Homeಮುಖಪುಟ‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ.

- Advertisement -
- Advertisement -

ಕನ್ನಡದ ಮೇರು ಲೇಖಕ, ನಾಟಕಕಾರ ಗಿರೀಶ್ ಕಾರ್ನಾಡ್ ನಮ್ಮನ್ನಗಲಿದ್ದಾರೆ. ಇಂಗ್ಲಿಷ್ ಹಿಂದಿಯಲ್ಲೂ ಅತ್ಯುತ್ತಮವಾಗಿ ಬರೆಯಬಲ್ಲವರಾಗಿದ್ದ ಕಾರ್ನಾಡ್, ಕನ್ನಡವನ್ನೇ ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿಸಿಕೊಂಡಿದ್ದರು. ಜ್ಞಾನಪೀಠ ಪುರಸ್ಕೃತರೆಂಬುದಷ್ಟೇ ಅವರ ಹಿರಿಮೆಯಲ್ಲ. ಅವರ ನಾಟಕ ಪ್ರತಿಭೆಯ ಕುರಿತು ಅರಿಯಬೇಕೆಂದರೆ, ಅವರ ತಲೆದಂಡ ನಾಟಕದ ಕುರಿತು ಪಿ.ಲಂಕೇಶ್‍ರವರು 1990ರಲ್ಲಿ ಬರದ ಪುಟ್ಟ ಬರಹ ಓದಬೇಕು. ಪ್ರೊ.ವಿ.ಎಸ್.ಶ್ರೀಧರ್ ಅವರು ಸಂಪಾದಿಸಿರುವ ‘ಸಾಹಿತಿ ಸಾಹಿತ್ಯ ವಿಮರ್ಶೆ’ ಪುಸ್ತಕದಿಂದ ಈ ಬರಹವನ್ನು ಆಯ್ದುಕೊಳ್ಳಲಾಗಿದೆ. 

ಮೇಲಿನದನ್ನು ಬರೆದು ಬೇಸರವಾಗಿರುವಾಗ ಮೊನ್ನೆ ಆದ ಒಂದು ಸಣ್ಣ ಸಂಗತಿ, ತಮಾಷೆಯ ಸಂಗತಿ ಹೇಳುತ್ತೇನೆ. ನಾನು ಒಬ್ಬನೇ ಕೂತು ಅದೇನೋ ಲೆಕ್ಕಾ ಹಾಕುತ್ತಿದೆ. ಗಿರೀಶ್ ಕಾರ್ನಾಡರ ‘ತಲೆದಂಡ’ ನಾಟಕವನ್ನು ಆಗತಾನೇ ಓದಿ ಮುಗಿಸಿದ್ದೆ. ಗಿರೀಶ್ ಕಾರ್ನಡ್ ಎಂಥ ವಿಚಿತ್ರ ಮನುಷ್ಯರೆಂಬುದು ಅನೇಕರಿಗೆ ಗೊತ್ತಿಲ್ಲ. ಈತ ಮನಸ್ಸು ಮಾಡಿದರೆ ವಿಕ್ರಮ್ ಶೇಟ್, ಸಲ್ಮಾನ್ ರಶ್ದಿ, ನಾಯ್‍ಪಾಲ್ ತರಹದ ಇಂಗ್ಲಿಷ್ ಲೇಖಕರಾಗಿ ಮೆರೆಯಬಹುದಿತ್ತು. ನಮ್ಮಲ್ಲಿ ಇಂಗ್ಲಿಷ್ ಭಾಷೆಯನ್ನು ಅದರೆಲ್ಲ ಚೆಂದದೊಂದಿಗೆ ಬಳಸಬಲ್ಲ ವ್ಯಕ್ತಿ ಗಿರೀಶ್. ಇಂಗ್ಲಿಷ್ ಲೇಖಕರ ಆದಾಯ, ಖ್ಯಾತಿ, ವೈಭವ ಅನೇಕರಿಗೆ ಗೊತ್ತಿರಲಿಕ್ಕಿಲ್ಲ, ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ. ಬರೆಯುತ್ತಾ ಅವರ ಕನ್ನಡ ಶೈಲಿ ಜನಸಾಮಾನ್ಯರ ಮಾತುಗಳನ್ನು, ಸಾಮಾನ್ಯರ ಮಾತಿನ ಗತ್ತು, ಕಮರನ್ನು ಪಡೆಯುತ್ತದೆ. ಅವರ ‘ತಲೆದಂಡ’ ನಾಟಕದಲ್ಲಿನ ಬಸವಣ್ಣ, ಬಿಜ್ಜಳ ರಾಜ, ಮಂತ್ರಿಯ ಗತ್ತನ್ನೆಲ್ಲ ಬಿಟ್ಟು ಎಲ್ಲ ಮನುಷ್ಯರಂತೆ, ಅಗಾಧ ಸಮಸ್ಯೆಗಳ ಎದುರಿಸುವ ದಿಟ್ಟರಂತೆ ಕಂಡುಬರುತ್ತಾರೆ.

ಇಲ್ಲಿಯ ‘ತಲೆದಂಡ’ ವಸ್ತುವಿಗಿಂತಲೂ ಪವಾಡ ಅರ್ಥಪೂರ್ಣವಾಗಿದೆ. ಹನ್ನೆರಡನೆ ಶತಮಾನದ ಕ್ಷೌರಿಕ ಜಾತಿಗೆ ಸೇರಿದ ವ್ಯಕ್ತಿಯೊಬ್ಬ (ಈತ ಜೈನ ಎಂದು ನಾನು ಓದಿದ್ದೆ) ಬಸವಣ್ಣನವರ ಮಾಂತ್ರಿಕ ಸ್ಪರ್ಶದಿಂದ ದೊರೆಯಾಗುವುದೇ ಅಲ್ಲದೆ, ಪವಾಡವೊಂದನ್ನು ಕಾಣುತ್ತಾನೆ-ಜೋಳ ಮುತ್ತಾಗುವ, ಬಸವಣ್ಣನವರು ತಮ್ಮ ಧಾರಾಳವನ್ನು ಚಾಣಾಕ್ಷತೆಯಿಂದ ಮುಚ್ಚಿಹಾಕುವ ಪವಾಡವಲ್ಲ; ಶತಮಾನಗಳಿಂದ ಕೆಳಜಾತಿಯವರು, ಕೀಳುಜನ ಎನ್ನಿಸಿಕೊಂಡಿದ್ದ, ಎಂದುಕೊಂಡಿದ್ದ ಜನ ಮನುಷ್ಯರಾಗುವ, ವಿಚಾರವಂತರಾಗುವ, ಕಲಿಗಳಾಗುವ, ದೊರೆಗಳಾಗುವ ಪವಾಡ.

…ಈ ನಾಟಕ ಓದುತ್ತಿದ್ದಾಗ ನನ್ನನ್ನು ನೋಡಿಕೊಳ್ಳುವ ಹುಡುಗ ನನ್ನ ಕೋಣೆಗೆ ಬಂದು ಹೇಳಿದ: “ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ಬಂದಿದ್ದಾರೆ!”
“ಆ?  ಏನಂದೆ?” ಅಂದೆ.
“ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ನಿಮ್ಮನ್ನು ನೋಡಲು ಬಂದಿದ್ದಾರೆ.”
“ಛೆ, ಮತ್ತೆ ಕೇಳಿಕೊಂಡು ಬಾ-ಅವರಿರಲಾರರು” ಅಂದೆ. ಆತ ಹೋದ. ಮರುಕ್ಷಣ ಬಂದು ಹೇಳಿದ, “ಹೌದು ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರಂತೆ” ಅಂದ.
ನಾನು ನಕ್ಕೆ, ‘ತಲೆದಂಡ’ದ ಗುಂಗಿನಲ್ಲಿದ್ದ ನಾನು ಎದ್ದು, “ಸ್ವಲ್ಪ ಇರಲು ಹೇಳು” ಎಂದು ಯೋಚಿಸಿದೆ. ಅವರು ಬರಲು ಸಾಧ್ಯವೇ ಇಲ್ಲ. ಆದರೆ ಆ ಹೆಸರನ್ನು ಪೂರ್ತಿ ಬೇರೆಯವರು ಇಟ್ಟುಕೊಳ್ಳುವುದೂ ಸಾಧ್ಯವಿಲ್ಲ. “ಆಕಸ್ಮಾತ್ ಅವರೇ ಬಂದಿದ್ದರೆ?” ಎಂದು ಕೇಳಿಕೊಂಡು ನಕ್ಕೆ. ‘ತಲೆದಂಡ’ದ ಗುಂಗು ತೀವ್ರವಾಯಿತು. ಅನೇಕಾನೇಕ ದೆವ್ವದ, ಅತೀಂದ್ರಿಯ ಕತೆಗಳನ್ನು ಬರೆದ ಮಾಸ್ತಿ ಬಂದೇಬಿಟ್ಟಿದ್ದರೆ? ನಕ್ಕೆ, ಒಂದು ಕ್ಷಣ ಯೋಚಿಸಿದೆ. ಬಾಗಿಲು ತೆರೆದುಕೊಂಡು ಬಂದೇಬಿಟ್ಟರೆ ಗತಿಯೇನೆಂದು ನಾನೇ ಬಾಗಿಲು ತೆರೆದು ನೋಡಿದೆ..,. ಅಲ್ಲಿ..,. ಮಾಸ್ತಿಯವರ ಮೂರನೇ ಅಳಿಯ ಶೇಷಾದ್ರಿ ನಿಂತಿದ್ದರು!
“ಛೆ, ಇದೇನ್ರಿ.,. ಮಾಸ್ತಿ ಅಂತ ನೀವು ಹೇಳಿಕೊಳ್ಳೋದೆ?” ಅಂದೆ.
“ಹಾಗೆ ಹೇಳದಿದ್ದರೆ ನೀವು ನೋಡದಕ್ಕೆ ನಿರಾಕರಿಸ್ತೀರಿ ಅಂತ ಹಾಗಂದೆ” ಅಂದರು.
ಕ್ಷಣದ ತಳಮಳ ತಿಳಿಸಿದೆ. ಅವರು ದೊಡ್ಡದಾಗಿ ನಕ್ಕು. “ನೀವು ಅಂಥದ್ದನ್ನೆಲ್ಲ ನಂಬುವುದಿಲ್ಲವಲ್ಲ?” ಅಂದರು.
“ಒಂದು ಕ್ಷಣ ನಂಬಿಕೆ ಸುಳ್ಳಾದರೆ ಗತಿಯೇನು ಹೇಳಿ?” ಅಂದೆ. ಶೇಷಾದ್ರಿ ದೊಡ್ಡದಾಗಿ ನಕ್ಕು ತಮ್ಮ ಕಷ್ಟ ಹೇಳಿಕೊಳ್ಳತೊಡಗಿದರು.
ನಿಮಗೀಗ ಎಷ್ಟು ವಯಸ್ಸು? ಅಂದೆ. ಎಪ್ಪತ್ತಿರಬಹುದೆ? ಎಪ್ಪತ್ತೈದು?
“ನೀವು ಸತ್ಯಕ್ಕೆ ಹತ್ತಿರ ಇದ್ದೀರಿ” ಎಂದರು. ನಿಗೂಢವಾಗಿ-
‘ತಲೆದಂಡ’ದ ಗುಂಗಿನಲ್ಲಿದ್ದ ನಾನು, ಹನ್ನೆರಡನೆ ಶತಮಾನದ ಬಸವಣ್ಣ, ಅಲ್ಲಮರ ಉಯ್ಯಾಲೆಯಲ್ಲಿದ್ದ ನಾನು ಮಾಸ್ತಿಯವರವರೆಗೆ ಹೀಜಿಕೊಂಡಿದ್ದೆ. ಎದುರು ಕೂತು ಮಾತಾಡುತ್ತಿದ್ದ ಮಾಸ್ತಿಯವರ ಅಳಿಯ ಶೇಷಾದ್ರಿಯವರ ಒಂದು ಮಾತೂ ನನ್ನನ್ನು ತಲುಪಲಿಲ್ಲ.
ಡಿಸೆಂಬರ್ 2, 1990

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...