Homeಮುಖಪುಟ‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ.

- Advertisement -
- Advertisement -

ಕನ್ನಡದ ಮೇರು ಲೇಖಕ, ನಾಟಕಕಾರ ಗಿರೀಶ್ ಕಾರ್ನಾಡ್ ನಮ್ಮನ್ನಗಲಿದ್ದಾರೆ. ಇಂಗ್ಲಿಷ್ ಹಿಂದಿಯಲ್ಲೂ ಅತ್ಯುತ್ತಮವಾಗಿ ಬರೆಯಬಲ್ಲವರಾಗಿದ್ದ ಕಾರ್ನಾಡ್, ಕನ್ನಡವನ್ನೇ ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿಸಿಕೊಂಡಿದ್ದರು. ಜ್ಞಾನಪೀಠ ಪುರಸ್ಕೃತರೆಂಬುದಷ್ಟೇ ಅವರ ಹಿರಿಮೆಯಲ್ಲ. ಅವರ ನಾಟಕ ಪ್ರತಿಭೆಯ ಕುರಿತು ಅರಿಯಬೇಕೆಂದರೆ, ಅವರ ತಲೆದಂಡ ನಾಟಕದ ಕುರಿತು ಪಿ.ಲಂಕೇಶ್‍ರವರು 1990ರಲ್ಲಿ ಬರದ ಪುಟ್ಟ ಬರಹ ಓದಬೇಕು. ಪ್ರೊ.ವಿ.ಎಸ್.ಶ್ರೀಧರ್ ಅವರು ಸಂಪಾದಿಸಿರುವ ‘ಸಾಹಿತಿ ಸಾಹಿತ್ಯ ವಿಮರ್ಶೆ’ ಪುಸ್ತಕದಿಂದ ಈ ಬರಹವನ್ನು ಆಯ್ದುಕೊಳ್ಳಲಾಗಿದೆ. 

ಮೇಲಿನದನ್ನು ಬರೆದು ಬೇಸರವಾಗಿರುವಾಗ ಮೊನ್ನೆ ಆದ ಒಂದು ಸಣ್ಣ ಸಂಗತಿ, ತಮಾಷೆಯ ಸಂಗತಿ ಹೇಳುತ್ತೇನೆ. ನಾನು ಒಬ್ಬನೇ ಕೂತು ಅದೇನೋ ಲೆಕ್ಕಾ ಹಾಕುತ್ತಿದೆ. ಗಿರೀಶ್ ಕಾರ್ನಾಡರ ‘ತಲೆದಂಡ’ ನಾಟಕವನ್ನು ಆಗತಾನೇ ಓದಿ ಮುಗಿಸಿದ್ದೆ. ಗಿರೀಶ್ ಕಾರ್ನಡ್ ಎಂಥ ವಿಚಿತ್ರ ಮನುಷ್ಯರೆಂಬುದು ಅನೇಕರಿಗೆ ಗೊತ್ತಿಲ್ಲ. ಈತ ಮನಸ್ಸು ಮಾಡಿದರೆ ವಿಕ್ರಮ್ ಶೇಟ್, ಸಲ್ಮಾನ್ ರಶ್ದಿ, ನಾಯ್‍ಪಾಲ್ ತರಹದ ಇಂಗ್ಲಿಷ್ ಲೇಖಕರಾಗಿ ಮೆರೆಯಬಹುದಿತ್ತು. ನಮ್ಮಲ್ಲಿ ಇಂಗ್ಲಿಷ್ ಭಾಷೆಯನ್ನು ಅದರೆಲ್ಲ ಚೆಂದದೊಂದಿಗೆ ಬಳಸಬಲ್ಲ ವ್ಯಕ್ತಿ ಗಿರೀಶ್. ಇಂಗ್ಲಿಷ್ ಲೇಖಕರ ಆದಾಯ, ಖ್ಯಾತಿ, ವೈಭವ ಅನೇಕರಿಗೆ ಗೊತ್ತಿರಲಿಕ್ಕಿಲ್ಲ, ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ. ಬರೆಯುತ್ತಾ ಅವರ ಕನ್ನಡ ಶೈಲಿ ಜನಸಾಮಾನ್ಯರ ಮಾತುಗಳನ್ನು, ಸಾಮಾನ್ಯರ ಮಾತಿನ ಗತ್ತು, ಕಮರನ್ನು ಪಡೆಯುತ್ತದೆ. ಅವರ ‘ತಲೆದಂಡ’ ನಾಟಕದಲ್ಲಿನ ಬಸವಣ್ಣ, ಬಿಜ್ಜಳ ರಾಜ, ಮಂತ್ರಿಯ ಗತ್ತನ್ನೆಲ್ಲ ಬಿಟ್ಟು ಎಲ್ಲ ಮನುಷ್ಯರಂತೆ, ಅಗಾಧ ಸಮಸ್ಯೆಗಳ ಎದುರಿಸುವ ದಿಟ್ಟರಂತೆ ಕಂಡುಬರುತ್ತಾರೆ.

ಇಲ್ಲಿಯ ‘ತಲೆದಂಡ’ ವಸ್ತುವಿಗಿಂತಲೂ ಪವಾಡ ಅರ್ಥಪೂರ್ಣವಾಗಿದೆ. ಹನ್ನೆರಡನೆ ಶತಮಾನದ ಕ್ಷೌರಿಕ ಜಾತಿಗೆ ಸೇರಿದ ವ್ಯಕ್ತಿಯೊಬ್ಬ (ಈತ ಜೈನ ಎಂದು ನಾನು ಓದಿದ್ದೆ) ಬಸವಣ್ಣನವರ ಮಾಂತ್ರಿಕ ಸ್ಪರ್ಶದಿಂದ ದೊರೆಯಾಗುವುದೇ ಅಲ್ಲದೆ, ಪವಾಡವೊಂದನ್ನು ಕಾಣುತ್ತಾನೆ-ಜೋಳ ಮುತ್ತಾಗುವ, ಬಸವಣ್ಣನವರು ತಮ್ಮ ಧಾರಾಳವನ್ನು ಚಾಣಾಕ್ಷತೆಯಿಂದ ಮುಚ್ಚಿಹಾಕುವ ಪವಾಡವಲ್ಲ; ಶತಮಾನಗಳಿಂದ ಕೆಳಜಾತಿಯವರು, ಕೀಳುಜನ ಎನ್ನಿಸಿಕೊಂಡಿದ್ದ, ಎಂದುಕೊಂಡಿದ್ದ ಜನ ಮನುಷ್ಯರಾಗುವ, ವಿಚಾರವಂತರಾಗುವ, ಕಲಿಗಳಾಗುವ, ದೊರೆಗಳಾಗುವ ಪವಾಡ.

…ಈ ನಾಟಕ ಓದುತ್ತಿದ್ದಾಗ ನನ್ನನ್ನು ನೋಡಿಕೊಳ್ಳುವ ಹುಡುಗ ನನ್ನ ಕೋಣೆಗೆ ಬಂದು ಹೇಳಿದ: “ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ಬಂದಿದ್ದಾರೆ!”
“ಆ?  ಏನಂದೆ?” ಅಂದೆ.
“ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ನಿಮ್ಮನ್ನು ನೋಡಲು ಬಂದಿದ್ದಾರೆ.”
“ಛೆ, ಮತ್ತೆ ಕೇಳಿಕೊಂಡು ಬಾ-ಅವರಿರಲಾರರು” ಅಂದೆ. ಆತ ಹೋದ. ಮರುಕ್ಷಣ ಬಂದು ಹೇಳಿದ, “ಹೌದು ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರಂತೆ” ಅಂದ.
ನಾನು ನಕ್ಕೆ, ‘ತಲೆದಂಡ’ದ ಗುಂಗಿನಲ್ಲಿದ್ದ ನಾನು ಎದ್ದು, “ಸ್ವಲ್ಪ ಇರಲು ಹೇಳು” ಎಂದು ಯೋಚಿಸಿದೆ. ಅವರು ಬರಲು ಸಾಧ್ಯವೇ ಇಲ್ಲ. ಆದರೆ ಆ ಹೆಸರನ್ನು ಪೂರ್ತಿ ಬೇರೆಯವರು ಇಟ್ಟುಕೊಳ್ಳುವುದೂ ಸಾಧ್ಯವಿಲ್ಲ. “ಆಕಸ್ಮಾತ್ ಅವರೇ ಬಂದಿದ್ದರೆ?” ಎಂದು ಕೇಳಿಕೊಂಡು ನಕ್ಕೆ. ‘ತಲೆದಂಡ’ದ ಗುಂಗು ತೀವ್ರವಾಯಿತು. ಅನೇಕಾನೇಕ ದೆವ್ವದ, ಅತೀಂದ್ರಿಯ ಕತೆಗಳನ್ನು ಬರೆದ ಮಾಸ್ತಿ ಬಂದೇಬಿಟ್ಟಿದ್ದರೆ? ನಕ್ಕೆ, ಒಂದು ಕ್ಷಣ ಯೋಚಿಸಿದೆ. ಬಾಗಿಲು ತೆರೆದುಕೊಂಡು ಬಂದೇಬಿಟ್ಟರೆ ಗತಿಯೇನೆಂದು ನಾನೇ ಬಾಗಿಲು ತೆರೆದು ನೋಡಿದೆ..,. ಅಲ್ಲಿ..,. ಮಾಸ್ತಿಯವರ ಮೂರನೇ ಅಳಿಯ ಶೇಷಾದ್ರಿ ನಿಂತಿದ್ದರು!
“ಛೆ, ಇದೇನ್ರಿ.,. ಮಾಸ್ತಿ ಅಂತ ನೀವು ಹೇಳಿಕೊಳ್ಳೋದೆ?” ಅಂದೆ.
“ಹಾಗೆ ಹೇಳದಿದ್ದರೆ ನೀವು ನೋಡದಕ್ಕೆ ನಿರಾಕರಿಸ್ತೀರಿ ಅಂತ ಹಾಗಂದೆ” ಅಂದರು.
ಕ್ಷಣದ ತಳಮಳ ತಿಳಿಸಿದೆ. ಅವರು ದೊಡ್ಡದಾಗಿ ನಕ್ಕು. “ನೀವು ಅಂಥದ್ದನ್ನೆಲ್ಲ ನಂಬುವುದಿಲ್ಲವಲ್ಲ?” ಅಂದರು.
“ಒಂದು ಕ್ಷಣ ನಂಬಿಕೆ ಸುಳ್ಳಾದರೆ ಗತಿಯೇನು ಹೇಳಿ?” ಅಂದೆ. ಶೇಷಾದ್ರಿ ದೊಡ್ಡದಾಗಿ ನಕ್ಕು ತಮ್ಮ ಕಷ್ಟ ಹೇಳಿಕೊಳ್ಳತೊಡಗಿದರು.
ನಿಮಗೀಗ ಎಷ್ಟು ವಯಸ್ಸು? ಅಂದೆ. ಎಪ್ಪತ್ತಿರಬಹುದೆ? ಎಪ್ಪತ್ತೈದು?
“ನೀವು ಸತ್ಯಕ್ಕೆ ಹತ್ತಿರ ಇದ್ದೀರಿ” ಎಂದರು. ನಿಗೂಢವಾಗಿ-
‘ತಲೆದಂಡ’ದ ಗುಂಗಿನಲ್ಲಿದ್ದ ನಾನು, ಹನ್ನೆರಡನೆ ಶತಮಾನದ ಬಸವಣ್ಣ, ಅಲ್ಲಮರ ಉಯ್ಯಾಲೆಯಲ್ಲಿದ್ದ ನಾನು ಮಾಸ್ತಿಯವರವರೆಗೆ ಹೀಜಿಕೊಂಡಿದ್ದೆ. ಎದುರು ಕೂತು ಮಾತಾಡುತ್ತಿದ್ದ ಮಾಸ್ತಿಯವರ ಅಳಿಯ ಶೇಷಾದ್ರಿಯವರ ಒಂದು ಮಾತೂ ನನ್ನನ್ನು ತಲುಪಲಿಲ್ಲ.
ಡಿಸೆಂಬರ್ 2, 1990

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...