Homeಮುಖಪುಟಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು.

- Advertisement -
- Advertisement -

ಕನ್ನಡದ ಕೆಲವು ತಲೆಮಾರುಗಳನ್ನು ಪ್ರಭಾವಿಸಿದ ಪ್ರತಿಭಾನ್ವಿತ ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್‌ರವರ ಜನ್ಮದಿನ ಇಂದು. ಅವರ ನೆನಪಿನಲ್ಲಿ ಅವರ ಟೀಕೆಟಿಪ್ಪಣಿ ಪುಸ್ತಕದಿಂದ ಕೆಲ ಬರಹಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಈಗ ಯಾವುದನ್ನು ನೆನೆಯಲಿ? ಯಾವುದು ಮೊದಲು? ಯಾವುದು ಆಮೇಲೆ?

ನೀವು ನನ್ನನ್ನು ದಯವಿಟ್ಟು ಕ್ಷಮಿಸಿ. ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು ಅಥವಾ ನನಗಿಂತಲೂ ಅನಾಮಿಕರಾಗಿದ್ದು ನೆಮ್ಮೆದಿ, ಆತಂಕ ಎರಡನ್ನೂ ಅರಿಯದೇ ಜೀವಿಸುತ್ತಿರಬಹುದು.ಆದ್ದರಿಂದ ಈ ಹುಟ್ಟುಹಬ್ಬದ ಬಗ್ಗೆಯಾಗಲೀ, ನನ್ನ ಕಳೆದುಹೋದ ಮತ್ತು ಎಂದೆಂದಿಗೂ ನನಗೆ ಅಂಟಿಕೊಂಡೇ ಇರುವ ಐವತ್ತು ವರ್ಷದ ಬಗ್ಗೆಯಾಗಲೀ ಧ್ವನಿ ಎತ್ತರಿಸಿ ಮಾತಾಡಿದೊಡನೆ, ಬೊಬ್ಬೆ ಹಾಕೊದೊಡನೆ ಎಲ್ಲ ಅಸಹಜವಾಗುತ್ತದೆ.

ಅಹಂಕಾರಕ್ಕೆ ಅನೇಕ ರೂಪಗಳಿರುತ್ತವೆ. ನನ್ನ ನೆಮ್ಮೆದಿಯನ್ನು ನಾನೇ ಕಲಕುವ ಮತ್ತು ಹೊಸ ಬಗೆಯ ವಿಶ್ವಾಸ ಹುಡುಕುವ ಚಟ ಮತ್ತು ಛಲ ನನ್ನಿಂದ ಮರೆಯಾಗದಿರಲಿ.

***

ಆ ಓಲಗದ ಸದ್ದು ಯಾವ ನೋವನ್ನು, ಯಾರ ಸಾವನ್ನು, ಎಷ್ಟು ಹೃದಯಗಳ ಆಕ್ರಂದನವನ್ನು ಸೂಚಿಸುತ್ತಿದೆ? ಅದು ದುಃಖದ ಓಲಗ ಎಷ್ಟು ಜನರ ಸಂತೋಷವನ್ನು ಸಾವಿನ ಬಗ್ಗೆ ಅಟ್ಟಹಾಸವನು, ರೋಷದ ಅಂತಿಮವನ್ನು, ಸೇಡಿನ ಪ್ರತಿಫಲನವನ್ನು ಮಂಡಿಸುತ್ತಿದೆ?

ಆ ಓಲಗದ ಸದ್ದು ಯಾವ ಮಾಯವಾದ ಕ್ರಿಯಾಶೀಲತೆಯನ್ನು, ಕೊನೆಗೊಂಡ ಕನಸನ್ನು ಸೂಚಿಸುತ್ತಿದೆ?

***

ಗಾಂಧೀಜಿಗೆ ಗೊತ್ತಿತ್ತು. ಆತ್ಮವನ್ನು ಕಳೆದುಕೊಂಡ ರಾಜಕಾರಣಿ ತನ್ನನ್ನು ರಕ್ಷಿಸಲು ಪೋಲೀಸು ಪಡೆಯನ್ನು ಹೊಂದಿರಬೇಕಾಗುತ್ತದೆ.

ಬಾಪೂಜಿ ಎಂದೂ ಅಂಗ ರಕ್ಷಕರನ್ನು ಹೊಂದಲಿಲ್ಲ.

ಸಿದ್ಧಾರ್ಥನನ್ನು ಚಿಂತೆಗೀಡು ಮಾಡಿ, ಬುದ್ಧನನ್ನಾಗಿಸಿದ ಆ ಸದ್ದು ಇವರಿಗೆ ಯಾವುದಾದರೂ ಅರ್ಥವನ್ನು ತಲುಪಿಸುತ್ತಿದೆಯೇ? ಬಾಪೂಜಿಯನ್ನು ಮಹಾತ್ಮನನ್ನಾಗಿ ಮಾಡುವಲ್ಲಿ ಯಶಸ್ವಿಯಾದ ಆ ಸದ್ದು ಕಿಂಚಿತ್ತಾದರೂ ನಮ್ಮನ್ನು ಸ್ಪರ್ಶಿಸಬೇಡವೇ?

ಆ ಓಲಗ ಯಾರ ಸಾವನ್ನು, ನೋವನ್ನು, ಅನ್ಯಾಯವನ್ನು, ಯಾವ ಮಾಯವಾದ ಕನಸು, ಕ್ರಿಯಾಶೀಲತೆಯನ್ನು, ಯಾವ ಭ್ರಷ್ಟತೆ, ಹುಂಬತನವನ್ನು , ಯಾವ ದ್ವೀಪವನ್ನು, ಸ್ವಾರ್ಥದ ಪರಿಣಾಮವನ್ನು ವ್ಯಕ್ತಪಡಿಸುತ್ತಿವೆ?

ಯೋಚಿಸೋಣ.

***

ಇಲ್ಲಿಯ ರೈತ, ಗುಡಿಗಾರ, ಕಮ್ಮಾರ, ಕುಂಬಾರ ಎಲ್ಲರೂ ಜಾತಿಪದ್ಧತಿಯ ನರಕದಲ್ಲಿ ಬಿದ್ದು ಬಡತನ, ನಿರುದ್ಯೊಗದಲ್ಲಿ ನಶಿಸಿ ಹೋಗುತ್ತಿದ್ದಾರೆ. ಅಕ್ಷರ ಜ್ಞಾನವಿದ್ದ ಒಂದೇ ಒಂದು ಗುಂಪು ಇಲ್ಲಿಯ ರೈತನ ನೇಗಿಲು, ಕಮ್ಮಾರರ ತಿದಿ, ಗೃಹಿಣಿಯ ಬೀಸುವ ಕಲ್ಲು, ಕೊಟ್ಟಣ ಮುಂತಾದುವನ್ನು ಉತ್ತಮಪಡಿಸಲು ಬಡವನ ಶ್ರಮವನ್ನು ಕಮ್ಮಿ ಮಾಡಲು ಯತ್ನಿಸಲಿಲ್ಲ. ಅಷ್ಟೇ ಏಕೆ, ಇವೆಲ್ಲವನ್ನೂ ಮೀರಿ ಇಡೀ ದೇಶಕ್ಕೆ ಕ್ರಾಂತಿಕಾರಿ ಎನ್ನಿಸಬಹುದಾದ ಪೆನ್ನು, ಪೇಪರ್, ಸ್ಲೇಟನ್ನು ಕಂಡುಹಿಡಿಯಲಿಲ್ಲ. ಕೆಲವರ ಮೇಲುಜಾತಿಯ ಮಿದುಳುಗಳು ಲಕ್ಷಾಂತರ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಯತ್ನಿಸಿ, ಪೇಪರಿಗೆ ಬದಲು ದಾಖಲೆಯ ಹಾಳೆಗಳಾಗಲು ಯತ್ನಿಸಿ ಸತ್ತುಹೋದ ಒಬ್ಬ ವ್ಯಕ್ತಿಯೊಂದಿಗೆ ತಿಳಿವು ಕೂಡಾ ಸಾಯುತ್ತಾ ಹೋಯಿತು. ಕ್ರೌರ್ಯ ಮತ್ತು ಜಡತ್ವ ಮಾತ್ರ ಉಳಿಯಿತು. ಕ್ರೌರ್ಯ ಮತ್ತು ಜಡತ್ವ ಇರುವ ಮನುಷ್ಯನಲ್ಲಿ ಪ್ರೇಮ, ಸಹಾನುಭೂತಿ, ಪಾಳುದಾರಿಕೆ ಉಳಿಯುವುದಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...