Homeಮುಖಪುಟಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು.

- Advertisement -
- Advertisement -

ಕನ್ನಡದ ಕೆಲವು ತಲೆಮಾರುಗಳನ್ನು ಪ್ರಭಾವಿಸಿದ ಪ್ರತಿಭಾನ್ವಿತ ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್‌ರವರ ಜನ್ಮದಿನ ಇಂದು. ಅವರ ನೆನಪಿನಲ್ಲಿ ಅವರ ಟೀಕೆಟಿಪ್ಪಣಿ ಪುಸ್ತಕದಿಂದ ಕೆಲ ಬರಹಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಈಗ ಯಾವುದನ್ನು ನೆನೆಯಲಿ? ಯಾವುದು ಮೊದಲು? ಯಾವುದು ಆಮೇಲೆ?

ನೀವು ನನ್ನನ್ನು ದಯವಿಟ್ಟು ಕ್ಷಮಿಸಿ. ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು ಅಥವಾ ನನಗಿಂತಲೂ ಅನಾಮಿಕರಾಗಿದ್ದು ನೆಮ್ಮೆದಿ, ಆತಂಕ ಎರಡನ್ನೂ ಅರಿಯದೇ ಜೀವಿಸುತ್ತಿರಬಹುದು.ಆದ್ದರಿಂದ ಈ ಹುಟ್ಟುಹಬ್ಬದ ಬಗ್ಗೆಯಾಗಲೀ, ನನ್ನ ಕಳೆದುಹೋದ ಮತ್ತು ಎಂದೆಂದಿಗೂ ನನಗೆ ಅಂಟಿಕೊಂಡೇ ಇರುವ ಐವತ್ತು ವರ್ಷದ ಬಗ್ಗೆಯಾಗಲೀ ಧ್ವನಿ ಎತ್ತರಿಸಿ ಮಾತಾಡಿದೊಡನೆ, ಬೊಬ್ಬೆ ಹಾಕೊದೊಡನೆ ಎಲ್ಲ ಅಸಹಜವಾಗುತ್ತದೆ.

ಅಹಂಕಾರಕ್ಕೆ ಅನೇಕ ರೂಪಗಳಿರುತ್ತವೆ. ನನ್ನ ನೆಮ್ಮೆದಿಯನ್ನು ನಾನೇ ಕಲಕುವ ಮತ್ತು ಹೊಸ ಬಗೆಯ ವಿಶ್ವಾಸ ಹುಡುಕುವ ಚಟ ಮತ್ತು ಛಲ ನನ್ನಿಂದ ಮರೆಯಾಗದಿರಲಿ.

***

ಆ ಓಲಗದ ಸದ್ದು ಯಾವ ನೋವನ್ನು, ಯಾರ ಸಾವನ್ನು, ಎಷ್ಟು ಹೃದಯಗಳ ಆಕ್ರಂದನವನ್ನು ಸೂಚಿಸುತ್ತಿದೆ? ಅದು ದುಃಖದ ಓಲಗ ಎಷ್ಟು ಜನರ ಸಂತೋಷವನ್ನು ಸಾವಿನ ಬಗ್ಗೆ ಅಟ್ಟಹಾಸವನು, ರೋಷದ ಅಂತಿಮವನ್ನು, ಸೇಡಿನ ಪ್ರತಿಫಲನವನ್ನು ಮಂಡಿಸುತ್ತಿದೆ?

ಆ ಓಲಗದ ಸದ್ದು ಯಾವ ಮಾಯವಾದ ಕ್ರಿಯಾಶೀಲತೆಯನ್ನು, ಕೊನೆಗೊಂಡ ಕನಸನ್ನು ಸೂಚಿಸುತ್ತಿದೆ?

***

ಗಾಂಧೀಜಿಗೆ ಗೊತ್ತಿತ್ತು. ಆತ್ಮವನ್ನು ಕಳೆದುಕೊಂಡ ರಾಜಕಾರಣಿ ತನ್ನನ್ನು ರಕ್ಷಿಸಲು ಪೋಲೀಸು ಪಡೆಯನ್ನು ಹೊಂದಿರಬೇಕಾಗುತ್ತದೆ.

ಬಾಪೂಜಿ ಎಂದೂ ಅಂಗ ರಕ್ಷಕರನ್ನು ಹೊಂದಲಿಲ್ಲ.

ಸಿದ್ಧಾರ್ಥನನ್ನು ಚಿಂತೆಗೀಡು ಮಾಡಿ, ಬುದ್ಧನನ್ನಾಗಿಸಿದ ಆ ಸದ್ದು ಇವರಿಗೆ ಯಾವುದಾದರೂ ಅರ್ಥವನ್ನು ತಲುಪಿಸುತ್ತಿದೆಯೇ? ಬಾಪೂಜಿಯನ್ನು ಮಹಾತ್ಮನನ್ನಾಗಿ ಮಾಡುವಲ್ಲಿ ಯಶಸ್ವಿಯಾದ ಆ ಸದ್ದು ಕಿಂಚಿತ್ತಾದರೂ ನಮ್ಮನ್ನು ಸ್ಪರ್ಶಿಸಬೇಡವೇ?

ಆ ಓಲಗ ಯಾರ ಸಾವನ್ನು, ನೋವನ್ನು, ಅನ್ಯಾಯವನ್ನು, ಯಾವ ಮಾಯವಾದ ಕನಸು, ಕ್ರಿಯಾಶೀಲತೆಯನ್ನು, ಯಾವ ಭ್ರಷ್ಟತೆ, ಹುಂಬತನವನ್ನು , ಯಾವ ದ್ವೀಪವನ್ನು, ಸ್ವಾರ್ಥದ ಪರಿಣಾಮವನ್ನು ವ್ಯಕ್ತಪಡಿಸುತ್ತಿವೆ?

ಯೋಚಿಸೋಣ.

***

ಇಲ್ಲಿಯ ರೈತ, ಗುಡಿಗಾರ, ಕಮ್ಮಾರ, ಕುಂಬಾರ ಎಲ್ಲರೂ ಜಾತಿಪದ್ಧತಿಯ ನರಕದಲ್ಲಿ ಬಿದ್ದು ಬಡತನ, ನಿರುದ್ಯೊಗದಲ್ಲಿ ನಶಿಸಿ ಹೋಗುತ್ತಿದ್ದಾರೆ. ಅಕ್ಷರ ಜ್ಞಾನವಿದ್ದ ಒಂದೇ ಒಂದು ಗುಂಪು ಇಲ್ಲಿಯ ರೈತನ ನೇಗಿಲು, ಕಮ್ಮಾರರ ತಿದಿ, ಗೃಹಿಣಿಯ ಬೀಸುವ ಕಲ್ಲು, ಕೊಟ್ಟಣ ಮುಂತಾದುವನ್ನು ಉತ್ತಮಪಡಿಸಲು ಬಡವನ ಶ್ರಮವನ್ನು ಕಮ್ಮಿ ಮಾಡಲು ಯತ್ನಿಸಲಿಲ್ಲ. ಅಷ್ಟೇ ಏಕೆ, ಇವೆಲ್ಲವನ್ನೂ ಮೀರಿ ಇಡೀ ದೇಶಕ್ಕೆ ಕ್ರಾಂತಿಕಾರಿ ಎನ್ನಿಸಬಹುದಾದ ಪೆನ್ನು, ಪೇಪರ್, ಸ್ಲೇಟನ್ನು ಕಂಡುಹಿಡಿಯಲಿಲ್ಲ. ಕೆಲವರ ಮೇಲುಜಾತಿಯ ಮಿದುಳುಗಳು ಲಕ್ಷಾಂತರ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಯತ್ನಿಸಿ, ಪೇಪರಿಗೆ ಬದಲು ದಾಖಲೆಯ ಹಾಳೆಗಳಾಗಲು ಯತ್ನಿಸಿ ಸತ್ತುಹೋದ ಒಬ್ಬ ವ್ಯಕ್ತಿಯೊಂದಿಗೆ ತಿಳಿವು ಕೂಡಾ ಸಾಯುತ್ತಾ ಹೋಯಿತು. ಕ್ರೌರ್ಯ ಮತ್ತು ಜಡತ್ವ ಮಾತ್ರ ಉಳಿಯಿತು. ಕ್ರೌರ್ಯ ಮತ್ತು ಜಡತ್ವ ಇರುವ ಮನುಷ್ಯನಲ್ಲಿ ಪ್ರೇಮ, ಸಹಾನುಭೂತಿ, ಪಾಳುದಾರಿಕೆ ಉಳಿಯುವುದಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...