Homeಮುಖಪುಟ‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ.

- Advertisement -
- Advertisement -

ಕನ್ನಡದ ಮೇರು ಲೇಖಕ, ನಾಟಕಕಾರ ಗಿರೀಶ್ ಕಾರ್ನಾಡ್ ನಮ್ಮನ್ನಗಲಿದ್ದಾರೆ. ಇಂಗ್ಲಿಷ್ ಹಿಂದಿಯಲ್ಲೂ ಅತ್ಯುತ್ತಮವಾಗಿ ಬರೆಯಬಲ್ಲವರಾಗಿದ್ದ ಕಾರ್ನಾಡ್, ಕನ್ನಡವನ್ನೇ ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿಸಿಕೊಂಡಿದ್ದರು. ಜ್ಞಾನಪೀಠ ಪುರಸ್ಕೃತರೆಂಬುದಷ್ಟೇ ಅವರ ಹಿರಿಮೆಯಲ್ಲ. ಅವರ ನಾಟಕ ಪ್ರತಿಭೆಯ ಕುರಿತು ಅರಿಯಬೇಕೆಂದರೆ, ಅವರ ತಲೆದಂಡ ನಾಟಕದ ಕುರಿತು ಪಿ.ಲಂಕೇಶ್‍ರವರು 1990ರಲ್ಲಿ ಬರದ ಪುಟ್ಟ ಬರಹ ಓದಬೇಕು. ಪ್ರೊ.ವಿ.ಎಸ್.ಶ್ರೀಧರ್ ಅವರು ಸಂಪಾದಿಸಿರುವ ‘ಸಾಹಿತಿ ಸಾಹಿತ್ಯ ವಿಮರ್ಶೆ’ ಪುಸ್ತಕದಿಂದ ಈ ಬರಹವನ್ನು ಆಯ್ದುಕೊಳ್ಳಲಾಗಿದೆ. 

ಮೇಲಿನದನ್ನು ಬರೆದು ಬೇಸರವಾಗಿರುವಾಗ ಮೊನ್ನೆ ಆದ ಒಂದು ಸಣ್ಣ ಸಂಗತಿ, ತಮಾಷೆಯ ಸಂಗತಿ ಹೇಳುತ್ತೇನೆ. ನಾನು ಒಬ್ಬನೇ ಕೂತು ಅದೇನೋ ಲೆಕ್ಕಾ ಹಾಕುತ್ತಿದೆ. ಗಿರೀಶ್ ಕಾರ್ನಾಡರ ‘ತಲೆದಂಡ’ ನಾಟಕವನ್ನು ಆಗತಾನೇ ಓದಿ ಮುಗಿಸಿದ್ದೆ. ಗಿರೀಶ್ ಕಾರ್ನಡ್ ಎಂಥ ವಿಚಿತ್ರ ಮನುಷ್ಯರೆಂಬುದು ಅನೇಕರಿಗೆ ಗೊತ್ತಿಲ್ಲ. ಈತ ಮನಸ್ಸು ಮಾಡಿದರೆ ವಿಕ್ರಮ್ ಶೇಟ್, ಸಲ್ಮಾನ್ ರಶ್ದಿ, ನಾಯ್‍ಪಾಲ್ ತರಹದ ಇಂಗ್ಲಿಷ್ ಲೇಖಕರಾಗಿ ಮೆರೆಯಬಹುದಿತ್ತು. ನಮ್ಮಲ್ಲಿ ಇಂಗ್ಲಿಷ್ ಭಾಷೆಯನ್ನು ಅದರೆಲ್ಲ ಚೆಂದದೊಂದಿಗೆ ಬಳಸಬಲ್ಲ ವ್ಯಕ್ತಿ ಗಿರೀಶ್. ಇಂಗ್ಲಿಷ್ ಲೇಖಕರ ಆದಾಯ, ಖ್ಯಾತಿ, ವೈಭವ ಅನೇಕರಿಗೆ ಗೊತ್ತಿರಲಿಕ್ಕಿಲ್ಲ, ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ. ಬರೆಯುತ್ತಾ ಅವರ ಕನ್ನಡ ಶೈಲಿ ಜನಸಾಮಾನ್ಯರ ಮಾತುಗಳನ್ನು, ಸಾಮಾನ್ಯರ ಮಾತಿನ ಗತ್ತು, ಕಮರನ್ನು ಪಡೆಯುತ್ತದೆ. ಅವರ ‘ತಲೆದಂಡ’ ನಾಟಕದಲ್ಲಿನ ಬಸವಣ್ಣ, ಬಿಜ್ಜಳ ರಾಜ, ಮಂತ್ರಿಯ ಗತ್ತನ್ನೆಲ್ಲ ಬಿಟ್ಟು ಎಲ್ಲ ಮನುಷ್ಯರಂತೆ, ಅಗಾಧ ಸಮಸ್ಯೆಗಳ ಎದುರಿಸುವ ದಿಟ್ಟರಂತೆ ಕಂಡುಬರುತ್ತಾರೆ.

ಇಲ್ಲಿಯ ‘ತಲೆದಂಡ’ ವಸ್ತುವಿಗಿಂತಲೂ ಪವಾಡ ಅರ್ಥಪೂರ್ಣವಾಗಿದೆ. ಹನ್ನೆರಡನೆ ಶತಮಾನದ ಕ್ಷೌರಿಕ ಜಾತಿಗೆ ಸೇರಿದ ವ್ಯಕ್ತಿಯೊಬ್ಬ (ಈತ ಜೈನ ಎಂದು ನಾನು ಓದಿದ್ದೆ) ಬಸವಣ್ಣನವರ ಮಾಂತ್ರಿಕ ಸ್ಪರ್ಶದಿಂದ ದೊರೆಯಾಗುವುದೇ ಅಲ್ಲದೆ, ಪವಾಡವೊಂದನ್ನು ಕಾಣುತ್ತಾನೆ-ಜೋಳ ಮುತ್ತಾಗುವ, ಬಸವಣ್ಣನವರು ತಮ್ಮ ಧಾರಾಳವನ್ನು ಚಾಣಾಕ್ಷತೆಯಿಂದ ಮುಚ್ಚಿಹಾಕುವ ಪವಾಡವಲ್ಲ; ಶತಮಾನಗಳಿಂದ ಕೆಳಜಾತಿಯವರು, ಕೀಳುಜನ ಎನ್ನಿಸಿಕೊಂಡಿದ್ದ, ಎಂದುಕೊಂಡಿದ್ದ ಜನ ಮನುಷ್ಯರಾಗುವ, ವಿಚಾರವಂತರಾಗುವ, ಕಲಿಗಳಾಗುವ, ದೊರೆಗಳಾಗುವ ಪವಾಡ.

…ಈ ನಾಟಕ ಓದುತ್ತಿದ್ದಾಗ ನನ್ನನ್ನು ನೋಡಿಕೊಳ್ಳುವ ಹುಡುಗ ನನ್ನ ಕೋಣೆಗೆ ಬಂದು ಹೇಳಿದ: “ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ಬಂದಿದ್ದಾರೆ!”
“ಆ?  ಏನಂದೆ?” ಅಂದೆ.
“ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ನಿಮ್ಮನ್ನು ನೋಡಲು ಬಂದಿದ್ದಾರೆ.”
“ಛೆ, ಮತ್ತೆ ಕೇಳಿಕೊಂಡು ಬಾ-ಅವರಿರಲಾರರು” ಅಂದೆ. ಆತ ಹೋದ. ಮರುಕ್ಷಣ ಬಂದು ಹೇಳಿದ, “ಹೌದು ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರಂತೆ” ಅಂದ.
ನಾನು ನಕ್ಕೆ, ‘ತಲೆದಂಡ’ದ ಗುಂಗಿನಲ್ಲಿದ್ದ ನಾನು ಎದ್ದು, “ಸ್ವಲ್ಪ ಇರಲು ಹೇಳು” ಎಂದು ಯೋಚಿಸಿದೆ. ಅವರು ಬರಲು ಸಾಧ್ಯವೇ ಇಲ್ಲ. ಆದರೆ ಆ ಹೆಸರನ್ನು ಪೂರ್ತಿ ಬೇರೆಯವರು ಇಟ್ಟುಕೊಳ್ಳುವುದೂ ಸಾಧ್ಯವಿಲ್ಲ. “ಆಕಸ್ಮಾತ್ ಅವರೇ ಬಂದಿದ್ದರೆ?” ಎಂದು ಕೇಳಿಕೊಂಡು ನಕ್ಕೆ. ‘ತಲೆದಂಡ’ದ ಗುಂಗು ತೀವ್ರವಾಯಿತು. ಅನೇಕಾನೇಕ ದೆವ್ವದ, ಅತೀಂದ್ರಿಯ ಕತೆಗಳನ್ನು ಬರೆದ ಮಾಸ್ತಿ ಬಂದೇಬಿಟ್ಟಿದ್ದರೆ? ನಕ್ಕೆ, ಒಂದು ಕ್ಷಣ ಯೋಚಿಸಿದೆ. ಬಾಗಿಲು ತೆರೆದುಕೊಂಡು ಬಂದೇಬಿಟ್ಟರೆ ಗತಿಯೇನೆಂದು ನಾನೇ ಬಾಗಿಲು ತೆರೆದು ನೋಡಿದೆ..,. ಅಲ್ಲಿ..,. ಮಾಸ್ತಿಯವರ ಮೂರನೇ ಅಳಿಯ ಶೇಷಾದ್ರಿ ನಿಂತಿದ್ದರು!
“ಛೆ, ಇದೇನ್ರಿ.,. ಮಾಸ್ತಿ ಅಂತ ನೀವು ಹೇಳಿಕೊಳ್ಳೋದೆ?” ಅಂದೆ.
“ಹಾಗೆ ಹೇಳದಿದ್ದರೆ ನೀವು ನೋಡದಕ್ಕೆ ನಿರಾಕರಿಸ್ತೀರಿ ಅಂತ ಹಾಗಂದೆ” ಅಂದರು.
ಕ್ಷಣದ ತಳಮಳ ತಿಳಿಸಿದೆ. ಅವರು ದೊಡ್ಡದಾಗಿ ನಕ್ಕು. “ನೀವು ಅಂಥದ್ದನ್ನೆಲ್ಲ ನಂಬುವುದಿಲ್ಲವಲ್ಲ?” ಅಂದರು.
“ಒಂದು ಕ್ಷಣ ನಂಬಿಕೆ ಸುಳ್ಳಾದರೆ ಗತಿಯೇನು ಹೇಳಿ?” ಅಂದೆ. ಶೇಷಾದ್ರಿ ದೊಡ್ಡದಾಗಿ ನಕ್ಕು ತಮ್ಮ ಕಷ್ಟ ಹೇಳಿಕೊಳ್ಳತೊಡಗಿದರು.
ನಿಮಗೀಗ ಎಷ್ಟು ವಯಸ್ಸು? ಅಂದೆ. ಎಪ್ಪತ್ತಿರಬಹುದೆ? ಎಪ್ಪತ್ತೈದು?
“ನೀವು ಸತ್ಯಕ್ಕೆ ಹತ್ತಿರ ಇದ್ದೀರಿ” ಎಂದರು. ನಿಗೂಢವಾಗಿ-
‘ತಲೆದಂಡ’ದ ಗುಂಗಿನಲ್ಲಿದ್ದ ನಾನು, ಹನ್ನೆರಡನೆ ಶತಮಾನದ ಬಸವಣ್ಣ, ಅಲ್ಲಮರ ಉಯ್ಯಾಲೆಯಲ್ಲಿದ್ದ ನಾನು ಮಾಸ್ತಿಯವರವರೆಗೆ ಹೀಜಿಕೊಂಡಿದ್ದೆ. ಎದುರು ಕೂತು ಮಾತಾಡುತ್ತಿದ್ದ ಮಾಸ್ತಿಯವರ ಅಳಿಯ ಶೇಷಾದ್ರಿಯವರ ಒಂದು ಮಾತೂ ನನ್ನನ್ನು ತಲುಪಲಿಲ್ಲ.
ಡಿಸೆಂಬರ್ 2, 1990

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...