ಮನ್ ರಮಣ್ ಲಂಬಾ ಪೋಸ್ಟರ್ ನನ್ನ ಸಂಗ್ರಹದಲ್ಲಿತ್ತು!

ಗಂಭೀರ ಓದುಗರಿಗೆ ಸಂಶಯ ಬರಬಾರದೆಂದು, ಬೇರೆ ಬೇರೆ ಪೇಪರ್ ಓದುವ ನಾಟಕ ಮಾಡುತ್ತಿದ್ದೆವು. ಆಗ ತುಂಟಾಟ ಮತ್ತು ಕಣ್ಣಾಮುಚ್ಚಾಲೆ ನನಗೆ ಆಪ್ತವಾದವು!

ಅಲ್ಲಿನ ಗ್ರಂಥಪಾಲಕ ‘ಪುಂಡ’ ಅವರ ಕೈಗೆ ನಾವು ಒಂದು ಸಲಾನೂ ಸಿಗಲಿಲ್ಲ. ಮೊದಲೆಲ್ಲ ಸ್ಪೋರ್ಟ್ಸ್ ಸ್ಟಾರ್ ಪುಟ ಹರಿದಾಗ ಚರಕ್ ಎಂಬ ಶಬ್ದ ಬರುತ್ತಿತ್ತು, ಪಕ್ಕದವರು ನೋಡಿದ ಕೂಡಲೇ ಗಾಬರಿ ಆಗುತ್ತಿತ್ತು. ಅದಕ್ಕೂ ಒಂದು ಸಲ್ಯೂಷನ್ ಕಂಡು ಹಿಡಿದೆವು. ನೈಸ್ ಆಗಿರುತ್ತಿದ್ದ ಆ ಪುಟಗಳ ಅಂಚಿಗೆ ಒಗುಳನ್ನು (ಎಂಜಲನ್ನು) ಹಚ್ಚಿ ಬಿಡುವುದು! ಹರಿಯುವಾಗ ಚರಕ್ ಇಲ್ಲ ಪರಕ್ ಇಲ್ಲ!

ಗ್ರಂಥಪಾಲಕ ‘ಪುಂಡ’ ಎಂದು ಬರಹದಲ್ಲಿ ಇದೆ ಅಲ್ಲವೇ? ಮುಂದೆ ಇವರೇ ನೀಲು ಕಾವ್ಯಕ್ಕೆ ಹಲವು ವರ್ಷ ‘ಪುಂಡ’ ಹೆಸರಲ್ಲಿ ರೇಖಾಚಿತ್ರ ಬರೆದ ಕೆ.ವಿ. ಪುಂಡಲೀಕ ಅಥವಾ ಪುಂಡಲೀಕ ಕಲ್ಲಿಗನೂರು…

ಈ ದುಸ್ಸಾಹಸದ ನಡುವೆ ನನ್ನನ್ನು ಲಂಕೇಶ್ ಪತ್ರಿಕೆ ಕ್ಯಾಚ್ ಮಾಡಿತ್ತು. ಆರನೇ ಕ್ಲಾಸಿನಲ್ಲಿ ಇರುವಾಗ ಹೈಸ್ಕೂಲ್‌ಗೆ ಜೀವಶಾಸ್ತ್ರ ಪಾಠ ಮಾಡುತ್ತಿದ್ದ ಇ.ಪ್ರಭಾಕರನ್ ಸರ್ ಹತ್ತಿರವಾದರು. ದಿನವೂ ಅವರ ಮನೆಗೆ ಹೋಗುತ್ತಿದ್ದೆ. ಅಲ್ಲಿ ಪ್ರಜಾವಾಣಿ, ಲಂಕೇಶ್ ಪತ್ರಿಕೆ, ಸುಧಾ, ಮಯೂರ ಎಲ್ಲವೂ ಲಭ್ಯವಿತ್ತು. ತಮಿಳು ಮೂಲದ ಪ್ರಭಾಕರನ್ ಸರ್ ಗದಗ ಜಿಲ್ಲೆಯ ಪುಟ್ಟ ಊರಿಗೆ ಮಾಸ್ತರಾಗಿ ಬಂದಿದ್ದೇ ಒಂದು ಕುತೂಹಲದ ವಿಷಯ. ಅಪ್ಪಟ ಸೆಕ್ಯುಲರ್ ಮತ್ತು ವಿಚಾರವಾದಿ ಆಗಿದ್ದ ಅವರು ನನ್ನಂತಹ ಅನೇಕರಿಗೆ ಟೀಕೆ ಟಿಪ್ಪಣಿ ಓದಲು ಸಲಹೆ ಮಾಡುತ್ತಿದ್ದರು. (ಸರ್ 3 ವರ್ಷದ ಹಿಂದೆ ತೀರಿಕೊಂಡರು)

ಅಲ್ಲಿಂದ ಶುರುವಾಯ್ತು ಲಂಕೇಶರ ಜೊತೆಗಿನ ವರ್ಚುವಲ್ ಒಡನಾಟ. ಪಿಯುಸಿಗೆಂದು ಬಲವಂತವಾಗಿ ನನ್ನನ್ನು ಧಾರವಾಡಕ್ಕೆ ಅಟ್ಟಿದ ಮೇಲೆ, ಅಲ್ಲಿದ್ದ ಹೋರಾಟದ ಪರಿಸರ ನನ್ನನ್ನು ಲಂಕೇಶ್ ಪತ್ರಿಕೆಯೊಂದಿಗೆ ಇನ್ನಷ್ಟು ಆಪ್ತಗೊಳಿಸಿತು. ಕಣ್ಣಾಮುಚ್ಚಾಲೆಗೆ ಕಳಿಸಿದ ಪ್ರಶ್ನೆಗಳಿಗೆ ಮೊದಲು 30, ನಂತರ 50 ರೂ ಬಹುಮಾನ ತಿಂಗಳಲ್ಲಿ ಎರಡು ಸಲ ಸಿಗುವಂತಾಯಿತು.
****

ಧಾರವಾಡದಲ್ಲಿ ನಾನಿದ್ದ ಹಾಸ್ಟೇಲ್ ಪಕ್ಕದಲ್ಲಿ ಎಸ್‌ಸಿ/ಎಸ್‌ಟಿ, ಬಿಸಿಎಂ ಮತ್ತು ಸ್ಪೋರ್ಟ್ಸ್ ಹಾಸ್ಟೇಲ್ ಇದ್ದವು. ಅಲ್ಲಿದ್ದ ಮಿತ್ರರನ್ನು ಭೇಟಿಯಾಗಲು ಹೋಗುತ್ತಿದ್ದ ಕಾರಣಕ್ಕೆ, ನನಗೆ ಪಿವಿಕೆ (ಪ್ರಗತಿಪರ ವಿದ್ಯಾರ್ಥಿ ಕೇಂದ್ರ) ನಂಟು ಬೆಳೆಯಿತು. ಹಾಗಂತ ನಾನೇನೂ ಅದರ ಸದಸ್ಯನಾಗಲಿಲ್ಲ. ಪಿವಿಕೆ ಧಾರವಾಡದ ಅಗ್ರಿ ಯುನಿವರ್ಸಿಟಿಯಲ್ಲಿ ತುಂಬ ಸ್ಟ್ರಾಂಗ್ ಆಗಿತ್ತು. ವಿದ್ಯಾರ್ಥಿಗಳ ಕಷ್ಟಗಳಿಗೆ ಅದು ಸ್ಪಂದಿಸಿ ಜಯ ಸಾಧಿಸುತ್ತಿತ್ತು.

ಚೆನ್ನೈನಲ್ಲಿ ನಡೆದ ಅಖಿಲ ಭಾರತೀಯ ಕ್ರಾಂತಿಕಾರಿ ವಿದ್ಯಾರ್ಥಿ ಸಮಾವೇಶಕ್ಕೆ ಹೋಗಿ ಚೆನ್ನೈನ ಪೆರಿಯಾರ್ ಭವನದಲ್ಲಿ ಎಂಟು ತಾಸು ಗೃಹ ಬಂಧನವಾಗಿತ್ತು.
ನಂತರ ಕಾಡತೊಡಗಿದ್ದು, ಯಾಕೆ ಲಂಕೇಶ್ ಇಂತಹ ಚಳುವಳಿಯ ಬಗ್ಗೆ ಅಷ್ಟಾಗಿ ಪ್ರಚಾರ ಕೊಡುತ್ತಿಲ್ಲ ಎಂಬ ವಿಷಯ… ಅದು ಆ ಕಾಲಘಟ್ಟದ ವೈಪರೀತ್ಯವೋ? ಅಥವಾ ಲಂಕೇಶ್‌ರಿಗೆ ಆಪ್ತವಾಗಿದ್ದವರು ಪಿವಿಕೆ ಮತ್ತು ಕೆವಿಆರ್ ಸದಸ್ಯರನ್ನು ಅವರಿಂದ ದೂರ ಇಡಿಸಿದರೋ? ಈ ಪ್ರಶ್ನೆ ಈಗಲೂ ಇದೆ.
****

ಆಗ ನನಗೆ ಚಳುವಳಿಗಳ ಬಗ್ಗೆ ಅಷ್ಟಾದ ತಿಳುವಳಿಕೆ ಇರಲಿಲ್ಲ. ಧಾರವಾಡ ಗ್ರಾಮೀಣದಲ್ಲಿ ನಂಜುಂಡಸ್ವಾಮಿಯವರ ಗೆಲುವಿಗೆ ಕೆಲಸ ಮಾಡಿದೆವು. ಅದೊಂದು ಅಭೂತಪೂರ್ವ ಅನುಭವ. ಹಳ್ಳಿಹಳ್ಳಿಗಳಲ್ಲಿ ರೈತರ ರಣೋತ್ಸಾಹವಿತ್ತು. ಈಗಿನ ಐತಿಹಾಸಿಕ ರೈತ ಪ್ರತಿಭಟನೆ ವೇಳೆ ಅದೆಲ್ಲ ನೆನಪಾಗುತ್ತಿದೆ.

ಮತ್ತೆ ಮೂಲ ವಿಷಯಕ್ಕೆ ಬರೋಣ, ತುಮಕೂರಿನಲ್ಲಿ ಎರಡನೇ ಪಿಯುಸಿ ವಿಜ್ಞಾನ ಓದುತ್ತಿದ್ದ ಹುಡುಗನೊಬ್ಬ (ಹೆಸರು ಯೋಗೀಶ್ ಅನಿಸುತ್ತೆ) ಲಂಕೇಶರಿಗೆ ಪತ್ರ ಬರೆದಿದ್ದ: ‘ದೆಹಲಿಯಲ್ಲಿ ಅಧಿಕಾರ ಸ್ವೀಕಾರದ ಸಂಭ್ರಮ ನಡೆಯುತ್ತಿರುವಾಗ ಗಾಂಧಿ ಕಲಕತ್ತಾದ ಬೀದಿಗಳಲ್ಲಿ ಅಡ್ಡಾಡುತ್ತಿದ್ದರು’ ಎಂಬ ವಾಕ್ಯ ಅರ್ಥವಾಗಲಿಲ್ಲ ಸರ್ ಎಂದು ಕೇಳಿದ್ದ. ಆಗ ಎರಡನೇ ಪಿಯು ಕನ್ನಡದಲ್ಲಿ ಲಂಕೇಶರ ‘ಮೋಕ್ಷ ಹುಡುಕುತ್ತ ಪ್ರೀತಿಯ ಬಂಧನದಲ್ಲಿ’ ಎಂಬ ಟೀಕೆ-ಟಿಪ್ಪಣೆ ಪಠ್ಯವಾಗಿತ್ತು. ಆ ತುಮಕೂರಿನ ಹುಡುಗನ ಪ್ರಶ್ನೆಗೆ ಮರುವಾರ ಉತ್ತರಿಸಿದ ಲಂಕೇಶ್, ಅಂದಿನ ( ಸ್ವಾತಂತ್ರ್ಯ ಸಿಕ್ಕ ಸಂದರ್ಭ) ಸಾಮಾಜಿಕ ಸಂದರ್ಭ, ಕೋಮು ಗಲಭೆ ಇತ್ಯಾದಿ ಸಂಗತಿಗಳನ್ನು ಸರಳವಾಗಿ ಹೇಳಿದ್ದರು.

ಬರೆದರೆ ದೀರ್ಘವಾಗುತ್ತದೆ.. ಪ್ರತಿ ಸಲ ದೇಶದಲ್ಲಿ, ರಾಜ್ಯದಲ್ಲಿ ಬಿಕ್ಕಟ್ಟು ಸಂಭವಿಸಿದಾಗೆಲ್ಲ ಲಂಕೇಶ್ ಇದ್ದರೆ ಏನು ಹೇಳುತ್ತಿದ್ದರು ಎಂಬ ಪ್ರಶ್ನೆ ಕಾಡಿತ್ತು. ಅದಕ್ಕೆ ಚಳುವಳಿಯ ಮೂಲಕ ಗೌರಿ ನಮಗೆ ಉತ್ತರ ಕೊಟ್ಟರು.

ಈಗ ಗೌರಿಯೂ ಇಲ್ಲ, ಲಂಕೇಶರೂ ಇಲ್ಲ ಎಂದು ಕೈಚೆಲ್ಲುವಂತಿಲ್ಲ.
ಈಗ ನಡೆಯುತ್ತಿರವ ಐತಿಹಾಸಿಕ ಚಳುವಳಿಗೆ ಬೆಂಬಲಿಸುವ ಮೂಲಕ ನಾವೆಲ್ಲ ನಂಜುಂಡಸ್ವಾಮಿ, ಲಂಕೇಶ್, ತೇಜಸ್ವಿ…. ಅದರಾಚೆ ಕುವೆಂಪು, ಬಸವಣ್ಣ ಮತ್ತು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.


ಇದನ್ನೂ ಓದಿ: ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...