Homeಮುಖಪುಟಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು.

- Advertisement -
- Advertisement -

ಕನ್ನಡದ ಕೆಲವು ತಲೆಮಾರುಗಳನ್ನು ಪ್ರಭಾವಿಸಿದ ಪ್ರತಿಭಾನ್ವಿತ ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್‌ರವರ ಜನ್ಮದಿನ ಇಂದು. ಅವರ ನೆನಪಿನಲ್ಲಿ ಅವರ ಟೀಕೆಟಿಪ್ಪಣಿ ಪುಸ್ತಕದಿಂದ ಕೆಲ ಬರಹಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಈಗ ಯಾವುದನ್ನು ನೆನೆಯಲಿ? ಯಾವುದು ಮೊದಲು? ಯಾವುದು ಆಮೇಲೆ?

ನೀವು ನನ್ನನ್ನು ದಯವಿಟ್ಟು ಕ್ಷಮಿಸಿ. ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು ಅಥವಾ ನನಗಿಂತಲೂ ಅನಾಮಿಕರಾಗಿದ್ದು ನೆಮ್ಮೆದಿ, ಆತಂಕ ಎರಡನ್ನೂ ಅರಿಯದೇ ಜೀವಿಸುತ್ತಿರಬಹುದು.ಆದ್ದರಿಂದ ಈ ಹುಟ್ಟುಹಬ್ಬದ ಬಗ್ಗೆಯಾಗಲೀ, ನನ್ನ ಕಳೆದುಹೋದ ಮತ್ತು ಎಂದೆಂದಿಗೂ ನನಗೆ ಅಂಟಿಕೊಂಡೇ ಇರುವ ಐವತ್ತು ವರ್ಷದ ಬಗ್ಗೆಯಾಗಲೀ ಧ್ವನಿ ಎತ್ತರಿಸಿ ಮಾತಾಡಿದೊಡನೆ, ಬೊಬ್ಬೆ ಹಾಕೊದೊಡನೆ ಎಲ್ಲ ಅಸಹಜವಾಗುತ್ತದೆ.

ಅಹಂಕಾರಕ್ಕೆ ಅನೇಕ ರೂಪಗಳಿರುತ್ತವೆ. ನನ್ನ ನೆಮ್ಮೆದಿಯನ್ನು ನಾನೇ ಕಲಕುವ ಮತ್ತು ಹೊಸ ಬಗೆಯ ವಿಶ್ವಾಸ ಹುಡುಕುವ ಚಟ ಮತ್ತು ಛಲ ನನ್ನಿಂದ ಮರೆಯಾಗದಿರಲಿ.

***

ಆ ಓಲಗದ ಸದ್ದು ಯಾವ ನೋವನ್ನು, ಯಾರ ಸಾವನ್ನು, ಎಷ್ಟು ಹೃದಯಗಳ ಆಕ್ರಂದನವನ್ನು ಸೂಚಿಸುತ್ತಿದೆ? ಅದು ದುಃಖದ ಓಲಗ ಎಷ್ಟು ಜನರ ಸಂತೋಷವನ್ನು ಸಾವಿನ ಬಗ್ಗೆ ಅಟ್ಟಹಾಸವನು, ರೋಷದ ಅಂತಿಮವನ್ನು, ಸೇಡಿನ ಪ್ರತಿಫಲನವನ್ನು ಮಂಡಿಸುತ್ತಿದೆ?

ಆ ಓಲಗದ ಸದ್ದು ಯಾವ ಮಾಯವಾದ ಕ್ರಿಯಾಶೀಲತೆಯನ್ನು, ಕೊನೆಗೊಂಡ ಕನಸನ್ನು ಸೂಚಿಸುತ್ತಿದೆ?

***

ಗಾಂಧೀಜಿಗೆ ಗೊತ್ತಿತ್ತು. ಆತ್ಮವನ್ನು ಕಳೆದುಕೊಂಡ ರಾಜಕಾರಣಿ ತನ್ನನ್ನು ರಕ್ಷಿಸಲು ಪೋಲೀಸು ಪಡೆಯನ್ನು ಹೊಂದಿರಬೇಕಾಗುತ್ತದೆ.

ಬಾಪೂಜಿ ಎಂದೂ ಅಂಗ ರಕ್ಷಕರನ್ನು ಹೊಂದಲಿಲ್ಲ.

ಸಿದ್ಧಾರ್ಥನನ್ನು ಚಿಂತೆಗೀಡು ಮಾಡಿ, ಬುದ್ಧನನ್ನಾಗಿಸಿದ ಆ ಸದ್ದು ಇವರಿಗೆ ಯಾವುದಾದರೂ ಅರ್ಥವನ್ನು ತಲುಪಿಸುತ್ತಿದೆಯೇ? ಬಾಪೂಜಿಯನ್ನು ಮಹಾತ್ಮನನ್ನಾಗಿ ಮಾಡುವಲ್ಲಿ ಯಶಸ್ವಿಯಾದ ಆ ಸದ್ದು ಕಿಂಚಿತ್ತಾದರೂ ನಮ್ಮನ್ನು ಸ್ಪರ್ಶಿಸಬೇಡವೇ?

ಆ ಓಲಗ ಯಾರ ಸಾವನ್ನು, ನೋವನ್ನು, ಅನ್ಯಾಯವನ್ನು, ಯಾವ ಮಾಯವಾದ ಕನಸು, ಕ್ರಿಯಾಶೀಲತೆಯನ್ನು, ಯಾವ ಭ್ರಷ್ಟತೆ, ಹುಂಬತನವನ್ನು , ಯಾವ ದ್ವೀಪವನ್ನು, ಸ್ವಾರ್ಥದ ಪರಿಣಾಮವನ್ನು ವ್ಯಕ್ತಪಡಿಸುತ್ತಿವೆ?

ಯೋಚಿಸೋಣ.

***

ಇಲ್ಲಿಯ ರೈತ, ಗುಡಿಗಾರ, ಕಮ್ಮಾರ, ಕುಂಬಾರ ಎಲ್ಲರೂ ಜಾತಿಪದ್ಧತಿಯ ನರಕದಲ್ಲಿ ಬಿದ್ದು ಬಡತನ, ನಿರುದ್ಯೊಗದಲ್ಲಿ ನಶಿಸಿ ಹೋಗುತ್ತಿದ್ದಾರೆ. ಅಕ್ಷರ ಜ್ಞಾನವಿದ್ದ ಒಂದೇ ಒಂದು ಗುಂಪು ಇಲ್ಲಿಯ ರೈತನ ನೇಗಿಲು, ಕಮ್ಮಾರರ ತಿದಿ, ಗೃಹಿಣಿಯ ಬೀಸುವ ಕಲ್ಲು, ಕೊಟ್ಟಣ ಮುಂತಾದುವನ್ನು ಉತ್ತಮಪಡಿಸಲು ಬಡವನ ಶ್ರಮವನ್ನು ಕಮ್ಮಿ ಮಾಡಲು ಯತ್ನಿಸಲಿಲ್ಲ. ಅಷ್ಟೇ ಏಕೆ, ಇವೆಲ್ಲವನ್ನೂ ಮೀರಿ ಇಡೀ ದೇಶಕ್ಕೆ ಕ್ರಾಂತಿಕಾರಿ ಎನ್ನಿಸಬಹುದಾದ ಪೆನ್ನು, ಪೇಪರ್, ಸ್ಲೇಟನ್ನು ಕಂಡುಹಿಡಿಯಲಿಲ್ಲ. ಕೆಲವರ ಮೇಲುಜಾತಿಯ ಮಿದುಳುಗಳು ಲಕ್ಷಾಂತರ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಯತ್ನಿಸಿ, ಪೇಪರಿಗೆ ಬದಲು ದಾಖಲೆಯ ಹಾಳೆಗಳಾಗಲು ಯತ್ನಿಸಿ ಸತ್ತುಹೋದ ಒಬ್ಬ ವ್ಯಕ್ತಿಯೊಂದಿಗೆ ತಿಳಿವು ಕೂಡಾ ಸಾಯುತ್ತಾ ಹೋಯಿತು. ಕ್ರೌರ್ಯ ಮತ್ತು ಜಡತ್ವ ಮಾತ್ರ ಉಳಿಯಿತು. ಕ್ರೌರ್ಯ ಮತ್ತು ಜಡತ್ವ ಇರುವ ಮನುಷ್ಯನಲ್ಲಿ ಪ್ರೇಮ, ಸಹಾನುಭೂತಿ, ಪಾಳುದಾರಿಕೆ ಉಳಿಯುವುದಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...