Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...