Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...