Homeಮುಖಪುಟ‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

‘ತಲೆದಂಡ’ ಮತ್ತು ಮಾಸ್ತಿ: ಗಿರೀಶ್ ಕಾರ್ನಾಡ್‍ರವರ ನಾಟಕದ ಕುರಿತು ಪಿ.ಲಂಕೇಶ್ ಬರೆದಿದ್ದು ಹೀಗೆ.

ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ.

- Advertisement -
- Advertisement -

ಕನ್ನಡದ ಮೇರು ಲೇಖಕ, ನಾಟಕಕಾರ ಗಿರೀಶ್ ಕಾರ್ನಾಡ್ ನಮ್ಮನ್ನಗಲಿದ್ದಾರೆ. ಇಂಗ್ಲಿಷ್ ಹಿಂದಿಯಲ್ಲೂ ಅತ್ಯುತ್ತಮವಾಗಿ ಬರೆಯಬಲ್ಲವರಾಗಿದ್ದ ಕಾರ್ನಾಡ್, ಕನ್ನಡವನ್ನೇ ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿಸಿಕೊಂಡಿದ್ದರು. ಜ್ಞಾನಪೀಠ ಪುರಸ್ಕೃತರೆಂಬುದಷ್ಟೇ ಅವರ ಹಿರಿಮೆಯಲ್ಲ. ಅವರ ನಾಟಕ ಪ್ರತಿಭೆಯ ಕುರಿತು ಅರಿಯಬೇಕೆಂದರೆ, ಅವರ ತಲೆದಂಡ ನಾಟಕದ ಕುರಿತು ಪಿ.ಲಂಕೇಶ್‍ರವರು 1990ರಲ್ಲಿ ಬರದ ಪುಟ್ಟ ಬರಹ ಓದಬೇಕು. ಪ್ರೊ.ವಿ.ಎಸ್.ಶ್ರೀಧರ್ ಅವರು ಸಂಪಾದಿಸಿರುವ ‘ಸಾಹಿತಿ ಸಾಹಿತ್ಯ ವಿಮರ್ಶೆ’ ಪುಸ್ತಕದಿಂದ ಈ ಬರಹವನ್ನು ಆಯ್ದುಕೊಳ್ಳಲಾಗಿದೆ. 

ಮೇಲಿನದನ್ನು ಬರೆದು ಬೇಸರವಾಗಿರುವಾಗ ಮೊನ್ನೆ ಆದ ಒಂದು ಸಣ್ಣ ಸಂಗತಿ, ತಮಾಷೆಯ ಸಂಗತಿ ಹೇಳುತ್ತೇನೆ. ನಾನು ಒಬ್ಬನೇ ಕೂತು ಅದೇನೋ ಲೆಕ್ಕಾ ಹಾಕುತ್ತಿದೆ. ಗಿರೀಶ್ ಕಾರ್ನಾಡರ ‘ತಲೆದಂಡ’ ನಾಟಕವನ್ನು ಆಗತಾನೇ ಓದಿ ಮುಗಿಸಿದ್ದೆ. ಗಿರೀಶ್ ಕಾರ್ನಡ್ ಎಂಥ ವಿಚಿತ್ರ ಮನುಷ್ಯರೆಂಬುದು ಅನೇಕರಿಗೆ ಗೊತ್ತಿಲ್ಲ. ಈತ ಮನಸ್ಸು ಮಾಡಿದರೆ ವಿಕ್ರಮ್ ಶೇಟ್, ಸಲ್ಮಾನ್ ರಶ್ದಿ, ನಾಯ್‍ಪಾಲ್ ತರಹದ ಇಂಗ್ಲಿಷ್ ಲೇಖಕರಾಗಿ ಮೆರೆಯಬಹುದಿತ್ತು. ನಮ್ಮಲ್ಲಿ ಇಂಗ್ಲಿಷ್ ಭಾಷೆಯನ್ನು ಅದರೆಲ್ಲ ಚೆಂದದೊಂದಿಗೆ ಬಳಸಬಲ್ಲ ವ್ಯಕ್ತಿ ಗಿರೀಶ್. ಇಂಗ್ಲಿಷ್ ಲೇಖಕರ ಆದಾಯ, ಖ್ಯಾತಿ, ವೈಭವ ಅನೇಕರಿಗೆ ಗೊತ್ತಿರಲಿಕ್ಕಿಲ್ಲ, ಕನ್ನಡದಲ್ಲಿ ನೂರು ನಾಟಕ ಬರೆದರೂ ದೊರೆಯದಷ್ಟು ಹಣ ಇಂಗ್ಲಿಷ್ ಕಿರುನಾಟಕದಿಂದ ದೊರೆಯಬಲ್ಲದು. ಆದರೆ ಗಿರೀಶ್ ಅದಕ್ಕೆಲ್ಲ ಆಸೆ ಪಡಲಿಲ್ಲ. ಮತ್ತೆ ಮತ್ತೆ ಕನ್ನಡದಲ್ಲೇ ಬರೆಯುತ್ತಾರೆ. ಬರೆಯುತ್ತಾ ಅವರ ಕನ್ನಡ ಶೈಲಿ ಜನಸಾಮಾನ್ಯರ ಮಾತುಗಳನ್ನು, ಸಾಮಾನ್ಯರ ಮಾತಿನ ಗತ್ತು, ಕಮರನ್ನು ಪಡೆಯುತ್ತದೆ. ಅವರ ‘ತಲೆದಂಡ’ ನಾಟಕದಲ್ಲಿನ ಬಸವಣ್ಣ, ಬಿಜ್ಜಳ ರಾಜ, ಮಂತ್ರಿಯ ಗತ್ತನ್ನೆಲ್ಲ ಬಿಟ್ಟು ಎಲ್ಲ ಮನುಷ್ಯರಂತೆ, ಅಗಾಧ ಸಮಸ್ಯೆಗಳ ಎದುರಿಸುವ ದಿಟ್ಟರಂತೆ ಕಂಡುಬರುತ್ತಾರೆ.

ಇಲ್ಲಿಯ ‘ತಲೆದಂಡ’ ವಸ್ತುವಿಗಿಂತಲೂ ಪವಾಡ ಅರ್ಥಪೂರ್ಣವಾಗಿದೆ. ಹನ್ನೆರಡನೆ ಶತಮಾನದ ಕ್ಷೌರಿಕ ಜಾತಿಗೆ ಸೇರಿದ ವ್ಯಕ್ತಿಯೊಬ್ಬ (ಈತ ಜೈನ ಎಂದು ನಾನು ಓದಿದ್ದೆ) ಬಸವಣ್ಣನವರ ಮಾಂತ್ರಿಕ ಸ್ಪರ್ಶದಿಂದ ದೊರೆಯಾಗುವುದೇ ಅಲ್ಲದೆ, ಪವಾಡವೊಂದನ್ನು ಕಾಣುತ್ತಾನೆ-ಜೋಳ ಮುತ್ತಾಗುವ, ಬಸವಣ್ಣನವರು ತಮ್ಮ ಧಾರಾಳವನ್ನು ಚಾಣಾಕ್ಷತೆಯಿಂದ ಮುಚ್ಚಿಹಾಕುವ ಪವಾಡವಲ್ಲ; ಶತಮಾನಗಳಿಂದ ಕೆಳಜಾತಿಯವರು, ಕೀಳುಜನ ಎನ್ನಿಸಿಕೊಂಡಿದ್ದ, ಎಂದುಕೊಂಡಿದ್ದ ಜನ ಮನುಷ್ಯರಾಗುವ, ವಿಚಾರವಂತರಾಗುವ, ಕಲಿಗಳಾಗುವ, ದೊರೆಗಳಾಗುವ ಪವಾಡ.

…ಈ ನಾಟಕ ಓದುತ್ತಿದ್ದಾಗ ನನ್ನನ್ನು ನೋಡಿಕೊಳ್ಳುವ ಹುಡುಗ ನನ್ನ ಕೋಣೆಗೆ ಬಂದು ಹೇಳಿದ: “ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ಬಂದಿದ್ದಾರೆ!”
“ಆ?  ಏನಂದೆ?” ಅಂದೆ.
“ಮಾಸ್ತಿ ವೆಂಕಟೇಶ ಅಯ್ಯಂಗಾರ್ರು ನಿಮ್ಮನ್ನು ನೋಡಲು ಬಂದಿದ್ದಾರೆ.”
“ಛೆ, ಮತ್ತೆ ಕೇಳಿಕೊಂಡು ಬಾ-ಅವರಿರಲಾರರು” ಅಂದೆ. ಆತ ಹೋದ. ಮರುಕ್ಷಣ ಬಂದು ಹೇಳಿದ, “ಹೌದು ಸಾರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ರಂತೆ” ಅಂದ.
ನಾನು ನಕ್ಕೆ, ‘ತಲೆದಂಡ’ದ ಗುಂಗಿನಲ್ಲಿದ್ದ ನಾನು ಎದ್ದು, “ಸ್ವಲ್ಪ ಇರಲು ಹೇಳು” ಎಂದು ಯೋಚಿಸಿದೆ. ಅವರು ಬರಲು ಸಾಧ್ಯವೇ ಇಲ್ಲ. ಆದರೆ ಆ ಹೆಸರನ್ನು ಪೂರ್ತಿ ಬೇರೆಯವರು ಇಟ್ಟುಕೊಳ್ಳುವುದೂ ಸಾಧ್ಯವಿಲ್ಲ. “ಆಕಸ್ಮಾತ್ ಅವರೇ ಬಂದಿದ್ದರೆ?” ಎಂದು ಕೇಳಿಕೊಂಡು ನಕ್ಕೆ. ‘ತಲೆದಂಡ’ದ ಗುಂಗು ತೀವ್ರವಾಯಿತು. ಅನೇಕಾನೇಕ ದೆವ್ವದ, ಅತೀಂದ್ರಿಯ ಕತೆಗಳನ್ನು ಬರೆದ ಮಾಸ್ತಿ ಬಂದೇಬಿಟ್ಟಿದ್ದರೆ? ನಕ್ಕೆ, ಒಂದು ಕ್ಷಣ ಯೋಚಿಸಿದೆ. ಬಾಗಿಲು ತೆರೆದುಕೊಂಡು ಬಂದೇಬಿಟ್ಟರೆ ಗತಿಯೇನೆಂದು ನಾನೇ ಬಾಗಿಲು ತೆರೆದು ನೋಡಿದೆ..,. ಅಲ್ಲಿ..,. ಮಾಸ್ತಿಯವರ ಮೂರನೇ ಅಳಿಯ ಶೇಷಾದ್ರಿ ನಿಂತಿದ್ದರು!
“ಛೆ, ಇದೇನ್ರಿ.,. ಮಾಸ್ತಿ ಅಂತ ನೀವು ಹೇಳಿಕೊಳ್ಳೋದೆ?” ಅಂದೆ.
“ಹಾಗೆ ಹೇಳದಿದ್ದರೆ ನೀವು ನೋಡದಕ್ಕೆ ನಿರಾಕರಿಸ್ತೀರಿ ಅಂತ ಹಾಗಂದೆ” ಅಂದರು.
ಕ್ಷಣದ ತಳಮಳ ತಿಳಿಸಿದೆ. ಅವರು ದೊಡ್ಡದಾಗಿ ನಕ್ಕು. “ನೀವು ಅಂಥದ್ದನ್ನೆಲ್ಲ ನಂಬುವುದಿಲ್ಲವಲ್ಲ?” ಅಂದರು.
“ಒಂದು ಕ್ಷಣ ನಂಬಿಕೆ ಸುಳ್ಳಾದರೆ ಗತಿಯೇನು ಹೇಳಿ?” ಅಂದೆ. ಶೇಷಾದ್ರಿ ದೊಡ್ಡದಾಗಿ ನಕ್ಕು ತಮ್ಮ ಕಷ್ಟ ಹೇಳಿಕೊಳ್ಳತೊಡಗಿದರು.
ನಿಮಗೀಗ ಎಷ್ಟು ವಯಸ್ಸು? ಅಂದೆ. ಎಪ್ಪತ್ತಿರಬಹುದೆ? ಎಪ್ಪತ್ತೈದು?
“ನೀವು ಸತ್ಯಕ್ಕೆ ಹತ್ತಿರ ಇದ್ದೀರಿ” ಎಂದರು. ನಿಗೂಢವಾಗಿ-
‘ತಲೆದಂಡ’ದ ಗುಂಗಿನಲ್ಲಿದ್ದ ನಾನು, ಹನ್ನೆರಡನೆ ಶತಮಾನದ ಬಸವಣ್ಣ, ಅಲ್ಲಮರ ಉಯ್ಯಾಲೆಯಲ್ಲಿದ್ದ ನಾನು ಮಾಸ್ತಿಯವರವರೆಗೆ ಹೀಜಿಕೊಂಡಿದ್ದೆ. ಎದುರು ಕೂತು ಮಾತಾಡುತ್ತಿದ್ದ ಮಾಸ್ತಿಯವರ ಅಳಿಯ ಶೇಷಾದ್ರಿಯವರ ಒಂದು ಮಾತೂ ನನ್ನನ್ನು ತಲುಪಲಿಲ್ಲ.
ಡಿಸೆಂಬರ್ 2, 1990

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...