Homeಮುಖಪುಟಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು.

- Advertisement -
- Advertisement -

ಕನ್ನಡದ ಕೆಲವು ತಲೆಮಾರುಗಳನ್ನು ಪ್ರಭಾವಿಸಿದ ಪ್ರತಿಭಾನ್ವಿತ ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್‌ರವರ ಜನ್ಮದಿನ ಇಂದು. ಅವರ ನೆನಪಿನಲ್ಲಿ ಅವರ ಟೀಕೆಟಿಪ್ಪಣಿ ಪುಸ್ತಕದಿಂದ ಕೆಲ ಬರಹಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಈಗ ಯಾವುದನ್ನು ನೆನೆಯಲಿ? ಯಾವುದು ಮೊದಲು? ಯಾವುದು ಆಮೇಲೆ?

ನೀವು ನನ್ನನ್ನು ದಯವಿಟ್ಟು ಕ್ಷಮಿಸಿ. ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು ಅಥವಾ ನನಗಿಂತಲೂ ಅನಾಮಿಕರಾಗಿದ್ದು ನೆಮ್ಮೆದಿ, ಆತಂಕ ಎರಡನ್ನೂ ಅರಿಯದೇ ಜೀವಿಸುತ್ತಿರಬಹುದು.ಆದ್ದರಿಂದ ಈ ಹುಟ್ಟುಹಬ್ಬದ ಬಗ್ಗೆಯಾಗಲೀ, ನನ್ನ ಕಳೆದುಹೋದ ಮತ್ತು ಎಂದೆಂದಿಗೂ ನನಗೆ ಅಂಟಿಕೊಂಡೇ ಇರುವ ಐವತ್ತು ವರ್ಷದ ಬಗ್ಗೆಯಾಗಲೀ ಧ್ವನಿ ಎತ್ತರಿಸಿ ಮಾತಾಡಿದೊಡನೆ, ಬೊಬ್ಬೆ ಹಾಕೊದೊಡನೆ ಎಲ್ಲ ಅಸಹಜವಾಗುತ್ತದೆ.

ಅಹಂಕಾರಕ್ಕೆ ಅನೇಕ ರೂಪಗಳಿರುತ್ತವೆ. ನನ್ನ ನೆಮ್ಮೆದಿಯನ್ನು ನಾನೇ ಕಲಕುವ ಮತ್ತು ಹೊಸ ಬಗೆಯ ವಿಶ್ವಾಸ ಹುಡುಕುವ ಚಟ ಮತ್ತು ಛಲ ನನ್ನಿಂದ ಮರೆಯಾಗದಿರಲಿ.

***

ಆ ಓಲಗದ ಸದ್ದು ಯಾವ ನೋವನ್ನು, ಯಾರ ಸಾವನ್ನು, ಎಷ್ಟು ಹೃದಯಗಳ ಆಕ್ರಂದನವನ್ನು ಸೂಚಿಸುತ್ತಿದೆ? ಅದು ದುಃಖದ ಓಲಗ ಎಷ್ಟು ಜನರ ಸಂತೋಷವನ್ನು ಸಾವಿನ ಬಗ್ಗೆ ಅಟ್ಟಹಾಸವನು, ರೋಷದ ಅಂತಿಮವನ್ನು, ಸೇಡಿನ ಪ್ರತಿಫಲನವನ್ನು ಮಂಡಿಸುತ್ತಿದೆ?

ಆ ಓಲಗದ ಸದ್ದು ಯಾವ ಮಾಯವಾದ ಕ್ರಿಯಾಶೀಲತೆಯನ್ನು, ಕೊನೆಗೊಂಡ ಕನಸನ್ನು ಸೂಚಿಸುತ್ತಿದೆ?

***

ಗಾಂಧೀಜಿಗೆ ಗೊತ್ತಿತ್ತು. ಆತ್ಮವನ್ನು ಕಳೆದುಕೊಂಡ ರಾಜಕಾರಣಿ ತನ್ನನ್ನು ರಕ್ಷಿಸಲು ಪೋಲೀಸು ಪಡೆಯನ್ನು ಹೊಂದಿರಬೇಕಾಗುತ್ತದೆ.

ಬಾಪೂಜಿ ಎಂದೂ ಅಂಗ ರಕ್ಷಕರನ್ನು ಹೊಂದಲಿಲ್ಲ.

ಸಿದ್ಧಾರ್ಥನನ್ನು ಚಿಂತೆಗೀಡು ಮಾಡಿ, ಬುದ್ಧನನ್ನಾಗಿಸಿದ ಆ ಸದ್ದು ಇವರಿಗೆ ಯಾವುದಾದರೂ ಅರ್ಥವನ್ನು ತಲುಪಿಸುತ್ತಿದೆಯೇ? ಬಾಪೂಜಿಯನ್ನು ಮಹಾತ್ಮನನ್ನಾಗಿ ಮಾಡುವಲ್ಲಿ ಯಶಸ್ವಿಯಾದ ಆ ಸದ್ದು ಕಿಂಚಿತ್ತಾದರೂ ನಮ್ಮನ್ನು ಸ್ಪರ್ಶಿಸಬೇಡವೇ?

ಆ ಓಲಗ ಯಾರ ಸಾವನ್ನು, ನೋವನ್ನು, ಅನ್ಯಾಯವನ್ನು, ಯಾವ ಮಾಯವಾದ ಕನಸು, ಕ್ರಿಯಾಶೀಲತೆಯನ್ನು, ಯಾವ ಭ್ರಷ್ಟತೆ, ಹುಂಬತನವನ್ನು , ಯಾವ ದ್ವೀಪವನ್ನು, ಸ್ವಾರ್ಥದ ಪರಿಣಾಮವನ್ನು ವ್ಯಕ್ತಪಡಿಸುತ್ತಿವೆ?

ಯೋಚಿಸೋಣ.

***

ಇಲ್ಲಿಯ ರೈತ, ಗುಡಿಗಾರ, ಕಮ್ಮಾರ, ಕುಂಬಾರ ಎಲ್ಲರೂ ಜಾತಿಪದ್ಧತಿಯ ನರಕದಲ್ಲಿ ಬಿದ್ದು ಬಡತನ, ನಿರುದ್ಯೊಗದಲ್ಲಿ ನಶಿಸಿ ಹೋಗುತ್ತಿದ್ದಾರೆ. ಅಕ್ಷರ ಜ್ಞಾನವಿದ್ದ ಒಂದೇ ಒಂದು ಗುಂಪು ಇಲ್ಲಿಯ ರೈತನ ನೇಗಿಲು, ಕಮ್ಮಾರರ ತಿದಿ, ಗೃಹಿಣಿಯ ಬೀಸುವ ಕಲ್ಲು, ಕೊಟ್ಟಣ ಮುಂತಾದುವನ್ನು ಉತ್ತಮಪಡಿಸಲು ಬಡವನ ಶ್ರಮವನ್ನು ಕಮ್ಮಿ ಮಾಡಲು ಯತ್ನಿಸಲಿಲ್ಲ. ಅಷ್ಟೇ ಏಕೆ, ಇವೆಲ್ಲವನ್ನೂ ಮೀರಿ ಇಡೀ ದೇಶಕ್ಕೆ ಕ್ರಾಂತಿಕಾರಿ ಎನ್ನಿಸಬಹುದಾದ ಪೆನ್ನು, ಪೇಪರ್, ಸ್ಲೇಟನ್ನು ಕಂಡುಹಿಡಿಯಲಿಲ್ಲ. ಕೆಲವರ ಮೇಲುಜಾತಿಯ ಮಿದುಳುಗಳು ಲಕ್ಷಾಂತರ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಯತ್ನಿಸಿ, ಪೇಪರಿಗೆ ಬದಲು ದಾಖಲೆಯ ಹಾಳೆಗಳಾಗಲು ಯತ್ನಿಸಿ ಸತ್ತುಹೋದ ಒಬ್ಬ ವ್ಯಕ್ತಿಯೊಂದಿಗೆ ತಿಳಿವು ಕೂಡಾ ಸಾಯುತ್ತಾ ಹೋಯಿತು. ಕ್ರೌರ್ಯ ಮತ್ತು ಜಡತ್ವ ಮಾತ್ರ ಉಳಿಯಿತು. ಕ್ರೌರ್ಯ ಮತ್ತು ಜಡತ್ವ ಇರುವ ಮನುಷ್ಯನಲ್ಲಿ ಪ್ರೇಮ, ಸಹಾನುಭೂತಿ, ಪಾಳುದಾರಿಕೆ ಉಳಿಯುವುದಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...