Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...