Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...