Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...